ವಾಹನ ಸವಾರರೇ ಎಚ್ಚರ!


Team Udayavani, Oct 22, 2017, 6:00 AM IST

ladies-two-wheeler-driving.jpg

ಬೆಂಗಳೂರು: ದ್ವಿಚಕ್ರ ವಾಹನಗಳ ಹಿಂಬದಿ ಸವಾರರಿಗೆ ಈಗಾಗಲೇ ಹೆಲ್ಮೆಟ್‌ ಕಡ್ಡಾಯ ಮಾಡಿ ಆಯ್ತು. ಇನ್ಮುಂದೆ 100 ಸಿಸಿಗಿಂತ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನಗಳ ಹಿಂದೆ ಕುಳಿತು ಸವಾರಿ ಮಾಡುವುದೂ ಕೂಡ ನಿಷಿದ್ಧ!

ಹೌದು, ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ನೂತನ ಆದೇಶದಂತೆ ರಾಜ್ಯಾದ್ಯಂತ 100 ಸಿಸಿಗಿಂತಲೂ ಕಡಿಮೆ ಸಾಮರ್ಥ್ಯ ಇರುವ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರನ್ನು ಕರೆದೊಯ್ಯುವಂತಿಲ್ಲ. ಆದರೆ, ಈ ಆದೇಶ ಈಗಾಗಲೇ ಇರುವ 100 ಸಿಸಿಗಿಂತ ಕಡಿಮೆ ಸಾಮರ್ಥ್ಯ ಇರುವ ದ್ವಿಚಕ್ರ ವಾಹನಗಳಿಗೆ ಅನ್ವಯ ಆಗುವುದಿಲ್ಲ. ಹೊಸದಾಗಿ ರಸ್ತೆಗಿಳಿಯುವ ವಾಹನಗಳಿಗೆ ಮಾತ್ರ ನಿಷೇಧ ಇರುತ್ತದೆ ಎಂದು ಸಾರಿಗೆ ಇಲಾಖೆ ಜಂಟಿ ಆಯುಕ್ತ ಹೇಮಂತ್‌ಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಟಿವಿಎಸ್‌- 50, ಸ್ಕೂಟಿ, ಲೂನಾ ಸೇರಿದಂತೆ ಹಲವು ಪ್ರಕಾರದ ದ್ವಿಚಕ್ರ ವಾಹನಗಳಲ್ಲಿ ಇನ್ಮುಂದೆ ಡಬಲ್‌ ಸೀಟು (ಎರಡು ಆಸನ)ಗಳಿಗೆ ಅವಕಾಶ ಇರುವುದಿಲ್ಲ. ಒಂದು ಸೀಟುಗಳಿಗೆ ಮಾತ್ರ ಅನುಮತಿ ಇರುತ್ತದೆ.

ಸಾರಿಗೆ ನಿಯಮ 143 (3)ರ ಪ್ರಕಾರ ದ್ವಿಚಕ್ರ ವಾಹನದ ಎಂಜಿನ್‌ ಸಾಮರ್ಥ್ಯ 100 ಸಿಸಿಗಿಂತ ಕಡಿಮೆ ಇದ್ದರೆ, ಅಂತಹ ವಾಹನಗಳಲ್ಲಿ ಹಿಂಬದಿ ಸವಾರಿ ಮಾಡುವಂತಿಲ್ಲ. ಈ ನಿಯಮ ಮೊದಲೇ ಇತ್ತು. ಇದನ್ನು ಜಾರಿಗೊಳಿಸಿರಲಿಲ್ಲ. ಈಗ ಸರ್ಕಾರ ಇದರ ಜಾರಿಗೆ ಆದೇಶ ಹೊರಡಿಸಿದೆ.

ನಿಷೇಧಕ್ಕೆ ಹೆಚ್ಚು ಅಪಘಾತ ಕಾರಣ
ರಸ್ತೆ ಅಪಘಾತ ಪ್ರಕರಣಗಳಲ್ಲಿ ದ್ವಿಚಕ್ರ ವಾಹನದ ಹಿಂಬದಿ ಸವಾರರು, ಅದರಲ್ಲೂ ಮುಖ್ಯವಾಗಿ ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿರುವುದನ್ನು ಗಂಭೀರವಾಗಿ ಪರಿಗಣಿಸಿ, 100 ಸಿಸಿ ಸಾಮರ್ಥಯದ ದ್ವಿಚಕ್ರ ವಾಹನಗಳ ಮೇಲೆ ನಿಷೇಧ ಹೇರಲು ತೀರ್ಮಾನಿಸಲಾಗಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ. ಎರಡು-ಮೂರು ದಿನಗಳಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ)ಗಳಿಗೆ ಕಳುಹಿಸಲಾಗುವುದು ಎಂದು ಹೇಮಂತ್‌ ಕುಮಾರ್‌ ತಿಳಿಸಿದರು.

ಆರ್‌ಟಿಒ ಮೂಲಕ ದ್ವಿಚಕ್ರ ವಾಹನಗಳ ತಯಾರಿಕೆ ಕಂಪನಿಗಳಿಗೆ ಸೂಚನೆ ನೀಡಲಾಗುವುದು. ಈಗಾಗಲೇ ಮೋಟಾರು ವಾಹನ ಕಾಯ್ದೆಯ ಉಪಬಂಧದಲ್ಲಿ 100 ಸಿಸಿ ವಾಹನಗಳಲ್ಲಿ ಹಿಂಬದಿಯ ಸವಾರರಿಗೆ ಸವಾರಿ ಮಾಡಲು ಅವಕಾಶವಿಲ್ಲ ಎನ್ನುವ ನಿಯಮವಿದ್ದರೂ ಭಾರತೀಯ ರಸ್ತೆ ಕಾಂಗ್ರೆಸ್‌ ಸಾರಿಗೆ ಇಲಾಖೆ ಮಾಡಿದ್ದ ಮನವಿ ಪರಿಗಣಿಸಿ 100 ಸಿಸಿ ದ್ವಿಚಕ್ರ ವಾಹನಗಳಲ್ಲಿ ಹಿಂಬದಿಯ ಸವಾರರಿಗೆ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಸದ್ಯಕ್ಕೆ ಈ ನಿಯಮ ಮುಂಬೈನಲ್ಲಿ ಜಾರಿಯಲ್ಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಅಧಿಕಾರಿಗಳಿಗೂ ಸ್ಪಷ್ಟತೆ ಇಲ್ಲ. ರಾಜಧಾನಿ ದೆಹಲಿ, ನೆರೆಯ ಆಂಧ್ರಪ್ರದೇಶ ಸೇರಿದಂತೆ ಬೇರೆ ರಾಜ್ಯಗಳಲ್ಲಿ ಇಲ್ಲ.

ಟಾಪ್ ನ್ಯೂಸ್

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.