ಕಮಲ್ಗೆ ಪಿಣರಾಯಿ ಬೆಂಬಲ
Team Udayavani, Nov 6, 2017, 6:00 AM IST
ನವದೆಹಲಿ: “ಹಿಂದೂ ಭಯೋತ್ಪಾದನೆ’ ಪದ ಬಳಕೆ ಮೂಲಕ ಕೆಲವು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿರುವ ಬಹುಭಾಷಾ ನಟ ಕಮಲ್ ಹಾಸನ್ ಅವರ ಬೆಂಬಲಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹಾಗೂ ಕಾಂಗ್ರೆಸ್ ಸಂಸದ ಶಶಿ ತರೂರ್ ನಿಂತಿದ್ದಾರೆ.
ಕಮಲ್ರನ್ನು ಶೂಟ್ ಮಾಡಿ ಕೊಲ್ಲಬೇಕು ಎಂದು ಅಖೀಲ ಭಾರತ ಹಿಂದೂ ಮಹಾಸಭಾ ನೀಡಿದ ಹೇಳಿಕೆಯನ್ನು ಸಿಎಂ ವಿಜಯನ್ ಖಂಡಿಸಿದ್ದು, ಕಮಲ್ಗೆ ಕೊಲೆ ಬೆದರಿಕೆ ಹಾಕಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಪಿಣರಾಯಿ ಅವರು, “ಮಹಾತ್ಮಗಾಂಧಿ, ಪಾನ್ಸರೆ, ದಾಭೋಲ್ಕರ್, ಕಲಬುರ್ಗಿ, ಗೌರಿ ಲಂಕೇಶ್ಗೆ ಏನಾಯಿತು ಮತ್ತು ಯಾಕಾಯಿತು ಎಂಬುದು ಇಡೀ ದೇಶಕ್ಕೇ ಗೊತ್ತು. ಈ ಪಟ್ಟಿಗೆ ಇನ್ನಷ್ಟು ಹೆಸರು ಸೇರಿಸುವಂಥ ಕ್ರಮಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಕಮಲ್ಗೆ ಕೊಲೆ ಬೆದರಿಕೆ ಹಾಕಿರುವವರನ್ನು ಬಂಧಿಸಬೇಕು’ ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಬೆಂಬಲ ಸೂಚಿಸಿರುವ ಸಂಸದ ಶಶಿ ತರೂರ್, “ಪಿಣರಾಯಿ ಅವರ ಆಗ್ರಹಕ್ಕೆ ನನ್ನ ಸಹಮತವಿದೆ’ ಎಂದಿದ್ದಾರೆ.
25 ಸಾವಿರ ಬಹುಮಾನ: ಇನ್ನೊಂದೆಡೆ, ಕಮಲ್ ಮುಖಕ್ಕೆ ಮಸಿ ಬಳಿದವರಿಗೆ 25 ಸಾವಿರ ರೂ. ಬಹುಮಾನ ನೀಡುತ್ತೇನೆ ಎಂದು ಅಲಿಗಡದ ಮುಸ್ಲಿಂ ಯುವಕನೊಬ್ಬ ಘೋಷಿಸಿದ್ದಾನೆ. ಕಮಲ್ ಅವರು ದೇಶದ್ರೋಹಿಯಾಗಿದ್ದು, ತಮ್ಮ ಹೇಳಿಕೆಯ ಮೂಲಕ ಹಿಂದೂ-ಮುಸ್ಲಿಮರ ನಡುವೆ ಕಂದಕ ಸೃಷ್ಟಿಸುತ್ತಿದ್ದಾರೆ ಎಂದು ಆತ ಆರೋಪಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!