ಬೀಜಗನಹಳ್ಳಿ ದೊಡ್ಡಕೆರೆಯಲ್ಲಿ ತೆಪ್ಪೋತ್ಸವ  


Team Udayavani, Oct 25, 2017, 1:22 PM IST

m1-teppotsava.jpg

ಹುಣಸೂರು: ತಾಲೂಕಿನ ಮೈಸೂರು-ಹುಣಸೂರು ಹೆದ್ದಾರಿ ಬಳಿಯ ಬೀಜಗನಹಳ್ಳಿಯ ನೀರು ತುಂಬಿದ ದೊಡ್ಡಕೆರೆಯಲ್ಲಿ ಮೂರು ಊರಿನ ಗ್ರಾಮಸ್ಥರು ಶ್ರೀ ಬಸವೇಶ್ವರ ದೇವರ ತೆಪ್ಪೋತ್ಸವ ನಡೆಸಿ ಹರಕೆ ತೀರಿಸಿ ಕೃತಾರ್ಥರಾದರು. ಬೀಜಗನಹಳ್ಳಿ, ರೆಡ್ಡಿಕೊಪ್ಪಲು, ಮಂಟಿಕೊಪ್ಪಲು ಗ್ರಾಮಸ್ಥರು ಮಂಗಳವಾರ ಗ್ರಾಮದ ಬಸವೇಶ್ವರ ದೇವರನ್ನು ಬೊಂಬು-ಬಾಳೆ ದಿಂಡಿನಿಂದ ನಿರ್ಮಿಸಿದ್ದ ತೆಪ್ಪದಲ್ಲಿ ಕುಳ್ಳಿರಿಸಿ 3 ಬಾರಿ ಕೆರೆಯಲ್ಲಿ ತೆಪ್ಪ ವಾಡಿಸಿದರು.

ತುಂಬಿದ ಕೆರೆಯಲ್ಲಿ ತೆಪ್ಪೋತ್ಸವ ಕಣ್ತುಂಬಿಕೊಳ್ಳಲು ಸುಮಾರು 4 ಸಾವಿರಕ್ಕೂ ಹೆಚ್ಚು ಮಂದಿ ಕೆರೆ ಸುತ್ತ ಹಾಗೂ ಏರಿಮೇಲೆ ಬೆಳಗ್ಗೆಯಿಂದಲೇ ಬಿರು ಬಿಸಲಿನಲ್ಲೇ ಜಮಾಯಿಸಿದ್ದರು. ದೇವರಿಗೆ ಜೈಕಾರ ಹಾಕುತ್ತಾ ಭಕ್ತಿಭಾವ ಮೆರೆದರು. ಕೆರೆ ಬಳಿ ಗ್ರಾಮಸ್ಥರು ಮಜ್ಜಿಗೆ, ಪಾನಕ ನೀಡಿ ದಣಿವಾರಿಸಿದರು. ಸೋಮವಾರ ರಾತ್ರಿ ಮೂರು ಊರುಗಳಲ್ಲೂ ದೇವರ ಉತ್ಸವ ವಿಜಂಭಣೆಯಿಂದ ನಡೆಯಿತು.

ಬಾಗಿನ ಅರ್ಪಿಸಿದರು: ಏತ ನೀರಾವರಿ ಮೂಲಕ ಕೆರೆ ತುಂಬಿಸಿದ ಸಂತಸದಲ್ಲಿದ್ದ ಶಾಸಕ ಎಚ್‌.ಪಿ.ಮಂಜುನಾಥ್‌, ಸಣ್ಣನೀರಾವರಿ ಮಾಜಿ ಮಂತ್ರಿ ಶಿವರಾಜತಂಗಡಗಿ, ಜಿಪಂ ಸದಸ್ಯೆ ಡಾ.ಪುಷ್ಪ, ತಾಪಂ ಅಧ್ಯಕ್ಷೆ ಪದ್ಮಮ್ಮ, ಹಾಗೂ ಗಣ್ಯರು ಗಂಗೆ ಪೂಜೆ ನಡೆಸಿ ಕೆರೆಗೆ ಬಾಗಿನ ಅರ್ಪಿಸಿದರು. ನಂತರ ಗ್ರಾಮಸ್ಥರು ಶಾಸಕ, ಮಾಜಿ ಮಂತ್ರಿ ಅವರನ್ನು ಸನ್ಮಾನಿಸಿದರು.

ಜೆಡಿಎಸ್‌ ಮುಖಂಡ ಎಚ್‌.ವಿಶ್ವನಾಥ್‌, ಜೆಡಿಎಸ್‌ ಅಧ್ಯಕ್ಷ ಹರಳಹಳ್ಳಿ ಮಾದೇಗೌಡ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ಪೂಜೆ ಸಲ್ಲಿಸಿದರು. ಗ್ರಾಪಂ ಅಧ್ಯಕ್ಷೆ ಸೀತಮ್ಮ, ಸದಸ್ಯರು, ಎಪಿಎಂಸಿ ಸದಸ್ಯ ಮಹದೇವ್‌, ತಾಪಂ ಸದಸ್ಯ ರವಿಪ್ರಸನ್ನ, ಬಿಜೆಪಿ ಮುಖಂಡ ನಾಗರಾಜಪ್ಪ, ತಾಲೂಕು ಗ್ರಾಮಗಳ ಯಜಮಾನರು, ಮುಖಂಡರು ಇದ್ದರು. ಜನರನ್ನು ನಿಯಂತ್ರಿಸಲು ವೃತ್ತ ನಿರೀಕ್ಷಕ ಪೂವಯ್ಯ, ಪಿಎಸ್‌ಐಗಳಾದ ಷಣ್ಮುಗಂ, ಪುಟ್ಟಸ್ವಾಮಿ ಬಂದೋಬಸ್ತ್ ಕಲ್ಪಿಸಿದ್ದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.