ಪಟೇಲ್ ಮೀಸಲಾತಿ, ಕೈ ಗೆ ನ.3 ಅಂತಿಮ ಗಡುವು; ರಾಹುಲ್ ಗೆ ಹಾರ್ದಿಕ್
Team Udayavani, Oct 28, 2017, 6:04 PM IST
ಅಹಮದಾಬಾದ್:ಪಾಟಿದಾರ್ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ನವೆಂಬರ್ 3ರೊಳಗೆ ಸ್ಪಷ್ಟಪಡಿಸಬೇಕು. ಇಲ್ಲದಿದ್ದಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅನುಭವಿಸಿದ ಪರಿಸ್ಥಿತಿಯನ್ನೇ ಎದುರಿಸಬೇಕಾಗುತ್ತದೆ ಎಂದು ಪಟೇಲ್ ಮೀಸಲಾತಿ ಹೋರಾಟಗಾರರ ಮುಖಂಡ ಹಾರ್ದಿಕ್ ಪಟೇಲ್ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಅಗ್ನಿಪರೀಕ್ಷೆಗೆ ಒಡ್ಡಿದ್ದಾರೆ.
ಒಂದು ವೇಳೆ ಕಾಂಗ್ರೆಸ್ ಪಕ್ಷ ತನ್ನ ನಿಲುವನ್ನು ನ.3ರೊಳಗೆ ಸ್ಪಷ್ಟಪಡಿಸದೇ ಇದ್ದರೆ ಸೂರತ್ ರಾಲಿಯಲ್ಲಿ ಅಮಿತ್ ಶಾ ಅನುಭವಿಸಿದ ಪರಿಸ್ಥಿತಿಯನ್ನೇ ಅನುಭವಿಸಬೇಕಾಗುತ್ತದೆ ಎಂದು ಹಾರ್ದಿಕ್ ಟ್ವೀಟ್ ಮಾಡಿದ್ದಾರೆ.
ಕಳೆದ ತಿಂಗಳು ಸೂರತ್ ನಲ್ಲಿ ಪಾಟಿದಾರ್ ಸಮುದಾಯದ ಮುಖಂಡರ ಜತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾತುಕತೆ ನಡೆಸಲು ಮುಂದಾದ ವೇಳೆ ಹಾರ್ದಿಕ್ ಪಟೇಲ್ ಬೆಂಬಲಿಗರು ಘೋಷಣೆ ಕೂಗಿ ಗದ್ದಲ ಎಬ್ಬಿಸಿ, ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದರು.
ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ತನ್ನನ್ನು ಬೆಂಬಲಿಸುವಂತೆ ಆಹ್ವಾನ ನೀಡಿರುವ ಕಾಂಗ್ರೆಸ್ಗೆ ಪಟೇಲ್ ಮೀಸಲಾತಿ ಹೋರಾಟಗಾರರ ಮುಖಂಡ ಹಾರ್ದಿಕ್ ಪಟೇಲ್ ಈಗಾಗಲೇ ಹಲವು ಷರತ್ತುಗಳನ್ನು ವಿಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!