ನಾಯಕಿಯರ ಹುಡುಕಾಟದಲ್ಲಿ ಶಶಾಂಕ್‌


Team Udayavani, Oct 30, 2017, 10:27 AM IST

puni-shashank.jpg

ನಿರ್ದೇಶಕ ಶಶಾಂಕ್‌ ಅವರ ಎರಡು ಚಿತ್ರಗಳು ಸೆಟ್ಟೇರಲು ಸಿದ್ಧವಾಗಿವೆ. ಒಂದು ಅವರ ನಿರ್ಮಾಣದ ಸಿನಿಮಾವಾದರೆ, ಇನ್ನೊಂದು ಅವರ ನಿರ್ದೇಶನದ ಸಿನಿಮಾ. ಹೌದು, ಶಶಾಂಕ್‌ ಅವರು “ತಾಯಿಗೆ ತಕ್ಕ ಮಗ’ ಸಿನಿಮಾವನ್ನು ನಿರ್ಮಿಸುತ್ತಿರುವ ವಿಷಯ ಗೊತ್ತೇ ಇದೆ. ಅಜೇಯ್‌ ರಾವ್‌ ಈ ಚಿತ್ರದ ನಾಯಕ. ವಿಶೇಷ ಅಂದರೆ “ತಾಯಿಗೆ ತಕ್ಕ ಮಗ’ ಚಿತ್ರ ಅಜೇಯ್‌ ರಾವ್‌ ಅವರ 25ನೇ ಸಿನಿಮಾ.

ಯಾವುದೇ ನಟನಿಗೂ 25ನೇ ಸಿನಿಮಾ ಎಂಬುದು ಕೆರಿಯರ್‌ನ ಮೈಲಿಗಲ್ಲು. ಈಗ ಅಜೇಯ್‌ ರಾವ್‌ ಕೂಡಾ “ತಾಯಿಗೆ ತಕ್ಕ ಮಗ’ ಚಿತ್ರದ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಶಶಾಂಕ್‌ ಸಿನಿಮಾಸ್‌ನಡಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಆರಂಭದಲ್ಲಿ ರಘು ಕೋವಿ ಎನ್ನುವವರು ಈ ಚಿತ್ರವನ್ನು ನಿರ್ದೇಶಿಸುತ್ತಾರೆಂದು ಹೇಳಲಾಗಿತ್ತು. ಈಗ “ತಾಯಿಗೆ ತಕ್ಕ ಮಗ’ ಚಿತ್ರದ ನಿರ್ದೇಶಕರು ಬದಲಾಗಿದ್ದಾರೆ.

ರಘು ಜಾಗಕ್ಕೆ ವೇದ್‌ಗುರು ಬಂದಿದ್ದಾರೆ. ಯಾರು ಈ ವೇದ್‌ಗುರು ಎಂದರೆ “ದಂಡಯಾತ್ರೆ’ ಸಿನಿಮಾ ಹೆಸರು ಹೇಳಬೇಕು. ಅಜೇಯ್‌ ರಾವ್‌ “ದಂಡಯಾತ್ರೆ’ ಎಂಬ ಸಿನಿಮಾದಲ್ಲಿ ನಟಿಸುವ ಸುದ್ದಿಯನ್ನು ಓದಿರಬಹುದು. ಆ ಚಿತ್ರ ಆರಂಭಿಸಿದ್ದು ಇದೇ ವೇದ್‌ಗುರು. ಈಗ ಅಜೇಯ್‌ ಜೊತೆ “ತಾಯಿಗೆ ತಕ್ಕ ಮಗ’ ಚಿತ್ರ ಮಾಡುತ್ತಿದ್ದಾರೆ. ಚಿತ್ರಕ್ಕೆ ನಾಯಕಿಯ ಆಯ್ಕೆಯೇ ಚಿತ್ರತಂಡಕ್ಕೆ ದೊಡ್ಡ ಕಗ್ಗಂಟಾಗಿದೆ.

ಚಿತ್ರೀಕರಣಕ್ಕೆ ಹೊರಡಲು ಅಣಿಯಾದರೂ ನಾಯಕಿ ಮಾತ್ರ ಫಿಕ್ಸ್‌ ಆಗಿಲ್ಲ. ಚಿತ್ರತಂಡ ಈಗಾಗಲೇ ಸುಮಾರು 100ಕ್ಕೂ ಹೆಚ್ಚು ಮಂದಿಯನ್ನು ಆಡಿಷನ್‌ ಮಾಡಿದ್ದು, ಯಾವ ನಟಿಯೂ ಅದರಲ್ಲಿ ಆಯ್ಕೆಯಾಗಿಲ್ಲ. ಅಲ್ಲಿಗೆ ಹೊಸಬರನ್ನು ಲಾಂಚ್‌ ಮಾಡಬೇಕೆಂಬ ಆಸೆಯನ್ನು ಚಿತ್ರತಂಡ ಕೈ ಬಿಟ್ಟಿದ್ದು, ಪ್ರಸ್ತುತ ಚಾಲ್ತಿಯಲ್ಲಿರುವ ನಟಿಯೇ ನಾಯಕಿಯಾಗುವ ಸಾಧ್ಯತೆ ಇದೆಯಂತೆ.

“ಸುಮಾರು 100ಕ್ಕೂ ಹೆಚ್ಚು ಮಂದಿಯನ್ನು ಆಡಿಷನ್‌ ಮಾಡಿದೆವು. ಆದರೆ, ಪಾತ್ರಕ್ಕೆ ಯಾರೂ ಸರಿ ಹೊಂದಿಲ್ಲ. ಒಬ್ಬರಲ್ಲಿ ಸೌಂದರ್ಯವಿದ್ದರೆ ನಟನೆ ಇರೋದಿಲ್ಲ. ನಟನೆ ಚೆನ್ನಾಗಿ ಮಾಡಿದರೆ ಪಾತ್ರಕ್ಕೆ ಬೇಕಾದ ಲುಕ್‌ ಇರೋದಿಲ್ಲ. ಹಾಗಾಗಿ, ಈಗ ಪ್ರಸ್ತುತ ಚಾಲ್ತಿಯಲ್ಲಿರುವ ನಟಿಯೊಬ್ಬರನ್ನೇ ನಾಯಕಿಯನ್ನಾಗಿಸುವ ಬಗ್ಗೆ ಆಲೋಚಿಸುತ್ತಿದ್ದೇವೆ’ ಎನ್ನುತ್ತಾರೆ ಶಶಾಂಕ್‌.

“ತಾಯಿಗೆ ತಕ್ಕ ಮಗ’ ಚಿತ್ರದಲ್ಲಿನ ತಾಯಿ ಪಾತ್ರ ಕೂಡಾ ಇನ್ನಷ್ಟೇ ಆಯ್ಕೆಯಾಗಬೇಕಿದೆ. ಈಗಾಗಲೇ ಬೇಡಿಕೆಯಲ್ಲಿರುವ ನಟಿಯೊಬ್ಬರಲ್ಲಿ ಮಾತುಕತೆ ನಡೆದಿದ್ದು, ಶೀಘ್ರದಲ್ಲೇ ಅಂತಿಮವಾಗಲಿದೆಯಂತೆ. ಇನ್ನು, ಪುನೀತ್‌ ರಾಜಕುಮಾರ್‌ ಅವರಿಗೂ ಶಶಾಂಕ್‌ ಸಿನಿಮಾ ಮಾಡುತ್ತಿರುವ ವಿಚಾರ ನಿಮಗೆ ಗೊತ್ತೇ. ಶಶಾಂಕ್‌ ನಿರ್ದೇಶನದ ಈ ಚಿತ್ರ ಪುನೀತ್‌ ಅವರ ಬ್ಯಾನರ್‌ನಲ್ಲೇ ಮೂಡಿಬರುವ ಸಾಧ್ಯತೆ ಇದೆ.

ಈ ಚಿತ್ರದ ಸ್ಕ್ರಿಪ್ಟ್ ಕೆಲಸ ಮುಗಿದಿದ್ದು, ಜನವರಿಯಿಂದ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರಕ್ಕೂ ಶಶಾಂಕ್‌ ನಾಯಕಿಯ ಹುಡುಕಾಟದಲ್ಲಿದ್ದಾರೆ ಶಶಾಂಕ್‌. ಆಡಿಷನ್‌ನಲ್ಲಿ ಹೊಸಬರು ಚೆನ್ನಾಗಿ ಪರ್‌ಫಾರ್ಮೆನ್ಸ್‌ ತೋರಿಸಿದ್ದರೆ ಅವರನ್ನೇ ಎರಡು ಸಿನಿಮಾಗಳಿಗೂ ನಾಯಕಿಯನ್ನಾಗಿಸುವ ಆಲೋಚನೆ ಕೂಡಾ ಶಶಾಂಕ್‌ ಅವರಿಗಿತ್ತಂತೆ. ಆದರೆ, ಆಡಿಷನ್‌ನಲ್ಲಿ ಯಾರೂ ಆಯ್ಕೆಯಾಗದ ಕಾರಣ ನಾಯಕಿಯರ ಹುಡುಕಾಟದಲ್ಲಿದ್ದಾರೆ ಶಶಾಂಕ್‌. 

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.