ಬೇಡಿಕೆ ಈಡೇರಿಕೆಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ 


Team Udayavani, Oct 29, 2017, 2:54 PM IST

29-Mng–12.jpg

ಪುತ್ತೂರು: ಎರಡು ವರ್ಷಗಳಿಂದ ಬೇಡಿಕೆ ಮುಂದಿಡುತ್ತಿದ್ದರೂ ಸ್ಪಂದನೆ ಸಿಕ್ಕಿಲ್ಲ ಎಂದು ಆಗ್ರಹಿಸಿ ತಾಲೂಕು ಪಂಚಾಯತ್‌ ಸದಸ್ಯೆ ಕೆ.ಟಿ. ವಲ್ಸಮ್ಮ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ್‌ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ತಾ.ಪಂ. ಸಾಮಾನ್ಯ ಸಭೆ ನಡೆಯಿತು.
ಸಭೆ ಆರಂಭವಾಗುತ್ತಿದ್ದಂತೆ ಕಪ್ಪು ಬಟ್ಟೆ ಹೊದ್ದುಕೊಂಡು ಆಗಮಿಸಿದ ಕೆ.ಟಿ. ವಲ್ಸಮ್ಮ, ವೇದಿಕೆಯಲ್ಲಿದ್ದವರಿಗೆ ಮನವಿ ನೀಡಿದರು. ಬಳಿಕ ಕಪ್ಪು ಬಟ್ಟೆಯನ್ನು ಬಾಯಿಗೆ ಕಟ್ಟಿ ಸಭೆಯಲ್ಲಿ ಕುಳಿತು ಕೊಂಡರು. ಇವರ ಪರವಾಗಿ ಸದಸ್ಯೆ ಉಷಾ ಅಂಚನ್‌ ವಿಷಯ ಪ್ರಸ್ತಾಪಿಸಲು ಮುಂದಾದರು. ಇದನ್ನು ತಡೆದ ತಾ.ಪಂ. ಇಒ ಜಗದೀಶ್‌, ಮತ್ತೂಮ್ಮೆ ವಿಚಾರವನ್ನು ಹೇಳುವ ಅಗತ್ಯವಿಲ್ಲ. ಮನವಿ ನೀಡಿದ್ದಾರೆ. ಆದರೆ ಸಭೆ ಯಲ್ಲಿ ಮನವಿ ನೀಡಿದ ಕಾರಣ, ಪರಿಶೀಲಿ ಸಲು ಸ್ವಲ್ಪ ಸಮಯ ಬೇಕು. ಬಳಿಕವಷ್ಟೇ ಉತ್ತರಿಸಲಾಗುವುದು ಎಂದರು.

ಮೇಲಧಿಕಾರಿ ಗಮನಕ್ಕೆ ತರುವೆ
ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ್‌ ಮಾತನಾಡಿ, ಸೀಮಿತ ಅನುದಾನವಿದ್ದರೂ ಇರುವುದನ್ನು ಸಮಾನವಾಗಿ ಹಂಚಲಾಗಿದೆ. ಇದು ಸದಸ್ಯ ರಿಗೂ ಗೊತ್ತಿದೆ. ನಿಮ್ಮ ಬೇಡಿಕೆಯನ್ನು ಮೇಲಧಿಕಾರಿಗಳ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ. ಕೆಡಿಪಿ ಸಭೆ ಯಲ್ಲಿ ಪ್ರತಿಭಟನೆ ಮಾಡುವುದು ಸರಿಯಲ್ಲ. ಪ್ರತಿಭಟನೆ ಹಿಂದೆಗೆದುಕೊಳ್ಳಿ ಎಂದು ಮನವಿ ಮಾಡಿಕೊಂಡರು.

ಜಿಲ್ಲಾ ಪಂಚಾಯತ್‌ ಸದಸ್ಯ ಸರ್ವೋತ್ತಮ ಗೌಡ ಮಾತನಾಡಿ, ಇದಕ್ಕೆ ಉತ್ತರ ನೀಡ ಬೇಕಾದವರು ಕಂದಾಯ
ಇಲಾಖೆ ಅಧಿಕಾರಿಗಳು. ಸದಸ್ಯೆ ನೀಡಿದ ಮನವಿಯಲ್ಲಿ ಹೆಚ್ಚಿನ ಬೇಡಿಕೆಗಳು ಕಂದಾಯ ಇಲಾಖೆಗೆ ಸಂಬಂಧಪಟ್ಟಿದೆ ಎಂದರು.

ಪಠ್ಯಪುಸಕ ಕೊರತೆ 
ಪುತ್ತೂರು ತಾಲೂಕಿನ ಪ್ರಾಥಮಿಕ ಶಾಲೆಗಳು ಆರಂಭವಾಗಿ ಆರು ತಿಂಗಳು ಕಳೆಯಿತು. ಆದರೆ 3 ಸಾವಿರ ವಿದ್ಯಾರ್ಥಿಗಳಿಗೆ ಇನ್ನೂ ಪಠ್ಯಪುಸ್ತಕ ಕೊರತೆ ಇದೆ ಎಂಬ ಮಾಹಿತಿಯನ್ನು ಸಭೆಗೆ ನೀಡಲಾಯಿತು. ಇದು ಸದಸ್ಯೆ ಆಕ್ರೋಶಕ್ಕೂ ಕಾರಣವಾಯಿತು.  

ಈ ಬಗ್ಗೆ ಮಾತನಾಡಿದ ಸದಸ್ಯೆ ತೇಜಸ್ವೀನಿ, ರಾಜ್ಯ ಸರಕಾರದ ನಿರ್ಲಕ್ಷ್ಯದಿಂದ ಹೀಗಾಗಿದೆ. ಕೆಲವೇ ದಿನದಲ್ಲಿ ಪರೀಕ್ಷೆಗಳು ಬರಲಿವೆ. ಇದಕ್ಕೆ 3 ಸಾವಿರ ವಿದ್ಯಾರ್ಥಿಗಳು ಏನು ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಉಷಾ ಅಂಚನ್‌ ವಿವರಣೆ ಕೇಳಿದರು. 

ಉತ್ತರಿಸಿದ ಶಿಕ್ಷಣ ಸಂಯೋಜನಾಧಿಕಾರಿ, ಮುಖ್ಯಶಿಕ್ಷಕರು ಬೇಡಿಕೆ ಸಲ್ಲಿಸಿದ ಪಠ್ಯಪುಸ್ತಕಗಳನ್ನು ಪೂರೈಕೆ ಮಾಡಲಾಗಿದೆ. ಆದರೆ ಹೆಚ್ಚುವರಿ ಬೇಡಿಕೆಯ ಪಠ್ಯಪುಸ್ತಕ ಸರಬರಾಜಾಗಿಲ್ಲ.  ಈ ಬಗ್ಗೆ ಮೇಲಧಿಕಾರಿಗಳಲ್ಲಿ ಪ್ರಶ್ನಿಸಿದಾಗ, ಮುದ್ರಣ ಆಗಿಲ್ಲ ಎಂಬ ಉತ್ತರ ನೀಡಿದ್ದಾರೆ ಎಂದರು. 

ಟಾಪ್ ನ್ಯೂಸ್

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.