BJP ಪರಿವರ್ತನಾ ಯಾತ್ರೆಗೆ ಚಾಲನೆ; ಸಿದ್ದು ಸರ್ಕಾರ ಕಿತ್ತೊಗೆಯಿರಿ: ಶಾ
Team Udayavani, Nov 2, 2017, 3:26 PM IST
ಬೆಂಗಳೂರು: ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ರಾಲಿ ಸರ್ಕಾರ, ಸಚಿವರನ್ನು ಬದಲಿಸಲು ಮಾತ್ರ ಅಲ್ಲ. ಕರ್ನಾಟಕದ ಸಮಗ್ರ ಬದಲಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಎಸ್ ಯಡಿಯೂರಪ್ಪ ಸಾರಥ್ಯದಲ್ಲಿ ಯಾತ್ರೆ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು.
ಗುರುವಾರ ತುಮಕೂರು ರಸ್ತೆಯಲ್ಲಿ ನಡೆದ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸಿದ್ದರಾಮಯ್ಯ ಸರ್ಕಾರ ಅತೀ ಭ್ರಷ್ಟ ಸರ್ಕಾರವಾಗಿದೆ. ಸಿದ್ದರಾಮಯ್ಯ ಸರ್ಕಾರ ರಾಜ್ಯವನ್ನು ಲೂಟಿ ಮಾಡಿದೆ. ಕೆರೆಗಳನ್ನು ಬಿಲ್ಡರ್ ಗಳಿಗೆ ಮಾರುವ ಮೂಲಕವೂ ಭ್ರಷ್ಟಾಚಾರ ಎಸಗಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ನೀಡಿದ ಹಣ ಎಲ್ಲಿಗೆ ಹೋಗುತ್ತಿದೆ ಎಂದು ಗೊತ್ತಿಲ್ಲ ಎಂದು ದೂರಿದರು.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೆರವು ನೀಡುತ್ತಿದೆ. ಅನುದಾನ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡಿಲ್ಲ. 1 ಲಕ್ಷ 30 ಸಾವಿರ ಕೋಟಿ ರೂಪಾಯಿ ಹಣ ಎಲ್ಲಿ ಹೋಯ್ತು ಸಿದ್ದರಾಮಯ್ಯಜೀ ಎಂದು ಪ್ರಶ್ನಿಸಿದರು.
960 ಕೋಟಿ ರೂಪಾಯಿ ಸ್ಮಾರ್ಟ್ ಸಿಟಿ ಯೋಜನೆಗಾಗಿ ಕೊಟ್ಟಿದ್ದೇವೆ. 4563 ಕೋಟಿ ರೂಪಾಯಿ ಅಮೃತ ಯೋಜನೆಗೆ ಕೊಟ್ಟಿದ್ದೇವೆ, ರೈಲ್ವೆ ಯೋಜನೆಗೆ 2197 ಕೋಟಿ ರೂಪಾಯಿ, 39000 ಕೋಟಿ ಮುದ್ರಾ ಯೋಜನೆಗೆ ಕೊಟ್ಟಿದ್ದೇವೆ.
ಸಿದ್ದರಾಮಯ್ಯನವರಿಗೆ ನವೆಂಬರ್ 1 ಕನ್ನಡ ರಾಜ್ಯೋತ್ಸವ ಮಾಡುವ ಬಗ್ಗೆ ಉತ್ಸಾಹವಿಲ್ಲ, ಆದರೆ ನವೆಂಬರ್ 10ರಂದು ನಡೆಸಲು ಉದ್ದೇಶಿಸಿರುವ ಟಿಪ್ಪು ಜಯಂತಿ ನೆರವೇರಿಸಲು ಅತ್ಯುತ್ಸಾಹ ತೋರುತ್ತಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ 19 ಹಿಂದೂ ಕಾರ್ಯಕರ್ತರ ಕಗ್ಗೊಲೆ ಆಗಿದೆ. ದೇಶದ ರಕ್ಷಣೆ, ರಾಜ್ಯದ ಸುರಕ್ಷತೆ ಬಗ್ಗೆ ಸಿದ್ದರಾಮಯ್ಯನವರಿಗೆ ಕಾಳಜಿ ಇಲ್ಲ ಎಂದರು.
ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿ. ಮೋದಿಜೀವರ ಜತೆ ಕೈ ಜೋಡಿಸಿ ಕರ್ನಾಟಕದ ಅಭಿವೃದ್ಧಿಗೆ ಕೈ ಜೋಡಿಸಿ ಎಂದು ಶಾ ಈ ಸಂದರ್ಭದಲ್ಲಿ ಮನವಿ ಮಾಡಿದರು.
ಅಮಿತ್ ಶಾ ಅವರು ಆಗಮಿಸಿದ್ದಾಗ ಮೈಸೂರು ಪೇಟಾ ತೊಡಿಸಿ ಬರಮಾಡಿಕೊಳ್ಳಲಾಯಿತು. ಭಾಷಣದ ಆರಂಭದಲ್ಲೇ ಭಾವಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಂದು ಉಲ್ಲೇಖಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಹಸಿರು ಶಾಲು ಹೊದಿಸಿ ಶಾ ಅವರು ಸನ್ಮಾನಿಸಿ ಎತ್ತಿನಬಂಡಿಯ ಸ್ಮರಣಿಕೆಯನ್ನು ನೀಡಿದರು.
ಬಿಜೆಪಿ ಬಾವುಟ ಹಾರಿಸುವ ಮೂಲಕ ಯಾತ್ರೆಗೆ ಚಾಲನೆ:
ಬಿಜೆಪಿ ಬಾವುಟವನ್ನು ಹಾರಿಸುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯ ರಥಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. 224 ಕ್ಷೇತ್ರಕ್ಕೆ 74 ದಿನಗಳ ಕಾಲ ಪರಿವರ್ತನಾ ಯಾತ್ರೆ ನಡೆಯಲಿದೆ.
ಕಾರ್ಯಕ್ರಮ ವಿಳಂಬ:
ಜನರ ಕೊರತೆಯಿಂದಾಗಿ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯ ಕಾರ್ಯಕ್ರಮ ನಿಗದಿತ ಸಮಯಕ್ಕಿಂತ 2ಗಂಟೆಗಳ ಕಾಲ ವಿಳಂಬವಾಯಿತು.
ಶಾ ಭಾಷಣದ ನಡುವೆಯೇ ಎದ್ದು ಹೋದ ಕಾರ್ಯಕರ್ತರು:
ಅಮಿತ್ ಶಾ ಅವರ ಭಾಷಣದ ನಡುವೆಯೇ ಕಾರ್ಯಕರ್ತರು ತಂಡೋಪ ತಂಡವಾಗಿ ಎದ್ದು ಹೋದ ಘಟನೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ