ಅಧಿಕಾರ ಸದುಪಯೋಗ ಮಾಡಿ: ಖರ್ಗೆ


Team Udayavani, Oct 24, 2017, 9:57 AM IST

gul-2.jpg

ಕಲಬುರಗಿ: 1968ರಲ್ಲಿ ಕಾಂಗ್ರೆಸ್‌ ಇಬ್ಭಾಗವಾದಾಗ ನಮ್ಮ ಜೊತೆಯಲ್ಲಿ ಇದ್ದವರು ಈಗಲೂ ಕಾಂಗ್ರೆಸ್‌ನಲ್ಲಿ ಇದ್ದಾರೆ. ಅದರಲ್ಲಿ ಕೆಲವರಿಗೆ ಅಧಿಕಾರ ದೊರಕಿದೆ. ಇನ್ನು ಕೆಲವರಿಗೆ ದೊರಕಿಲ್ಲ. ಅಧಿಕಾರ ದೊರಕಿದವರು ಅದನ್ನು ಸದುಪಯೋಗ ಪಡಿಸಿಕೊಂಡು ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಬೇಕು ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಸೋಮವಾರ ಮಧ್ಯಾಹ್ನ ಕಾಂಗ್ರೆಸ್‌ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನೂತನ ಕೆಪಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ ಹಾಗೂ ಅಲ್ಪಸಂಖ್ಯಾತರ ಘಟಕದ ವಿಭಾಗೀಯ ಅಧ್ಯಕ್ಷ ನಜರ್‌ ಅಹಮದ್‌ ಬಾಬಾಖಾನ್‌ ಅವರ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್‌ ಇಬ್ಭಾಗವಾದಾಗ ನಮ್ಮ ಜೊತೆಯಲ್ಲಿ ದೇವೇಂದ್ರಪ್ಪ ಘಾಳೆಪ್ಪ ಜಮಾದಾರ, ಪ್ರಭಾಕರ ತೇಲಕರ್‌, ಧರ್ಮರಾಯ ಅಫಜಲಪುರಕರ್‌, ಇಕ್ಬಾಲ್‌ ಅಹಮದ್‌ ಸರಡಗಿ ಅವರಲ್ಲದೆ, ಬಾಬುರಾವ್‌ ಜಾಗೀರದಾರ, ಚಂದ್ರಶೇಖರ ಸುಲ್ತಾನಪುರ, ಜಗನ್ನಾಥ ಗೋದಿ, ದೇವೇಂದ್ರ ಮರತೂರ, ತಿಪ್ಪಣ್ಣಪ್ಪ ಕಮಕನೂರು, ಆಲಂಖಾನ ಎಲ್ಲರೂ ಇದ್ದರು. ಈಗಲೂ ಕಾಂಗ್ರೆಸ್‌ ನಲ್ಲಿಯೇ ಇದ್ದಾರೆ. ಇದರಲ್ಲಿ ಕೆಲವರಿಗೆ ಅಧಿಕಾರ ಸಿಕ್ಕಿದೆ. ಇನ್ನೂ ಕೆಲವರಿಗೆ ಸಿಕ್ಕಿಲ್ಲ. ಈಗ ಜಗದೇವ ಗುತ್ತೇದಾರ ಅವರಿಗೆ ಅಧಿಕಾರ ಸಿಕ್ಕಿದೆ. ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಮಾತನಾಡಿ, ನಮ್ಮದು ನುಡಿದಂತೆ ನಡೆದ ಸರಕಾರ. ಜನರ ಅವಶ್ಯಕತೆ ತಿಳಿದು ಅವರಿಗೆ ಹಲವಾರು ಭಾಗ್ಯ ಕೊಡುವ ಮೂಲಕ ಜನಪರವಾದ ಆಡಳಿತ ನೀಡಿದ್ದೇವೆ. ಬಿಜೆಪಿಯವರು ಈ ರಾಜ್ಯದಲ್ಲಿ ಹೇಗೆ ಅಧಿಕಾರ ಮಾಡಿದ್ದಾರೆ. ಎಷ್ಟು ಹಗರಣಗಳು, ಎಷ್ಟು ಅಪಸವ್ಯಗಳು ನಡೆದಿವೆ ಎನ್ನುವುದನ್ನು ಜನರು ನೋಡಿದ್ದಾರೆ. ಇದೆಲ್ಲವನ್ನು ಮತ್ತೂಮ್ಮೆ ಅವರಿಗೆ ತಿಳಿ ಹೇಳುವ ಅವಶ್ಯಕತೆ ಇದೆ ಎಂದರು.

ಶಾಸಕರಾದ ಇಕ್ಬಾಲ್‌ ಅಹ್ಮದ್‌ ಸರಡಗಿ, ಡಾ|ಉಮೇಶ ಜಾಧವ್‌, ಬಿ.ಆರ್‌.ಪಾಟೀಲ ಮಾತನಾಡಿದರು. ನೂತನ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಕಾಂಗ್ರೆಸ್‌ ಪಕ್ಷದ ಅಲ್ಪಸಂಖ್ಯಾತರ ಘಟಕದ ವಿಭಾಗೀಯ ಅಧ್ಯಕ್ಷ ಬಾಬಾಖಾನ್‌ ಮಾತನಾಡಿ, ಇವತ್ತು ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಪಕ್ಷ ಹೊರಿಸಿದೆ. ಅದನ್ನು ಸಮರ್ಥವಾಗಿ ಎಲ್ಲರ ಸಹಕಾರದೊಂದಿಗೆ ನಿಭಾಯಿಸುವ ಮತ್ತು ಪಕ್ಷವನ್ನು ಗ್ರಾಮೀಣ ಮಟ್ಟದಲ್ಲೂ ಇನ್ನಷ್ಟು ಗಟ್ಟಿ ಮಾಡಿ ಮುಂದಿನ ಬಾರಿಯೂ ಅಧಿಕಾರಕ್ಕೆ ಬರುವಂತೆ ಮಾಡುವುದು ನಮ್ಮ ಹೊಣೆಗಾರಿಕೆಯಾಗಿದೆ ಎಂದರು.

ಭಾಗಣ್ಣಗೌಡ ಸಂಕನೂರ ಅನುಪಸ್ಥಿಯಲ್ಲಿ ಉಪಾಧ್ಯಕ್ಷರಾದ ಬಾಬುರಾವ್‌ ಜಹಾಗಿರದಾರ, ಚಂದ್ರಶೇಖರ ಸುಲ್ತಾನಪುರ
ಅವರುಗಳು ಕಾಂಗ್ರೆಸ್‌ ಪಕ್ಷದ ಧ್ವಜ ನೀಡುವ ಮೂಲಕ ಜಗದೇವ ಗುತ್ತೇದಾರ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಅಲ್ಲಂಪ್ರಭು ಪಾಟೀಲ ನಿರೂಪಿಸಿದರು.

ಪಕ್ಷದ ಮುಖಂಡರಾದ ಸಚಿವ ಪ್ರಿಯಾಂಕ್‌ ಖರ್ಗೆ, ನಾರಾಯಣರಾವ ಕಾಳೆ, ತಿಪ್ಪಣ್ಣಪ್ಪ ಕಮಕನೂರ, ಅಲಂಖಾನ್‌, ಸಿ.ಬಿ.ಪಾಟೀಲ, ಸಿ.ಎ.ಪಾಟೀಲ, ಕೃಷ್ಣಾಜೀ ಕುಲಕರ್ಣಿ, ದೇವೆಂದ್ರಪ್ಪ ಮರತೂರ, ಶಿವಶರಣಪ್ಪ ಕೋಬಾಳ, ಜಿಪಂ ಪ್ರತಿಪಕ್ಷದ ನಾಯಕ ಶಿವಾನಂದ ಪಾಟೀಲ, ಸದಸ್ಯ ರಾಜೇಶ ಗುತ್ತೇದಾರ, ಜಿಪಂ ಮಾಜಿ ಅಧ್ಯಕ್ಷ ನಿತೀನ್‌ ಗುತ್ತೇದಾರ, ಮೇಯರ್‌ ಶರಣಕುಮಾರ ಮೋದಿ, ಎನ್‌ಈಕೆಆರ್‌ಟಿಸಿ ಅಧ್ಯಕ್ಷ ಇಲಿಯಾಸ್‌ ಬಾಗವಾನ್‌, ಎಚ್‌ಕೆಇ ಅಧ್ಯಕ್ಷ ಬಸವರಾಜ ಭೀಮಳ್ಳಿ, ಜಿಡಿಎ ಅಧ್ಯಕ್ಷ ಅಜಗರ್‌ ಅಹ್ಮದ್‌ ಚುಲಬುಲ್‌, ಚಂದ್ರಿಕಾ ಪರಮೇಶ್ವರ, ಜಿಪಂ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಟಗಿ, ಯಶವಂತ ಅಷ್ಟಗಿ, ಶ್ಯಾಮ ನಾಟಿಕಾರ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪ್ರಭಾವತಿ ಪಾಟೀಲ, ಬಸವರಾಜ ಪಾಟೀಲ ಹೇರೂರ್‌, ಶಿವಕುಮಾರ ಬಾಳಿ, ವೀರಣ್ಣಗೌಡ
ಪರಸರೆಡ್ಡಿ ಹಾಗೂ ಜಿಲ್ಲೆಯ ವಿವಿಧ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.