ವರನ ಸೋಗಿನಲ್ಲಿ ಗೂಢಚರ್ಯೆ


Team Udayavani, Oct 25, 2017, 7:25 AM IST

isi.jpg

ನವದೆಹಲಿ: ಭಾರತದಲ್ಲಿ ಗೂಢಚಾರಿಕೆಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಕಾಲಕಾಲಕ್ಕೆ ಹೊಸ ಹೊಸ ಅಡ್ಡದಾರಿಗಳನ್ನು ಹುಡುಕುತ್ತಲೇ ಇದೆ. ಈ ಹಿಂದೆ ಹನಿಟ್ರ್ಯಾಪ್‌ ವಿಧಾನದಲ್ಲಿ ಸುಂದರ ಮಹಿಳೆಯರನ್ನು ಬಳಸಿ ಯೋಧರನ್ನು ಬಲೆಗೆ ಬೀಳಿಸುತ್ತಿದ್ದ ಐಎಸ್‌ಐ ಈಗ ಹೊಸ ತಂತ್ರದ ಮೊರೆ ಹೋಗಿದೆ. ಎನ್‌ಆರ್‌ಐ ವರನ ಸೋಗಿನಲ್ಲಿ ಭಾರತಕ್ಕೆ ನುಸುಳುವ ಪಾಕ್‌ ಐಎಸ್‌ಐ ಏಜೆಂಟ್‌ಗಳು ಪಂಜಾಬ್‌ ಪ್ರಾಂತ್ಯದಲ್ಲಿ ಮಹಿಳೆಯರಿಗೆ ಫೇಸ್‌ಬುಕ್‌ನಲ್ಲಿ ಬಲೆ ಬೀಸುತ್ತಿದ್ದಾರೆ ಎಂಬುದು ತಿಳಿದುಬಂದಿದೆ.

ಪಂಜಾಬ್‌ನಲ್ಲಿ ಉಗ್ರಗಾಮಿ ಚಟುವಟಿಕೆ ಬಹುತೇಕ ಸ್ಥಗಿತಗೊಂಡಿದ್ದು, ಇದನ್ನು ಸಕ್ರಿಯಗೊಳಿಸಲು ಐಎಸ್‌ಐ ತೀವ್ರ ಪ್ರಯತ್ನ ನಡೆಸಿದೆ. ಇದಕ್ಕಾಗಿ ಐಎಸ್‌ಐ ವಿಶೇಷ ತರಬೇತಿ ನೀಡಿದ್ದು, ಪಂಜಾಬ್‌ನ ಸಂಪ್ರದಾಯದ ಜತೆಗೆ ಅಲ್ಲಿನ ಜನರು ಮಾತನಾಡುವ ರೀತಿಯನ್ನೂ ತನ್ನ ಏಜೆಂಟ್‌ಗಳಿಗೆ ಕಲಿಸುತ್ತಿದೆ. ಸಾಮಾನ್ಯ ವಾಗಿ ಪಾಕ್‌ ಭಾಗದಲ್ಲಿರುವ ಖಲಿಸ್ತಾನಿ ಉಗ್ರರನ್ನು ಈ ಕೃತ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ. ಮೂಲಗಳ ಪ್ರಕಾರ ಈ ಏಜೆಂಟರು ನೇಪಾಳಕ್ಕೆ ಬಂದು ಅಲ್ಲಿಂದ ಉತ್ತರ ಪ್ರದೇಶದ ಮೂಲಕ ಪಂಜಾಬ್‌ಗ ಬರುತ್ತಾರೆ. 

ಓರ್ವ ಏಜೆಂಟ್‌ ಬಂಧನ: ಅ.12ರಂದು ಎಹಸಾನ್‌ ಉಲ್‌ ಹಕ್‌ ಎಂಬ ಏಜೆಂಟ್‌ ಬಂಧನವಾದಾಗ ಐಎಸ್‌ಐನ ಈ ತಂತ್ರ ಬಯಲಿಗೆ ಬಂದಿದೆ. ಎಹಸಾನ್‌ ವಿಚ್ಛೇದಿತನಾಗಿದ್ದು ಪಾಕ್‌ನಿಂದ ಸೌದಿ ಅರೇಬಿಯಾಗೆ ಹೋಗಿ, ಅಲ್ಲಿ ಆಸ್ಟ್ರಿಯಾದ ಮಹಿಳೆಯನ್ನು ವಿವಾಹವಾಗಿದ್ದ. ಆಸ್ಟ್ರಿಯಾ ಪಾಸ್‌ಪೋರ್ಟ್‌ ಪಡೆದ ಆತ, ಪತ್ನಿಗೆ ವಿಚ್ಛೇದನ ನೀಡಿದ.

2011ರಲ್ಲೇ ಫೇಸ್‌ಬುಕ್‌ನಲ್ಲಿ ಪರಿಚಯವಾದ ಪಂಜಾಬ್‌ನ ಬಲ್ವಿಂದರ್‌ ಕೌರ್‌ಳನ್ನು 2012ರಲ್ಲಿ ವಿವಾಹವಾಗಿದ್ದಷ್ಟೇ ಅಲ್ಲ, ಈತ ಆಧಾರ್‌, ಪ್ಯಾನ್‌ ಕಾರ್ಡ್‌ ಮಾಡಿಸಿದ್ದಾನೆ. ನಕಲಿ ದಾಖಲೆ ನೀಡಿ ಜಲಂಧರ್‌ ಬಳಿ ಹಳ್ಳಿಯಲ್ಲಿ ಆಸ್ತಿಯನ್ನೂ ಖರೀದಿಸಿದ್ದಾನೆ. ಇದೇ ರೀತಿ 2010ರಲ್ಲಿ ಜಲಂಧರ್‌ ಹಾಗೂ ಫಿರೋಜ್‌ಪುರದಲ್ಲಿ ತಲಾ ಒಬ್ಬರನ್ನು ಬಂಧಿಸಲಾಗಿತ್ತು. ಇವರೂ ಇದೇ ವಿಧಾನವನ್ನು ಅನುಸರಿಸುತ್ತಿದ್ದರು.

ಟಾಪ್ ನ್ಯೂಸ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.