ಬ್ಯಾಡ್ಮಿಂಟನ್‌ ದಿಗ್ಗಜ ಶ್ರೀಕಾಂತ್‌ಗೆ ಮಂಡಿನೋವಿನ ಚಿಂತೆ


Team Udayavani, Oct 31, 2017, 7:00 AM IST

Kidambi-Srikanth-2017-30.jpg

ಪ್ಯಾರಿಸ್‌: ಪ್ರಚಂಡ ಫಾರ್ಮ್ನಲ್ಲಿರುವ ಭಾರತೀಯ ಶಟ್ಲರ್‌ ಕಿದಂಬಿ ಶ್ರೀಕಾಂತ್‌ ಈ ಋತುವಿನಲ್ಲಿ ಸೂಪರ್‌ ಸೀರೀಸ್‌ ಬ್ಯಾಡ್ಮಿಂಟನ್‌ ಕೂಟದಲ್ಲಿ ಐದು ಬಾರಿ ಫೈನಲಿಗೇರಿದ್ದು ಸತತ ನಾಲ್ಕು ಸಲ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದಾರೆ. ಈ ಮೂಲಕ ವಿಶ್ವದ ನಂ.1 ಸ್ಥಾನಕ್ಕೇರುವತ್ತ ಹೆಜ್ಜೆ ಇಟ್ಟಿದ್ದಾರೆ. ಆದರೆ ಅವರಿಗೆ ತಮ್ಮ ಬಲಗಾಲ ಮಂಡಿನೋವಿನ ಚಿಂತೆ ಕಾಡುತ್ತಿದೆ. ಫ್ರೆಂಚ್‌ ಓಪನ್‌ನಲ್ಲೂ ಅವರು ಈ ನೋವಿನಲ್ಲೇ ಆಡಿದ್ದಾರೆ. ಇದಕ್ಕೆ ಯಾವ ರೀತಿಯಲ್ಲಿ ಪರಿಹಾರ ಕಂಡುಕೊಳ್ಳುವುದೆಂದು ಗಂಭೀರವಾಗಿ ಚಿಂತಿಸಿದ್ದಾರೆ.

ಶ್ರೀಕಾಂತ್‌ ಅವರ ಸದ್ಯದ ನಿರ್ವಹಣೆಯನ್ನು ಗಮನಿಸಿದರೆ ಮುಂದಿನ ವಾರ ಪ್ರಕಟವಾಗುವ ನೂತನ ಬಿಡಬ್ಲ್ಯುಎಫ್ ರ್‍ಯಾಂಕಿಂಗ್‌ನಲ್ಲಿ ತನ್ನ ರ್‍ಯಾಂಕಿಂಗನ್ನು ಇನ್ನಷ್ಟು ಉತ್ತಮಪಡಿಸುವ ಸಾಧ್ಯತೆಯಿದೆ. ಆದರೆ ಅದಕ್ಕಾಗಿ ನಿದ್ದೆ ಬಿಡುವ ಪ್ರಶ್ನೆಯೇ ಇಲ್ಲ. ರ್‍ಯಾಂಕಿಂಗ್‌ ಬಗ್ಗೆ ಹೆಚ್ಚು ಚಿಂತೆ ಮಾಡುವುದಿಲ್ಲ. ಆದರೆ ಫಾರ್ಮ್ ಉಳಿಸಿಕೊಳ್ಳಲು ಪ್ರಯತ್ನಿಸುವೆ ಎಂದು ಶ್ರೀಕಾಂತ್‌ ಹೇಳಿದ್ದಾರೆ.

ವಿಶ್ವ ನಂಬರ್‌ ವನ್‌ ಗೌರವದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ನನಗೇನೂ ತಿಳಿದಿಲ್ಲ. ಖಂಡಿತವಾಗಿಯೂ ರ್‍ಯಾಂಕಿಂಗ್‌ನಲ್ಲಿ ಉನ್ನತ ಸ್ಥಾನಕ್ಕೇರಲಿದ್ದೇನೆ. ಆದರೆ ಯಾವ ಸ್ಥಾನವೆಂಬುದು ಗೊತ್ತಿಲ್ಲ ಮತ್ತು ಅದಕ್ಕಾಗಿ ಚಿಂತೆ ಮಾಡುವುದಿಲ್ಲ ಎಂದವರು ಹೇಳಿದರು.

ರವಿವಾರ ನಡೆದ ಫೈನಲ್‌ನಲ್ಲಿ ಜಪಾನಿನ ಕೆಂಟ ನಿಶಿಮೊಟೊ ಅವರನ್ನು ನೇರ ಸೆಟ್‌ಗಳಿಂದ ಕೆಡಹಿದ ಶ್ರೀಕಾಂತ್‌ ಅವರು ಫ್ರೆಂಚ್‌ ಓಪನ್‌ ಸೂಪರ್‌ ಸೀರೀಸ್‌ ಬ್ಯಾಡ್ಮಿಂಟನ್‌ ಕೂಟದ ಪ್ರಶಸ್ತಿ ಜಯಿಸಿದ್ದರು. ಇದು ಅವರ ಸತತ ಎರಡನೇ ಮತ್ತು ಈ ಋತುವಿನ ನಾಲ್ಕನೇ ಪ್ರಶಸ್ತಿಯಾಗಿದೆ. ಕಳೆದ ವಾರ ಅವರು ಡೆನ್ಮಾರ್ಕ್‌ ಓಪನ್‌ ಕೂಟದ ಪ್ರಶಸ್ತಿ ಜಯಿಸಿದ್ದರು. ಅವರು ಈ ಮೊದಲು ಜೂನ್‌ನಲ್ಲಿ ಸತತವಾಗಿ ಇಂಡೋನೇಶ್ಯ ಮತ್ತು ಆಸ್ಟ್ರೇಲಿಯ ಓಪನ್‌ ಕೂಟದ ಪ್ರಶಸ್ತಿ ಜಯಿಸಿದ್ದರು.

ವಿಶ್ವದ ನಂಬರ್‌ ವನ್‌ ಸ್ಥಾನದಲ್ಲಿರುವ ಡೆನ್ಮಾರ್ಕ್‌ನ ವಿಕ್ಟರ್‌ ಆ್ಯಕ್ಸೆಲ್ಸೆನ್‌ ಅಂಕಗಳ ಆಧಾರದಲ್ಲಿ ನನಗಿಂತ ಬಹಳಷ್ಟು ಮುನ್ನಡೆಯಲ್ಲಿದ್ದಾರೆ. ಡೆನ್ಮಾರ್ಕ್‌ ಓಪನ್‌ ಮೊದಲು ನನ್ನ ಮತ್ತು ವಿಕ್ಟರ್‌ ನಡುವೆ ಬಹಳಷ್ಟು ವ್ಯತ್ಯಾಸಗಳಿವೆ. ನಂಬರ್‌ ವನ್‌ ಸ್ಥಾನಕ್ಕೇರುವ ಸಾಧ್ಯತೆ ನನಗಿಲ್ಲವೆಂದು ನಂಬಿದ್ದೇನೆ. ನನ್ನ ರ್‍ಯಾಂಕಿಂಗನ್ನು ಒಂದು ಅಥವಾ ಎರಡು ಸ್ಥಾನ ಉತ್ತಮಪಡಿಸಿಕೊಳ್ಳಬಹುದು ಎಂದು ಶ್ರೀಕಾಂತ್‌ ತಿಳಿಸಿದರು.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.