ಹೆದ್ದಾರಿಯಲ್ಲಿ ದೂರ ಹೋದಷ್ಟೇ ಶುಲ್ಕ ಸಾಕು
Team Udayavani, Oct 28, 2017, 7:15 AM IST
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾಗುವ ವಾಹನಗಳು ತಾವು ಸಾಗಿದ ದೂರಕ್ಕೆ ಮಾತ್ರ ಶುಲ್ಕ ಪಾವತಿಸುವಂಥ ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸಾರಿಗೆ ಇಲಾಖೆಯ ಕಾರ್ಯದರ್ಶಿ ಯುದ್ಧ್ವೀರ್ ಸಿಂಗ್ ಮಲಿಕ್ ಅವರು ಶುಕ್ರವಾರ ಈ ವಿಚಾರ ತಿಳಿಸಿದ್ದಾರೆ. ಇದರಿಂದ, ವಾಹನ ಸವಾರರಿಗೆ ಶುಲ್ಕದ ಹೊರೆ ಖಂಡಿತವಾಗಿಯೂ ಇಳಿಕೆಯಾಗುತ್ತದೆ ಎಂದು ಅವರು ಬಣ್ಣಿಸಿದ್ದಾರೆ.
ಟೋಲ್ ವ್ಯವಸ್ಥೆಯಲ್ಲೇ ವಿನೂತನ ಹೆಜ್ಜೆಯೆಂದು ಹೇಳಲಾಗುವ “ಇಂಟಲಿಜೆನ್ಸ್ ಟ್ರಾನ್ಸ್ಪೊàರ್ಟ್ ಮ್ಯಾನೇಜ್ಮೆಂಟ್’ ಎಂಬ ಹೊಸ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ರೂಪಿಸುತ್ತಿದ್ದು, ಮುಂದಿನ ವರ್ಷ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಮಲಿಕ್ ತಿಳಿಸಿದರು.
ಈ ಬಗ್ಗೆ ವಿವರಿಸಿದ ಅವರು, “”ಈಗ ಸದ್ಯಕ್ಕೆ ಚಾಲ್ತಿಯಲ್ಲಿರುವ ಟೋಲ್ ಪದ್ಧತಿಯನ್ನು ಮುಂದಿನ ವರ್ಷದಿಂದ ಕೈಬಿಡಲು ನಿರ್ಧರಿಸ ಲಾಗಿದ್ದು, ಹೊಸ ವ್ಯವಸ್ಥೆ ಜಾರಿಗೆ ಬರಲಿದೆ. ಅದರಂತೆ, ಹೆದ್ದಾರಿಗಳಲ್ಲಿ ಸಾಗುವ ಪ್ರತಿ ಯೊಂದು ವಾಹನ, ತಾನು ಚಲಿಸಿದ ದೂರ ಕ್ಕಷ್ಟೇ ಶುಲ್ಕ ಕಟ್ಟುವ ಅನುಕೂಲ ಕಲ್ಪಿಸಲಾ ಗುತ್ತದೆ. ಇದು, ವಾಹನ ಸವಾರರಿಗೆ ಅನ ಗ ತ್ಯ ವಾಗಿ ತಮ್ಮ ಬಳಕೆಗೂ ಮೀರಿ ಹೆಚ್ಚು ಟೋಲ್ ಕಟ್ಟುವಂಥ ಹೊರೆಯನ್ನು ತಪ್ಪಿಸುತ್ತದೆ” ಎಂದು ತಿಳಿಸಿದರು.
“”ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾಗುವ ವಾಹನವು ಚಲಿಸಿದ ದೂರ ಹಾಗೂ ಅದಕ್ಕೆ ಅನುಗುಣವಾದ ಶುಲ್ಕವನ್ನು ನಿಗದಿಗೊಳಿ ಸಲೆಂದೇ “ಡಿಸ್ಟನ್ಸ್ ಬೇಸ್ಡ್ ಎಲೆಕ್ಟ್ರಾನಿಕ್ ಟೋಲಿಂಗ್’ ಎಂಬ ವಿನೂತನ ತಂತ್ರಜ್ಞಾನ ವನ್ನು ಅಳವಡಿಸಲಾಗುವುದು. ಈಗಾಗಲೇ, ಈ ತಂತ್ರಜ್ಞಾನ ಅಮೆರಿಕ, ಆಸ್ಟ್ರೇಲಿಯಾದಂಥ ರಾಷ್ಟ್ರಗಳಲ್ಲಿ ಚಾಲ್ತಿಯಲ್ಲಿವೆ” ಎಂದು ಮಲಿಕ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ