‘ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೊಮಾ’ ಉದ್ಘಾಟನೆ


Team Udayavani, Nov 5, 2017, 11:32 AM IST

5–Nov-5.jpg

ಎಕ್ಕೂರು: ದೇಶದಲ್ಲಿ ಸುಮಾರು 3 ಲಕ್ಷ ಕೃಷಿ ಪರಿಕರ ಮಾರಾಟಗಾರರಿದ್ದಾರೆ. ಕೃಷಿ ಸಂಬಂಧಿಸಿ ಕೃಷಿ ಪರಿಕರ ಮಾರಾಟಗಾರರು ಸಮಗ್ರ ಜ್ಞಾನ ಹೊಂದಿದ್ದರೆ ಕೃಷಿಕರಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದು ಬೆಂಗಳೂರು ವಿವಿ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೊಮಾದ ನೋಡಲ್‌ ಅಧಿಕಾರಿ ಡಾ| ಜಿ. ಆರ್‌. ಪೆನ್ನೋಬಳಿ ಸ್ವಾಮಿ ಹೇಳಿದರು.

ಮಂಗಳೂರು ಕೃಷಿ ವಿಜ್ಞಾನ ಕೇಂದ್ರದಲ್ಲಿ ರಸಗೊಬ್ಬರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೊಮಾ
ಉದ್ಘಾಟನೆ ಮಾಡಿ ಅವರು ಶನಿವಾರ ಮಾತನಾಡಿದರು.

ಕೃಷಿ ಪರಿಕರ ಮಾರಾಟಗಾರರು ಕೃಷಿ ಬಗ್ಗೆ ತಿಳಿದುಕೊಂಡರೆ ರೈತರಿಗೆ ಪೂರಕ. ರೈತರು ತಮ್ಮ ಕೃಷಿಗೆ ಬೇಕಾದ ಉತ್ತಮ
ಗುಣಮಟ್ಟದ ಕೀಟನಾಶಕ, ರಸಗೊಬ್ಬರ ಪಡೆಯಲು ಇದರಿಂದ ಸಾಧ್ಯವಾಗುತ್ತದೆ ಎಂದವರು ಹೇಳಿದರು.

ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಚ್‌. ಆರ್‌. ನಾಯಕ್‌ ಮಾತನಾಡಿ, ಜಿಲ್ಲೆಯಲ್ಲಿ 1.17 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಇದೆ. 40 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಅಡಕೆ, 21 ಸಾವಿರ ಹೆಕ್ಟೇರ್‌ ತೆಂಗು ಹಾಗೂ 32 ಹೆಕ್ಟೇರ್‌ ಪ್ರದೇಶದಲ್ಲಿ ಗೇರು ಬೆಳೆ ಬೆಳೆಯಲಾಗುತ್ತಿದೆ ಎಂದರು.

ಮೀನುಗಾರಿಕೆ ಮಹಾವಿದ್ಯಾಲಯದ ಡೀನ್‌ ಡಾ| ಎಂ. ಎನ್‌. ವೇಣುಗೋಪಾಲ್‌ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಇಲಾಖೆ
ಜಂಟಿ ನಿರ್ದೇಶಕ ಕೆಂಪೇಗೌಡ ಎಚ್‌. ಮುಖ್ಯ ಅತಿಥಿಯಾಗಿದ್ದರು. ಕೃಷಿ ವಿಜ್ಞಾನ ಕೇಂದ್ರದ ಪ್ರಾಧ್ಯಾಪಕ ಡಾ| ಶಿವಕುಮಾರ್‌ ಮಗದ ಸ್ವಾಗತಿಸಿದರು.

ಐಸಿಎಆರ್‌ ಕೃಷಿ ವಿಜ್ಞಾನ ಕೇಂದ್ರ, ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್‌, ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣ ಸಂಸ್ಥೆ ಹೈದರಾಬಾದ್‌ ಮತ್ತು ಸಮೇತಿ, ದಕ್ಷಿಣ ಕನ್ನಡ ಕೃಷಿ ಇಲಾಖೆ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಡಿಪ್ಲೋಮಾ ಕೋರ್ಸ್‌ ಹಮ್ಮಿಕೊಳ್ಳಲಾಗಿದೆ.

ಡಿಪ್ಲೊಮಾ ಕೋರ್ಸ್‌ ಅಗತ್ಯ
ದೇಶದಲ್ಲಿ ಶೇ. 18ರಷ್ಟು ರೈತರು ಕೃಷಿ ಪರಿಕರ ಮಾರಾಟಗಾರರಿಂದಲೇ ಬೀಜ, ಗೊಬ್ಬರದ ಮಾಹಿತಿ ಪಡೆಯುತ್ತಾರೆ. ಶೇ. 12ರಷ್ಟು ರೈತರು ಮಾಧ್ಯಮದ ಮೂಲಕ ತಿಳಿದುಕೊಳ್ಳುತ್ತಾರೆ. ಸರಕಾರಿ ಇಲಾಖೆಗಳಿಂದ ಮಾಹಿತಿ ಪಡೆಯುವ ರೈತರ ಸಂಖ್ಯೆ ಕೇವಲ ಶೇ. 4ರಷ್ಟು. ಈ ನಿಟ್ಟಿನಲ್ಲಿ ಕೃಷಿ ಪರಿಕರ ಮಾರಾಟಗಾರರಿಗೆ ಡಿಪ್ಲೊಮಾ ಕೋರ್ಸ್‌ ಅಗತ್ಯವಾಗಿ ಬೇಕಾಗುತ್ತದೆ ಎಂದು ಡಾ| ಜಿ. ಆರ್‌. ಪೆನ್ನೋಬಳಿ ಸ್ವಾಮಿ ಹೇಳಿದರು. 

ಟಾಪ್ ನ್ಯೂಸ್

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.