ಕರ್ನಾಟಕ ರಾಜ್ಯ ಮುಕ್ತ ವಿ.ವಿ. ಮುಚ್ಚುವುದಿಲ್ಲ


Team Udayavani, Oct 22, 2017, 6:00 AM IST

Basavaraj-Rayareddy,.jpg

ಮಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವನ್ನು ರಾಜ್ಯ ಸರಕಾರ ಮುಚ್ಚುವುದಿಲ್ಲ. ಅದರ ಪುನರ್‌ ವ್ಯವಸ್ಥೆಗಾಗಿ ರತ್ನಪ್ರಭಾ ನೇತೃತ್ವದ ಸಮಿತಿ ರಚಿಸಲಾಗಿದೆ. 3 ವರ್ಷಗಳ ಹಿಂದೆ ರದ್ದಾಗಿದ್ದ ಯು.ಜಿ.ಸಿ. ಮಾನ್ಯತೆಯನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಸಕಲ ಪ್ರಯತ್ನಗಳು ಮುಂದುವರಿದಿವೆ. ಮಾನ್ಯತೆ ನೀಡಲು ಯು.ಜಿ.ಸಿ. ಹಿಂದೇಟು ಹಾಕಿದರೆ ಕಾನೂನು ಹೋರಾಟ ಅನಿವಾರ್ಯವಾದೀತು ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯ ರೆಡ್ಡಿ ತಿಳಿಸಿದರು.

ಅವರು ಶನಿವಾರ ಮಂಗಳೂರಿನ ರಥಬೀದಿಯ ಸರಕಾರಿ ಪ್ರಥಮ ದರ್ಜೆ ಕಾಲೇಜನ್ನು ಡಾ| ಪಿ. ದಯಾನಂದ ಪೈ – ಪಿ. ಸತೀಶ್‌ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಎಂಬುದಾಗಿ ಪುನರ್‌ ನಾಮಕರಣ ಮಾಡುವ ಕಾರ್ಯ ಹಾಗೂ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿ ಮಾತನಾಡಿದರು.

ಕರಾಮು ವಿ.ವಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಕೆಲವೊಂದು ಭ್ರಷ್ಟಾಚಾರ ಮತ್ತು ಕಾನೂನು ಬಾಹಿರ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಯುಜಿಸಿ ಈ ವಿ.ವಿ.ಯ ಮಾನ್ಯತೆಯನ್ನು ರದ್ದುಪಡಿಸಿತ್ತು. ಮುಕ್ತ ವಿ.ವಿ. ಆರಂಭಿಸಿದ ಎಂಜಿನಿಯರಿಂಗ್‌ ಕಾಲೇಜು ಮತ್ತು ಪಾರಾ ಮೆಡಿಕಲ್‌ ಕಾಲೇಜುಗಳಿಗೆ ಯುಜಿಸಿ ಮಾನ್ಯತೆ ನೀಡಿಲ್ಲ. ಇದರಿಂದ ಸುಮಾರು 3 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದರು.

ಮಲತಾಯಿ ನೀತಿ ಆರೋಪ
ಮುಕ್ತ ವಿ.ವಿ. ವ್ಯಾಪ್ತಿಯನ್ನು ರಾಜ್ಯದ ಹೊರಗೆ ವಿಸ್ತರಿಸಿದ ಕ್ರಮಕ್ಕೆ ಯುಜಿಸಿ ಆಕ್ಷೇಪಿಸಿತ್ತು. ಈ ಹಿನ್ನೆಲೆಯಲ್ಲಿ ಸರಕಾರ ಕಾಯ್ದೆಗೆ ತಿದ್ದುಪಡಿ ತಂದು ವ್ಯಾಪ್ತಿಯನ್ನು ಕರ್ನಾಟಕ ರಾಜ್ಯಕ್ಕೆ ಸೀಮಿತಗೊಳಿಸಿದೆ. ಅಲ್ಲದೆ ಯುಜಿಸಿ ತಿಳಿಸಿದ ಇತರ ಕೆಲವು ಸಲಹೆಗಳನ್ನು ಪಾಲಿಸಿದೆ. ಹಾಗೆ ಯುಜಿಸಿ ಹೇಳಿದ್ದೆಲ್ಲವನ್ನೂ ಮಾಡಿ ಕಳೆದ 3 ವರ್ಷಗಳಲ್ಲಿ 16 ಬಾರಿ ರಾಜ್ಯ ಸರಕಾರದ ಅಧಿಕಾರಿಗಳು ಪುನರ್‌ ಮಾನ್ಯತೆಯನ್ನು ಒದಗಿಸುವಂತೆ ಯುಜಿಸಿ ಬಾಗಿಲು ತಟ್ಟಿದ್ದಾರೆ. ನಾನೇ ಖುದ್ದಾಗಿ ಕೇಂದ್ರ ಮಾನವ ಸಂಪದ ಖಾತೆಯ ಸಚಿವ ಪ್ರಕಾಶ್‌ ಜಾವಡೇಕರ್‌ ಅವರನ್ನು ಭೇಟಿಯಾಗಿ ಒತ್ತಾಯಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಇಷ್ಟೆಲ್ಲಾ ಮಾಡಿದರೂ ಯುಜಿಸಿ ಮಾನ್ಯತೆ ನೀಡುತ್ತಿಲ್ಲ. ಇದು ಕರ್ನಾಟಕದ ಬಗ್ಗೆ ಯುಜಿಸಿ ತಳೆಯುವ ಮಲತಾಯಿ ನೀತಿ ಎಂದು ಪರಿಗಣಿಸಬೇಕಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವರು ಆರೋಪಿಸಿದರು.

ನಾನು ಮತ್ತೂಮ್ಮೆ ಕೇಂದ್ರ ಮಾನವ ಸಂಪದ ಸಚಿವರನ್ನು ಭೇಟಿಯಾಗಿ ಒತ್ತಾಯಿಸುತ್ತೇನೆ. ಆಗಲೂ ಯುಜಿಸಿ ಸ್ಪಂದಿಸದಿದ್ದರೆ ನ್ಯಾಯಾಲಯದ ಮೊರೆ ಹೋಗುವ ಬಗ್ಗೆ ಚಿಂತನೆ ಇದೆ ಎಂದರು.

650 ಕೋಟಿ ರೂ.
ಖಜಾನೆಯಲ್ಲಿದೆ
ಕರ್ನಾಟಕ ರಾಜ್ಯ ಮುಕ್ತ ವಿ.ವಿ.ಯಲ್ಲಿದ್ದ 650 ಕೋಟಿ ರೂ.ಗಳನ್ನು ಭದ್ರತೆ ದೃಷ್ಟಿಯಿಂದ ರಾಜ್ಯದ ಖಜಾನೆಯಲ್ಲಿ ಇರಿಸಲಾಗಿದೆ. ಇದರಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲ. ಹಣವನ್ನು ನಾನು ಕೊಂಡುಹೋಗುವುದಿಲ್ಲ. ವಿಶ್ವ ವಿದ್ಯಾನಿಲಯದಲ್ಲಿ 999 ಅಧಿಕಾರಿ/ ಸಿಬಂದಿ ಇದ್ದು, ಅವರ ವೇತನ ಪಾವತಿಗೆ ವರ್ಷಕ್ಕೆ 50 ಕೋಟಿ ರೂ. ಖರ್ಚಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವರು ಹೇಳಿದರು.

ವಿಟಿಯು ಸ್ಥಿತಿ ಬಾರದಿರಲಿ
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಲ್ಲಿ ಖರ್ಚಾಗದೆ ಇದ್ದ 441 ಕೋಟಿ ರೂ.ಗಳನ್ನು ಆದಾಯ ತೆರಿಗೆ ಇಲಾಖೆ ಕೊಂಡುಹೋಗಿದೆ. ಅಂತಹುದೇ ಗತಿ ಕರ್ನಾಟಕ ಮುಕ್ತ ವಿ.ವಿ.ಗೆ ಬಾರದಿರಲಿ ಎಂದು ಈ ವಿ.ವಿ.ಯದಲ್ಲಿದ್ದ 650 ಕೋಟಿ ರೂ. ಗಳನ್ನು ಸರಕಾರದ ಖಜಾನೆಯಲ್ಲಿ ಇರಿಸಲಾಗಿದೆ. ಪರಿಸ್ಥಿತಿ ಹೀಗಿರುವಾಗ ಅದಕ್ಕೆ ವಿರೋಧ ಏಕೆ ಎಂದು ಅರ್ಥವಾಗುತ್ತಿಲ್ಲ ಎಂದರು.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.