ಉಡುಪಿ: ನಿಂತಿದ್ದ ಕಾರಿಗೆ ಮತ್ತೂಂದು ಕಾರು ಢಿಕ್ಕಿ
Team Udayavani, Oct 23, 2017, 9:34 AM IST
ಉಡುಪಿ: ನಿಂತಿದ್ದ ಕಾರಿಗೆ ಮತ್ತೂಂದು ಕಾರು ಢಿಕ್ಕಿ ಹೊಡೆದ ಪರಿಣಾಮ ಎರಡೂ ಕಾರುಗಳು ಸಂಪೂರ್ಣ ಜಖಂಗೊಂಡಿರುವ ಘಟನೆ ಶನಿವಾರ ತಡರಾತ್ರಿ ಬನ್ನಂಜೆಯ ಲಾಡ್ಜ್ ಒಂದರ ಮುಂಭಾಗದಲ್ಲಿ ಸಂಭವಿಸಿದೆ.
ಬೆಂಗಳೂರು ಮೂಲದ ತಿರುಮಲ ಗೌಡ ಅವರು ಕುಟುಂಬ ಸಮೇತರಾಗಿ ಉಡುಪಿಗೆ ತೀರ್ಥಯಾತ್ರೆಗೆ ಆಗಮಿಸಿದ್ದು, ರವಿವಾರ ಮುಂಜಾನೆ 3 ಗಂಟೆಗೆ ಬೆಂಗಳೂರು ತೆರಳುವ ಸಲುವಾಗಿ ಲಾಡ್ಜ್ ಮುಂಭಾದಲ್ಲಿ ಕಾರು ನಿಲ್ಲಿಸಿ ಲಾಡ್ಜ್ನಲ್ಲಿ ತಂಗಿದ್ದರು. ಅವೇಳೆ ಸಿಟಿ ಬಸ್ ನಿಲ್ದಾಣದಿಂದ ಕರಾವಳಿ ಭಾಗಕ್ಕೆ ತೆರಳುತ್ತಿದ್ದ ಕಾರೊಂದು ವೇಗವಾಗಿ ಬಂದು ತಿರುಮಲ ಗೌಡ ಅವರ ನಿಂತಿದ್ದ ಕಾರಿನ ಎಡಬದಿಗೆ ಗುದ್ದಿದೆ.
ಢಿಕ್ಕಿಯ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿವೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು