ಕುರ್ಲಾ ಪೂರ್ವ ಬಂಟರ ಭವನ ಪತ್ತನಾಜೆ ತುಳು ಚಲನಚಿತ್ರ ಪ್ರದರ್ಶನ


Team Udayavani, Oct 24, 2017, 1:43 PM IST

22-Mum02.jpg

ಮುಂಬಯಿ: ಕಲಾಜಗತ್ತು ಕ್ರಿಯೇಷನ್ಸ್‌ನಿಂದ ಶೀಘ್ರದಲ್ಲಿ ಮುಂಬಯಿ ಕಲಾವಿದರನ್ನು ಒಟ್ಟು ಸೇರಿಸಿಕೊಂಡು ಮುಂಬಯಿಯಲ್ಲೇ ನೂತನ ತುಳು ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಲಾಗುವುದು. ಅಣ್ಣ ರಾಘು ಅಣ್ಣ ಎಂಬ ಶೀರ್ಷಿಕೆಯ ಈ ತುಳುಚಿತ್ರದಲ್ಲಿ ಹಾಸ್ಯಕ್ಕೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡಲಾಗುವುದು. ನನ್ನ ಮೊದಲ ಚಿತ್ರ “ಪತ್ತನಾಜೆ’ಗೆ ಮುಂಬಯಿಗರಿಂದ ಉತ್ತಮ ಪ್ರೋತ್ಸಾಹ, ಸಹಕಾರ, ಬೆಂಬಲ ದೊರೆತಿದೆ ಎನ್ನಲು ಸಂತೋಷವಾಗುತ್ತಿದೆ ಎಂದು ತುಳು ಚಲನಚಿತ್ರ ನಿರ್ದೇಶಕ, ನಿರ್ಮಾಪಕ, ಕಲಾಜಗತ್ತು ವಿಜಯಕುಮಾರ್‌ ಶೆಟ್ಟಿ ತೋನ್ಸೆ ಅವರು ನುಡಿದರು.

ಅ. 2ರಂದು ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜರಗಿದ “ಪತ್ತನಾಜೆ’ ತುಳು ಚಿತ್ರ ಪ್ರದರ್ಶನದ ಪ್ರಾರಂಭದಲ್ಲಿ ಜರಗಿದ ಉದ್ಘಾಟನ ಸಮಾರಂಭದಲ್ಲಿ ಮಾತನಾಡಿದ ಅವರು, ಮುಂಬಯಿಯ ಕಲಾಪ್ರೇಮಿಗಳು ಹಾಗೂ ಕಲಾಪೋಷಕರು ನನ್ನ ಎಲ್ಲಾ ಕಲಾಸೇವೆಯನ್ನು ಬೆಂಬಲಿಸುತ್ತಿದ್ದಾರೆ. ದಾನಿಗಳ ನಿರಂತರ ಸಹಕಾರವೂ ನನಗೆ ದೊರೆತಿದೆ. ನನ್ನಮುಂದಿನ ಚಿತ್ರಗಳಿಗೆ ಮುಂಬಯಿಗರ ಸಹ ಕಾರ ಬಯಸುತ್ತಿದ್ದೇನೆ. ಇದಕ್ಕೆ ಸಂಪೂರ್ಣ ಬೆಂಬಲ ದೊರೆಯಲಿದೆ ಎಂಬ ವಿಶ್ವಾಸವಿದೆ ಎಂದರು.

ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ವಿಶ್ವ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು, ವಿಜಯಣ್ಣನವರ ಕಲಾಸೇವೆಯನ್ನು ಎಲ್ಲರೂ ಗೌರವಿಸಬೇಕಾಗುತ್ತದೆ. ಅವರು ಯಾವುದೇ ಕಾರ್ಯವನ್ನು ಕೈಗೆತ್ತಿಕೊಂಡರೂ ಅದರಲ್ಲಿ ಸಾಧನೆಯನ್ನು ಮಾಡುತ್ತಾರೆ. ಅವರ ಅಭಿಮಾನಿಗಳ ತಂಡವೇ ಮುಂಬಯಿ ಯಲ್ಲಿದೆ. ಸಾವಿರಾರು ಕಲಾವಿದರನ್ನು ರೂಪಿ ಸಿದ ಇವರು ಇದೀಗ ಚಿತ್ರರಂಗವನ್ನು ಪ್ರವೇಶಿಸಿ ರುವಾಗ ಅವರಿಗೆ ಸಂಪೂರ್ಣ ಸಹಕಾರವನ್ನು ನಾವು ನೀಡಬೇಕಾಗಿದೆ ಎಂದು ನುಡಿದು,  ತುಳು ಚಿತ್ರರಂಗದಲ್ಲಿ ಅವರು ಒಂದು ಕ್ರಾಂತಿಯನ್ನು ನಿರ್ಮಿಸಲಿ ಎಂದು ಶುಭ ಹಾರೈಸಿದರು.

ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ ಅವರು ಮಾತನಾಡಿ, ವಿಜಯಣ್ಣನವರ ಪತ್ತನಾಜೆ ಚಿತ್ರವು ಈಗಾಗಲೇ ಪ್ರೇಕ್ಷಕರ ಮನಗೆದ್ದಿದೆ. ಅವರ ಮುಂದಿನ ಚಿತ್ರವು ಪ್ರೇಕ್ಷಕರ ಮನಸ್ಸನ್ನು ಗೆಲ್ಲಲಿ ಎಂದು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಚಿತ್ರಕಲಾವಿದರಾದ ರೇಷ್ಮಾ ಶೆಟ್ಟಿ, ಪ್ರತೀಕ್‌ ಶೆಟ್ಟಿ, ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿ, ಸದ್ಯದಲ್ಲೇ ಪ್ರದರ್ಶನ ಕಾಣಲಿರುವ ಅಂಬರ್‌ ಕ್ಯಾಟರರ್ ಚಿತ್ರದ ನಾಯಕ ಸೌರಭ್‌ ಭಂಡಾರಿ ಅವರನ್ನು ಗಣ್ಯರು ಗೌರವಿಸಿದರು. ಪತ್ತನಾಜೆ ಚಿತ್ರದ ಹೆಚ್ಚಿನ ಕಲಾವಿದರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪುರೋಹಿತ ವಿದ್ವಾನ್‌ ಪ್ರವೀಣ್‌ ಭಟ್‌ ಅವರು ಆಶೀರ್ವಚನ ನೀಡಿ, ಮುಂದಿನ ಚಿತ್ರಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಸಿಎ ಐ. ಆರ್‌. ಶೆಟ್ಟಿ, ಬಂಟರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಎರ್ಮಾಳ್‌ ಹರೀಶ್‌ ಶೆಟ್ಟಿ, ಶಾಂತಾರಾಮ್‌ ಶೆಟ್ಟಿ, ಕಡಂದಲೆ ಸುರೇಶ್‌ ಭಂಡಾರಿ, ರತ್ನಾಕರ ಶೆಟ್ಟಿ ಮುಂಡ್ಕೂರು, ನವಿಮುಂಬಯಿ ಮಾಜಿ ನಗರ ಸೇವಕ ಸಂತೋಷ್‌ ಶೆಟ್ಟಿ, ಉದ್ಯಮಿ ಕೃಷ್ಣ ವೈ. ಶೆಟ್ಟಿ, ಗಣೇಶ್‌ ಶೆಟ್ಟಿ ಐಕಳ, ಗಿಲ್ಬರ್ಟ್‌ ಡಿಸೋಜಾ, ಜಯಪ್ರಕಾಶ್‌ ಶೆಟ್ಟಿ, ಪಿ. ಡಿ. ಶೆಟ್ಟಿ, ರಾಘು ಪಿ. ಶೆಟ್ಟಿ, ಅನಿಲ್‌ ಶೆಟ್ಟಿ ಏಳಿಂಜೆ, ಬೊಲಾ°ಡುಗುತ್ತು ಚಂದ್ರಹಾಸ ರೈ, ಕಿಶೋರ್‌ ಶೆಟ್ಟಿ ಕುತ್ಯಾರ್‌, ರವೀಂದ್ರನಾಥ ಭಂಡಾರಿ, ಅಶೋಕ್‌ ಪಕ್ಕಳ, ದಿವಾಕರ ಶೆಟ್ಟಿ ಕುರ್ಲಾ, ಡಾ| ಸುನೀತಾ ಎಂ. ಶೆಟ್ಟಿ, ಉಮಾ ಕೃಷ್ಣ ಶೆಟ್ಟಿ. ಸಿಎ ಹರೀಶ್‌ ಶೆಟ್ಟಿ, ಯಶವಂತ್‌ ಶೆಟ್ಟಿ, ಶಿವರಾಮ ಜಿ. ಶೆಟ್ಟಿ, ಪ್ರವೀಣ್‌ ಭೋಜ ಶೆಟ್ಟಿ, ದಿವಾಕರ ಶೆಟ್ಟಿ, ಹರೀಶ್‌ ಎಸ್‌. ಶೆಟ್ಟಿ, ದಿನಕರ ಶೆಟ್ಟಿ, ಸುಧೀರ್‌ ಆರ್‌. ಎಲ್‌. ಶೆಟ್ಟಿ, ಚಂದ್ರಹಾಸ ಶೆಟ್ಟಿ, ಗುಣಪಾಲ್‌ ಶೆಟ್ಟಿ ಐಕಳ, ಸಿಎ ಸದಾಶಿವ ಶೆಟ್ಟಿ, ನವೀನ್‌ ಶೆಟ್ಟಿ ಇನ್ನಬಾಳಿಕೆ ಮೊದಲಾದವರು ಉಪಸ್ಥಿತರಿದ್ದರು.

ಕಲಾವಿದರಾದ ಸುರೇಂದ್ರ ಕುಮಾರ್‌ ಹೆಗ್ಡೆ, ಎನ್‌. ಪೃಥ್ವಿರಾಜ್‌ ಮುಂಡ್ಕೂರು ಮೊದಲಾದವರು ಉಪಸ್ಥಿತರಿದ್ದರು. ಅನಂತರ ಪತ್ತನಾಜೆ ಚಿತ್ರವು ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಪತ್ರಕರ್ತ ದಯಾಸಾಗರ್‌ ಚೌಟ ಅವರು ಕಾರ್ಯಕ್ರಮ ನಿರ್ವಹಿಸಿದರು. 

ಟಾಪ್ ನ್ಯೂಸ್

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.