ಸ್ವತಂತ್ರ ಧರ್ಮಕ್ಕೆ ಶಿಫಾರಸು ಶೀಘ್ರ ಕಳುಹಿಸಿ
Team Udayavani, Nov 3, 2017, 10:50 AM IST
ಹುಬ್ಬಳ್ಳಿ: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ತಜ್ಞರ ಸಲಹೆ ಪಡೆದು ಆದಷ್ಟು ಶೀಘ್ರ ಕೇಂದ್ರಕ್ಕೆ ಶಿಫಾರಸು ಮಾಡಬೇಕೆಂದು ಲಿಂಗಾಯತ ನಾಯಕರು ಒತ್ತಾಯಿಸಿದ್ದಾರೆ.
ಗುರುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರಾದ ಎಂ.ಬಿ.ಪಾಟೀಲ, ವಿನಯ ಕುಲಕರ್ಣಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ದೇಶದ ಏಳನೇ ಧರ್ಮವಾಗಲು ಲಿಂಗಾಯತ ಧರ್ಮ ಎಲ್ಲ ಅರ್ಹತೆ ಹೊಂದಿದೆ. ಮುಖ್ಯಮಂತ್ರಿಯವರು ವಿಳಂಬ ತೋರದೆ ಶಿಫಾರಸು ಮಾಡಬೇಕೆಂದರು.
ರಾಜ್ಯ ಸರಕಾರಕ್ಕೆ ಮಾತೆ ಮಹಾದೇವಿಯವರು, ವಿರಕ್ತ ಮಠಾಧೀಶರು ಹಾಗೂ ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ಸಮಿತಿಯಿಂದ ಪ್ರತ್ಯೇಕವಾಗಿ ಮೂರು ಮನವಿ ಸಲ್ಲಿಸಿದ್ದು, ವೀರಶೈವ ಮಹಾಸಭಾದಿಂದ ವೀರಶೈವ- ಲಿಂಗಾಯತ ಎಂದು, ಪಂಚಪೀಠಾಧೀಶರರು ವೀರಶೈವ ಧರ್ಮ ಎಂದು ಒಟ್ಟು ಐದು ಮನವಿ ಸಲ್ಲಿಕೆಯಾಗಿವೆ.
ಮನವಿಗಳ ಪೂರಕ ಅಂಶ, ದಾಖಲೆಗಳನ್ನು ಕಾನೂನು ತಜ್ಞರಿಂದ ಸಿಎಂ ಮಾಹಿತಿ ಪಡೆದು ಸೂಕ್ತ ನಿರ್ಧಾರ ಕೈಗೊಳ್ಳಲಿ ಎಂದರು.
ಶೆಟ್ಟರ್ ಸಂಪರ್ಕಿಸಲು ಯತ್ನ
ಧಾರವಾಡ: ಹುಬ್ಬಳ್ಳಿಯಲ್ಲಿ ನ.5ರಂದು ನಡೆಯಲಿರುವ ಲಿಂಗಾಯತ ಸಮಾವೇಶಕ್ಕೆ ಹುಬ್ಬಳ್ಳಿಯವರೇ ಆದ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ ಅವರನ್ನು ಸಂಪರ್ಕಿಸಲು ಯತ್ನಿಸುತ್ತಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಹೇಳಿದರು. ನಗರದಲ್ಲಿ ಗುರುವಾರ ಮಾತನಾಡಿ, ಡಿಸೆಂಬರ್ನಲ್ಲಿ ಬೆಂಗಳೂರಿನಲ್ಲಿ ಜರುಗುವ ಸಮಾವೇಶಕ್ಕೆ ಯಡಿಯೂರಪ್ಪ ಅವರಿಗೂ ಆಹ್ವಾನ ಕೊಡುತ್ತೇವೆ. ಬಸವಣ್ಣ ಯಾವ ಪಕ್ಷಕ್ಕೂ ಸೇರಿದವರಲ್ಲ. ಹೀಗಾಗಿ, ಯಾರೇ ಬಂದರೂ ಆಹ್ವಾನವಿದೆ. ಇದು ಅನುಭವ ಮಂಟಪವಿದ್ದಂತೆ. ಎಲ್ಲ ಪಕ್ಷದವರನ್ನೂ ಕರೆಯುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ