ಬಲು ರುಚಿಯ ಇಡ್ಲಿ ಸಾಂಬಾರ್‌ಗೆ


Team Udayavani, Oct 23, 2017, 11:39 AM IST

23-36.jpg

ಹೋಟೆಲ್‌ ಉದ್ಯಮ ನಡೆಸುವುದು ಕಷ್ಟದಾಯಕ ಎಂಬ ಮಾತು ಜನಜನಿತ. ಕೆಲಸಗಾರರ ಕೊರತೆ, ಮಾರುಕಟ್ಟೆಯಲ್ಲಿ ಇರುವ ಪೈಪೋಟಿ ಎದುರಿಸಲಾಗಿದೆ ಅನೇಕರು ಉದ್ಯಮದಿಂದ ಹೊರಬಂದ ಉದಾಹರಣೆ ಇದೆ. ಇದರ ನಡುವೆ ಕಳೆದ ಆರು ದಶಕಗಳಿಂದ ಶಿವಮೊಗ್ಗದ ಜನತೆಗೆ ಸುಚಿ-ರುಚಿಯಾದ ತಿನಿಸುಗಳನ್ನು ನೀಡುತ್ತಾ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ ಬಾಲಾಜಿ ಟಿಫನ್‌ ರೂಂ.

ಶಿವಮೊಗ್ಗಕ್ಕೆ ಭೇಟಿ ನೀಡಿದವರು ಸ್ಥಳೀಯರಲ್ಲಿ ವಿಚಾರಿಸಿದರೆ ಬಾಲಾಜಿ ಟಿಫನ್‌ ರೂಂ ಚಿರಪರಿಚಿತ. ಜಿಲ್ಲಾಧಿಕಾರಿ ಕಚೇರಿ
ಎದುರಿನಲ್ಲಿರುವ ಬಾಲಾಜಿ ಟಿಫನ್‌ ರೂಂ ಎಂದಾಕ್ಷಣ ನೆನಪಿಗೆ ಬರುವುದು ಅಲ್ಲಿ ದೊರಕುವ ಇಡ್ಲಿ ಸಾಂಬಾರ್‌. ಇಲ್ಲಿನ ಸಾಂಬಾರ್‌ನ್ನು ಒಮ್ಮೆ ಸವಿದವರು ಅದನ್ನು ಮರೆಯುವ ಸಾಧ್ಯತೆಯೇ ಇಲ್ಲ.

ನೋಡುವುದಕ್ಕೆ ಹೊಟೆಲ್‌ ಕಟ್ಟಡ ಹಳೆಯದು ನಿಜ. ಆದರೆ ಆಹಾರದ ಗುಣಮಟ್ಟದಲ್ಲಿ ರಾಜಿ ಇಲ್ಲದಂತೆ 60 ವರ್ಷಗಳಿಂದ ಗ್ರಾಹಕರಿಗೆ ಉತ್ತಮವಾದ ಉಪಹಾರ ಪೂರೈಸುತ್ತಾ ಬಂದಿದೆ. ಹೀಗಾಗಿ ಇಲ್ಲಿನ ತಿನಿಸುಗಳ ರುಚಿಗೆ  ಮನಸೋಲದವರೇ ಇಲ್ಲ. 

ಸ್ಪೆಷಲ್‌ ಸಾಂಬರ್‌
ಬಿಸಿಬಿಸಿ ಇಡ್ಲಿಗೆ ಸಾಂಬರ್‌ನ್ನು ಕಪ್‌ನಲ್ಲಿ ಕೊಡುವ ವಾಡಿಕೆ ಇಲ್ಲಿಲ್ಲ. ಬದಲಿಗೆ ಇಡ್ಲಿ ಮೇಲೆ ಸಾಂಬರ್‌ನ್ನು ಹಾಕಿಕೊಡುವುದೇ ಇಲ್ಲಿನ ಸ್ಪೆಷಲ್‌! ಇದರ ಜತೆಗೆ ಇಲ್ಲಿ ಸಿಗುವ ಮೊಸರು ವಡೆ ರುಚಿ ಸವಿಯಲು ಬರುವ ಗ್ರಾಹಕರದ್ದು ಉದ್ದನೆಯ ಪಟ್ಟಿ ಇದೆ. ಚಿತ್ರಾನ್ನ, ಮೊಸರನ್ನ, ಕಡ್ಲೆಬೇಳೆ ವಡೆ, ಉದ್ದಿನ ವಡೆ, ಚಹ, ಕಾಫಿ ಕೂಡ ಲಭ್ಯ. ಹೋಟೆಲ್‌ನ ಇನ್ನೊಂದು ವಿಶೇಷತೆ ಎಂದರೆ, ಬೆಳಗ್ಗೆ 7.30ರಿಂದ ಪ್ರಾರಂಭಗೊಂಡು ಸಂಜೆ 4ಕ್ಕೆ ಕ್ಲೋಸ್‌ ಆಗುತ್ತದೆ. ಅಷ್ಟರೊಳಗೆ ಗ್ರಾಹಕರು ಭೇಟಿ ನೀಡಬೇಕು.

ಹೆಸರು ಮಾತ್ರ ಬದಲು
ಮೂಲತಃ ಕುಂದಾಪುರದವರಾದ ಕೆ. ಶ್ರೀನಿವಾಸ್‌, ಈ ಹೊಟೆಲ್‌ ಸ್ಥಾಪಕರು. 6 ದಶಕದ ಹಿಂದೆ ಶಿವಮೊಗ್ಗಕ್ಕೆ ಬಂದು ಇಲ್ಲಿ ನ್ಯೂ ಇಂಡಿಯನ್‌ ಕಾಫಿ ಬಾರ್‌ ಹೆಸರಿನಲ್ಲಿ ಹೊಟೆಲ್‌ ಉದ್ಯಮ ಆರಂಭಿಸಿದ್ದ ಇವರು ನಂತರ ಅದನ್ನು ತಮ್ಮೊಂದಿಗೆ ಕೆಲಸಕ್ಕಿದ್ದ ತಮ್ಮ ಪತ್ನಿಯ ಸಹೋದರ (ಬಾಮೈದ) ಹೆಚ್‌. ಶ್ರೀನಿವಾಸ್‌ರಾವ್‌ರಿಗೆ ಇದರ ಜವಾಬ್ದಾರಿ ವಹಿಸಿದರು. ನಂತರದಲ್ಲಿ ನ್ಯೂ ಇಂಡಿಯನ್‌ ಕಾಫಿ ಬಾರ್‌ ಎಂದಿದ್ದ ಹೆಸರು ಬಾಲಾಜಿ ಟಿಫನ್‌ ರೂಂ ಎಂದು ಮಾರ್ಪಾಡುಗೊಂಡು ಅಂದಿನಿಂದ ಇಂದಿನವರೆಗೆ ಶಿವಮೊಗ್ಗದ ಜನತೆಗೆ ರುಚಿರುಚಿಯಾದ ತಿನಿಸುಗಳನ್ನು ತಿನಿಸುತ್ತಾ ಬಂದಿದೆ.

ಇದೀಗ ಮಾಲೀಕರಾದ ಹೆಚ್‌. ಶ್ರೀನಿವಾಸ್‌ ಜತೆಗೆ ಅವರ ಇಬ್ಬರು ಮಕ್ಕಳಾದ ಕಿರಣ್‌ ಕುಮಾರ್‌ ಹಾಗೂ ಸತೀಶ್‌ ಉದ್ಯಮವನ್ನು ಮುನ್ನಡೆಸುತ್ತಿದ್ದಾರೆ. ಹೋಟೆಲ್‌ನಲ್ಲಿ 9 ಮಂದಿ ಕೆಲಸಕ್ಕಿದ್ದಾರೆ. ಪ್ರಸ್ತುತ ವಿದ್ಯಮಾನದಲ್ಲಿ ಹೋಟೆಲ್‌ ನಡೆಸುವುದು ನಿಜಕ್ಕೂ ಸವಾಲಿನ ಉದ್ಯಮ. ಕೆಲಸಗಾರರು ಸಿಗುವುದು ಕಷ್ಟ. ಅದೃಷ್ಟಕ್ಕೆ ಐವರು ಮಹಿಳೆಯರು ಕೆಲಸಕ್ಕೆ ಸಿಕ್ಕಿದ್ದಾರೆ. ಅವರೇ ನಮ್ಮ ಹೋಟೆಲ್‌ನ ನಿಜವಾದ ಆಧಾರಸ್ತಂಭ ಎನ್ನುತ್ತಾರೆ ಕಿರಣ್‌ಕುಮಾರ್‌.

ಬದಲಾವಣೆ ಇಲ್ಲ
ಕಟ್ಟಡ ಆರು ದಶಕದ ಹಿಂದೆ ಹೇಗಿತ್ತೋ ಅದೇ ರೀತಿ ಇದೆ. ಶಿವಮೊಗ್ಗದಲ್ಲಿ ಇಷ್ಟು ಸುದೀರ್ಘ‌ ವರ್ಷ ಯಾವುದೇ ಮಾರ್ಪಾಡು ಇಲ್ಲದೆ ನಡೆಯುತ್ತಿರುವ ಏಕೈಕ ಹೊಟೆಲ್‌ ತಮ್ಮದು ಎಂದು ಹೆಮ್ಮೆ ವ್ಯಕ್ತಪಡಿಸುತ್ತಾರೆ ಕಿರಣ್‌ ಕುಮಾರ್‌

ಕೆ. ಮೋಹನ್‌ 

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.