ಬಾಬರಿ-ರಾಮ ಮಂದಿರ: ನನ್ನದು ಶಾಂತಿದೂತನ ಪಾತ್ರ: ಶ್ರೀ ಶ್ರೀ
Team Udayavani, Oct 28, 2017, 3:37 PM IST
ಹೊಸದಿಲ್ಲಿ : ಬಾಬರಿ ಮಸೀದಿ – ರಾಮ ಮಂದಿರ ವಿವಾದದಲ್ಲಿ ತಾನು ಶಾಂತಿದೂತನ ಪಾತ್ರವಹಿಸುತ್ತಿರುವುದಾಗಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಗುರು ಶ್ರೀ ಶ್ರೀ ರವಿಶಂಕರ್ ಹೇಳಿದ್ದಾರೆ.
ಬಾಬರಿ ಮಸೀದಿ – ರಾಮ ಮಂದಿರ ವಿವಾದವನ್ನು ಕೋರ್ಟ್ ಹೊರಗೆ ಬಗೆಹರಿಸುವ ಪ್ರಸ್ತಾವವನ್ನು ಶ್ರೀ ಶ್ರೀ ಉಭಯ ಕಡೆಯವರ ಮುಂದೆ ಇಟ್ಟಿದ್ದಾರೆ ಮತ್ತು ಆ ನಿಟ್ಟಿನಲ್ಲಿ ಪ್ರಯತ್ನವನ್ನು ಆರಂಭಿಸಿದ್ದಾರೆ ಎಂಬ ವದಂತಿಗಳ ನಡುವೆ ಶ್ರೀ ಶ್ರೀ ರವಿಶಂಕರ್ ತಾನು ಶಾಂತಿದೂತನ ಪಾತ್ರ ವಹಿಸುತ್ತಿರುವುದಾಗಿ ಸ್ಪಷ್ಟಪಡಿಸಿದರು. ಹಿಂದು – ಮುಸ್ಲಿಂ ಸಹೋದರತೆಗೆ ಅವರು ಕರೆ ನೀಡಿದರು.
2003-04ರಲ್ಲೇ ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗಿತ್ತು. ಆದರೆ ಇಂದು ಅಂದಿಗಿಂತಲೂ ಹೆಚ್ಚು ಧನಾತ್ಮಕ ವಾತಾವರಣವಿದೆ. ಅಂತೆಯೇ ನಾನೀಗ ಈ ನಿಟ್ಟಿನಲ್ಲಿ ಶಾಂತಿದೂತನ ಪಾತ್ರ ವಹಿಸಲು ಮುಂದಾಗಿದ್ದೇನೆ. ಇದು ಸಂಪೂರ್ಣವಾಗಿ ರಾಜಕಾರಣೇತರ ಯತ್ನವಾಗಿದೆ ಎಂದು ಶ್ರೀ ಶ್ರೀ ರವಿಶಂಕರ್ ಹೇಳಿದರು.
ಡಿಸೆಂಬರ್ 5ರಿಂದ ಸುಪ್ರೀಂ ಕೋರ್ಟ್ ಐತಿಹಾಸಿಕ ಬಾಬರಿ ಮಸೀದಿ ಮತ್ತು ರಾಮ ಮಂದಿರ ಪ್ರಕರಣದ ಅಂತಿಮ ವಿಚಾರಣೆಯನ್ನು ಆರಂಭಿಸಲಿದೆ. ಡಿ.6 ಬಾಬರಿ ಮಸೀದಿ ಧ್ವಂಸದ 25ನೇ ವರ್ಷವಾಗಿದೆ.
ಹಿಂದುಗಳು ಮತ್ತು ಮುಸ್ಲಿಮರು ಪರಸ್ಪರರ ನಡುವಿನ ಹಗೆತನವನ್ನು ಬದಿಗಿರಿಸಿ ಶಾಂತಿ ಸಾಧನೆಗೆ ಮುಂದಾಗಬೇಕು ಎಂದು ಶ್ರೀ ಶ್ರೀ ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ