ಡೆನ್ಮಾರ್ಕ್‌ ಓಪನ್‌: ವಿಶ್ವ ನಂ.1 ವಿಕ್ಟರ್‌ಗೆ ಶ್ರೀಕಾಂತ್‌ ಆಘಾತ


Team Udayavani, Oct 22, 2017, 6:25 AM IST

Srikanth-800.jpg

ನವದೆಹಲಿ: ಭಾರತದ ತಾರಾ ಬ್ಯಾಡ್ಮಿಂಟನ್‌ ಆಟಗಾರ ಕೆ.ಶ್ರೀಕಾಂತ್‌ ಡೆನ್ಮಾರ್ಕ್‌ ಓಪನ್‌ ಸೂಪರ್‌ ಸೀರೀಸ್‌ನಲ್ಲಿ ವಿಶ್ವ ನಂ.1 ಶ್ರೇಯಾಂಕಿತ ವಿಕ್ಟರ್‌ ಅಕ್ಸೆಲ್ಸೆನ್‌ಗೆ ಭರ್ಜರಿ ಆಘಾತ ನೀಡಿ ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ. ಕೂಟದಲ್ಲಿ ಈಗಾಗಲೇ ಸಿಂಧು, ಸೈನಾ, ಪ್ರಣಯ್‌ ಹೊರಬಿದ್ದಿರುವುದರಿಂದ ಭಾರತದಿಂದ ಪ್ರಶಸ್ತಿ ಗೆಲ್ಲುವಲ್ಲಿ ಶ್ರೀಕಾಂತ್‌ ಏಕೈಕ ಭರವಸೆಯಾಗಿದ್ದಾರೆ.

ಶುಕ್ರವಾರ ತಡರಾತ್ರಿ ನಡೆದ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ವಿಶ್ವ ನಂ.8ನೇ ಶ್ರೇಯಾಂಕಿತ ಶ್ರೀಕಾಂತ್‌ 14-21, 22-20, 21-7 ರಿಂದ ಹಾಲಿ ವಿಶ್ವ ಚಾಂಪಿಯನ್‌ ವಿಕ್ಟರ್‌ ಅವರನ್ನು ಸೋಲಿಸಿದರು. ಪಂದ್ಯದೂದ್ದಕ್ಕೂ ಅದ್ಭುತ ಸ್ಮ್ಯಾಷ್‌ಗಳನ್ನು ಸಿಡಿಸಿದ ಶ್ರೀಕಾಂತ್‌ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಅದರಲ್ಲಿಯೂ ಮೂರನೇ ಗೇಮ್‌ನಲ್ಲಿ ತೋರಿದ ಹೋರಾಟ ಅವಿಸ್ಮರಣೀಯ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಆಸ್ಟ್ರೇಲಿಯಾ ಓಪನ್‌, ಇಂಡೋನೇಷ್ಯಾ ಓಪನ್‌ ಗೆದ್ದಿರುವ ಶ್ರೀಕಾಂತ್‌ ಇದೀಗ ಮತ್ತೂಂದು ಸೂಪರ್‌ ಸೀರೀಸ್‌ ಗೆಲ್ಲುವ ಹಾದಿಯಲ್ಲಿದ್ದಾರೆ.

ಮೊದಲ ಗೇಮ್‌ನಲ್ಲಿ ಸೋಲು:
ಸ್ಥಳೀಯ ಆಟಗಾರ ವಿಕ್ಟರ್‌ ಪಂದ್ಯದ ಆರಂಭದಲ್ಲಿ ರೋಚಕ ಹೋರಾಟ ಪ್ರದರ್ಶಿಸಿದರು. ಇದರಿಂದಾಗಿ ಶ್ರೀಕಾಂತ್‌ ಅಂಕಗಳಿಕೆಯಲ್ಲಿ ಹಿನ್ನಡೆ ಪಡೆದರು. ಅಂತಿಮವಾಗಿ ವಿಕ್ಟರ್‌ 21-14 ರಿಂದ ಗೆದ್ದು ಮೇಲುಗೈ ಸಾಧಿಸಿದ್ದರು.

2ನೇ ಗೇಮ್‌ನಲ್ಲಿ ರೋಚಕ ಹೋರಾಟ:
1ನೇ ಗೇಮ್‌ನಲ್ಲಿ ಸೋತ ಶ್ರೀಕಾಂತ್‌ 2ನೇ ಗೇಮ್‌ನಲ್ಲಿ ಲಯ ಕಂಡುಕೊಂಡರು. ಇದರಿಂದ ಇಬ್ಬರ ನಡುವೆ ಜಿದ್ದಾಜಿದ್ದಿನ ಹೋರಾಟ ಕಂಡುಬಂತು. ವಿಕ್ಟರ್‌ಗೆ ಶ್ರೀಕಾಂತ್‌ ಕಠಿಣ ಸವಾಲು ಒಡ್ಡಿದರು. ಅಂತಿಮವಾಗಿ ಶ್ರೀಕಾಂತ್‌ 22-20 ರಿಂದ ಗೆದ್ದು ತಿರುಗೇಟು ನೀಡಿದರು. ಹೀಗಾಗಿ ಪಂದ್ಯ 1-1ರಿಂದ ಸಮಬಲವಾಯಿತು.

3ನೇ ಗೇಮ್‌ನಲ್ಲಿ ಶ್ರೀಕಾಂತ್‌ ಪಾರುಪತ್ಯ:
ಮೊದಲ ಎರಡು ಗೇಮ್‌ನಲ್ಲಿ ಉಭಯ ಆಟಗಾರರು ತಲಾ ಒಂದು ಗೇಮ್‌ ಗೆದ್ದಿರುವ ಹಿನ್ನೆಲೆಯಲ್ಲಿ 3ನೇ ಗೇಮ್‌ ನಿರ್ಣಾಯಕವಾಗಿತ್ತು. ಈ ಸಂದರ್ಭದಲ್ಲಿ ಶ್ರೀಕಾಂತ್‌ ಏಕಮುಖ ಹೋರಾಟ ಪ್ರದರ್ಶಿಸಿದರು. ನಿರಂತರವಾಗಿ ಅಂಕಗಳಿಕೆಯಲ್ಲಿ ಭಾರತೀಯ ಆಟಗಾರ ಮುನ್ನಡೆ ಪಡೆಯುತ್ತಾ ಸಾಗಿದರೆ, ಅತ್ತ ವಿಕ್ಟರ್‌ ಕಕ್ಕಾಬಿಕ್ಕಿಯಾದರು. ಅಂತಿವಾಗಿ ಶ್ರೀಕಾಂತ್‌ 21-7 ರಿಂದ ಭಾರೀ ಅಂತರದಲ್ಲಿ ಗೆದ್ದು ಸೆಮಿಫೈನಲ್‌ಗೆ ಲಗ್ಗೆ ಹಾಕಿದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.