ಕಿಲ್ಪಾಡಿ ಗ್ರಾ.ಪಂ. ನರೇಗಾ ಸಭೆ 


Team Udayavani, Oct 31, 2017, 10:23 AM IST

31-Mng–2.jpg

ಮೂಲ್ಕಿ: ಕಿಲ್ಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ
223 ಜನರ ಹೆಸರು ನೋಂದಣಿಯಾಗಿದ್ದು, ಅದರಲ್ಲಿ 104 ಜನರು ಮಾತ್ರ ಕರ್ತವ್ಯ ನಿರತರಾಗಿದ್ದಾರೆ. ಉಳಿದವರ ನೋಂದಣಿ ರದ್ದಾಗಿದ್ದು, ಅವರು ಮರು ನೋಂದಣಿ ಮಾಡುವುದು ಅಗತ್ಯವಾಗಿದೆ ಎಂದು ಮಹಾತ್ಮಾಗಾಂದಿ ಉದ್ಯೋಗ ಖಾತರಿ ಯೋಜನೆ (ನರೇಗಾ)ಯ ತಾಲೂಕು ಸಂಯೋಜಕಿ ಪವಿತ್ರಾ ಶೆಟ್ಟಿ ತಿಳಿಸಿದರು.

ನೋಡಲ್‌ ಅಧಿಕಾರಿ ಪ್ರದೀಪ್‌ ಭಟ್‌ ಅಧ್ಯಕ್ಷತೆಯಲ್ಲಿ ಜರಗಿದ ನರೇಗಾ ಸಾಮಾಜಿಕ ಪರಿಶೋಧನ ಗ್ರಾಮ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಪಂಚಾಯತ್‌ನ ನರೇಗಾ ಕಾಮಗಾರಿಗಳಲ್ಲಿ ಕೆಲವು ನ್ಯೂನತೆಗಳನ್ನು ಅವರು ಗುರುತಿಸಿದರು. ಅದನ್ನು ಸರಿಪಡಿಸುವುದಾಗಿ ಪಿಡಿಒ ಹರಿಶ್ಚಂದ್ರ ಹೇಳಿದರು. ಮೂರು ದಿನಗಳಿಂದ ಪರಿಶೀಲನೆ ನಡೆಸಿ ನಾಲ್ಕನೇ ದಿನವಾದ ಸೋಮವಾರ ಯೋಜನೆಯ ಪಾರದರ್ಶಕತೆಗಾಗಿ ಗ್ರಾಮಸ್ಥರಿಗೆ ಮಾಹಿತಿ ನೀಡಲಾಯಿತು

ಪಂಚಾಯತ್‌ ಅಧ್ಯಕ್ಷ ಶ್ರೀಕಾಂತ್‌ ರಾವ್‌ ಮಾತನಾಡಿ, ಗ್ರಾಮದ ಜನರು ಯೋಜನೆಯಲ್ಲಿ ನೋಂದಾಯಿಸಿಕೊಂಡು ಸರಕಾರದ ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದರು. ಸಾರ್ವಜನಿಕ ಬಾವಿಗಳ ರಿಪೇರಿ, ರಸ್ತೆ ಬದಿ ಹುಲ್ಲು ಕೀಳುವುದು ಮತ್ತು ಚರಂಡಿ ರಿಪೇರಿ ಮುಂತಾದ ಅಗತ್ಯ ಕೆಲಸಗಳನ್ನು ಈ ಯೋಜನೆಯಲ್ಲಿ ಸೇರಿ ಅವಕಾಶವನ್ನು
ಪಡೆಯಲು ಅಧಿಕಾರಿಗಳು ಸರಕಾರಕ್ಕೆ ವರದಿ ನೀಡಿ ಮಂಜೂರಾತಿ ಪಡೆದು ಪಂಚಾಯತ್‌ನ ಕೆಲವೊಂದು
ಕಾರ್ಯಕ್ರಮಗಳು ಸುಗಮವಾಗಲು ಸಹಕರಿಸುವಂತೆ ಮನವಿ ಮಾಡಿದರು.

6 ತಿಂಗಳಲ್ಲಿ 18 ಕಾಮಗಾರಿ
ಕಳೆದ ಆರು ತಿಂಗಳಲ್ಲಿ ಒಟ್ಟು 17 ವೈಯಕ್ತಿಕ ಕಾಮಗಾರಿಗಳು ಹಾಗೂ 1 ಸಾರ್ವಜನಿಕ ಕಾಮಗಾರಿಯು ಸುಮಾರು 6.52ಲಕ್ಷ ರೂ. ವೆಚ್ಚದಲ್ಲಿ ನಡೆದಿದೆ. ಇವುಗಳನ್ನು ಗ್ರಾಮ ಸಭೆಯ ಮುಂದೆ ಕ್ರಿಯಾ ಯೋಜನೆ ತಯಾರಿಸಿ ಸಭೆಯಲ್ಲಿ ನಿರ್ಣಯ ಮಂಡಿಸದೆ ಜಿಲ್ಲಾ ಪಂಚಾಯತ್‌ ಅಧಿಕಾರಿಗಳಿಗೆ ಅನುಮೋದನೆಗೆ ಕಳುಹಿಸಲಾಗಿರುವುದು ಸರಿಯಾದ
ಕ್ರಮವಲ್ಲ, ನಡಾವಳಿ ಪುಸ್ತಕವನ್ನು ನಿರ್ವಹಣೆ ಮಾಡಲಾಗಿಲ್ಲ ಹಾಗೂ ಎರಡು ಅವಧಿಗಳಿಂದ ಸಲಕರಣೆ ವೆಚ್ಚವನ್ನು ಫಲಾನುಭವಿಗಳಿಗೆ ನೀಡಲಾಗಿಲ್ಲ ಎಂದು ಪರಿಶೀಲನ ವರದಿಯಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ. ಉದ್ಯೋಗ ಚೀಟಿಯಲ್ಲಿ ಆರ್ಥಿಕ ವರ್ಷದ ಎಲ್ಲ ದಾಖಲೆಗಳನ್ನು ವಿವರವಾಗಿ ತೋರಿಸಲಾಗಿರುವುದು ಉತ್ತಮ ಕ್ರಮ ಎಂದು ಶ್ಲಾಘನೆ ವ್ಯಕ್ತವಾಯಿತು.

ಕಿರಿಯ ಎಂಜಿನಿಯರ್‌ಗಳಾದ ಅಜಿತ್‌ ಹಾಗೂ ಹರೀಶ್‌ ಉಪಸ್ಥಿತರಿದ್ದರು. ಸದಸ್ಯರಾದ ಅಬ್ದುಲ್‌ ಶರೀಫ್‌, ನಾಗರಾಜ್‌, ದಮಯಂತಿ ಶೆಟ್ಟಿ, ಶಾಂತಾ ಹಾಗೂ ಸಾವಿತ್ರಿ ಉಪಸ್ಥಿತರಿದ್ದರು.

ರೇಶನ್‌ ಕಾರ್ಡ್‌ ಸಮಸ್ಯೆ
ಕಿಲ್ಪಾಡಿ ಗ್ರಾಮದ ಪರಿಶಿಷ್ಟ ಜಾತಿಯ ಸುಬ್ಬಿ ಎಂಬವರು ತನಗೆ ರೇಶನ್‌ ಕಾರ್ಡು ನವೀಕರಣದ ಬಗ್ಗೆ ಆಗುತ್ತಿರುವ ಸಮಸ್ಯೆಯನ್ನು ತಿಳಿಸಿದಾಗ, ಅದನ್ನು ಪಂಚಾಯತ್‌ನ ಮಾಮೂಲು ಸಭೆಯಲ್ಲಿ ಚರ್ಚಿಸಲು ಅಧಿಕಾರಿಗಳು ಸೂಚಿಸಿದರು. ರೇಶನ್‌ ಕಾರ್ಡ್‌ ಸಮಸ್ಯೆಯಿಂದಾಗಿ ತನಗೆ ತುಂಬಾ ನಷ್ಟವಾಗಿದೆ ಎಂದು ಹಲವು ಉದಾಹರಣೆಯೊಂದಿಗೆ ಆಕೆ ವಿವರಿಸಿದಾಗ ಪ್ರತಿಕ್ರಿಯಿಸಿದ ಅಧ್ಯಕ್ಷರು, ಈ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತರುವುದಾಗಿ ಹೇಳಿದರು.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

31

Italian Open 2024: ಬೋಪಣ್ಣ ಜೋಡಿಗೆ ಸೋಲು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.