ಕಿರುಕುಳಕ್ಕೆ ಬೇಸತ್ತು ಡ್ಯಾನ್ಸ್ ಕ್ಲಾಸ್ ನಲ್ಲೇ ನೇಣಿಗೆ ಶರಣಾದ ಬಾಲಕಿ
Team Udayavani, Oct 31, 2017, 1:36 PM IST
ಬೆಂಗಳೂರು: ಡ್ಯಾನ್ಸ್ ಮಾಸ್ಟರ್ ಕಿರುಕುಳ ತಾಳಲಾರದೆ ಡ್ಯಾನ್ಸ್ ತರಗತಿಯಲ್ಲಿಯೇ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಯಲಹಂಕದ ಅಟ್ಟೂರು ಲೇಔಟ್ ನಲ್ಲಿ ನಡೆದಿದೆ.
ಡ್ಯಾನ್ಸ್ ಕ್ಲಾಸ್ ಮಾಸ್ಟರ್ ಸತೀಶ್ ಎಂಬಾತನ ಕಿರುಕುಳಕ್ಕೆ ಬೇಸತ್ತ ಚಂದನಾ ಎಂಬ ಬಾಲಕಿ ಡ್ಯಾನ್ಸ್ ಕ್ಲಾಸ್ ನಲ್ಲೇ ನೇಣಿಗೆ ಶರಣಾಗಿರುವುದಾಗಿ ತಾಯಿ ಜ್ಯೋತಿ ಆರೋಪಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಚಂದನಾ ಸಂಬಂಧಿಕರು ಡ್ಯಾನ್ಸ್ ಮಾಸ್ಟರ್ ಸತೀಶ್ ಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ.
ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯ ಶವವನ್ನು ಮರಣೋತ್ತ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಟ್ಟೂರು ನಿವಾಸಿಗಳಾದ ಕುಮಾರ್ ಹಾಗೂ ಜ್ಯೋತಿ ದಂಪತಿಯ ಮಗಳಾದ ಚಂದನಾ ವಿದ್ಯಾನಿಕೇತನ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು