ಸರ್ಕಾರದ ನೀತಿಗೆ ಬೇಸತ್ತ ಜನತೆ
Team Udayavani, Nov 6, 2017, 11:39 AM IST
ಕಲಬುರಗಿ: ರಾಜ್ಯ ಸರ್ಕಾರದ ಸಮಾಜ ವಿರೋಧಿ ನೀತಿಗಳಿಂದ ಜನ ಬೇಸತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಅಧಿಕಾರ ಪಡೆಯುವಲ್ಲಿ ಕೈ ಜೋಡಿಸುವರು ಎಂದು ವಿಧಾನ ಪರಿಷತ್ ಸದಸ್ಯ ಕೆ.ಬಿ.ಶಾಣಪ್ಪ ಅಭಿಪ್ರಾಯ ವ್ಯಕ್ತಿಪಡಿಸಿದರು. ರವಿವಾರ ನಗರದ ಆಳಂದ ರಸ್ತೆಯ ಆಶೀರ್ವಾದ ಕಲ್ಯಾಣ ಮಂಟಪದಲ್ಲಿ ಆಳಂದ ಬಿಜೆಪಿ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಆಳಂದ ತಾಲೂಕಿನ ಕಲಬುರಗಿ ನಗರ ನಿವಾಸಿಗಳ ಚಿಂತನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು ಜನತೆ ಸರ್ಕಾರದ ಮೇಲಿನ ವಿಶ್ವಾಸ ಕಳೆದುಕೊಂಡಿದ್ದಾರೆ.
ಕರ್ನಾಟಕದ ಮಿಷನ್ 150ರಂತೆ ಕಲಬುರಗಿಯಲ್ಲಿಯೂ ಮಿಷನ್ 7+2 ಹಮ್ಮಿಕೊಳ್ಳಲಾಗಿದೆ. ಆಳಂದ ಮತಕ್ಷೇತ್ರದಲ್ಲಿ
ಈ ಬಾರಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುವುದರೊಂದಿಗೆ ಮತಕ್ಷೇತ್ರದಲ್ಲಿ ಇತಿಹಾಸ ನಿರ್ಮಾಣವಾಗಲಿದೆ ಎಂದು
ಹೇಳಿದರು.
ಆಳಂದ ಶಾಸಕ ಬಿ.ಆರ್. ಪಾಟೀಲ ಅವರು ರಾಜಕೀಯ ಸ್ವಾರ್ಥಕ್ಕಾಗಿ ಹಲವು ವೇಷಗಳನ್ನು ಬದಲಾಯಿಸುವಲ್ಲಿ
ನಿಸ್ಸೀಮರು. ಅವಕಾಶವಾದಿ ರಾಜಕಾರಣ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ. ಅವರ ನಡೆ-ನುಡಿಗೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಜಯಭೇರಿ ಆಳಂದ
ಕ್ಷೇತ್ರದಿಂದಲೇ ಆರಂಭವಾಗಲಿದೆ. ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಕಾರ್ಯಕರ್ತರು ಟೊಂಕಕಟ್ಟಿ ನಿಂತಿದ್ದಾರೆ. ಜಿಲ್ಲೆಯಾದ್ಯಂತ ಪಕ್ಷದ ಸಂಘಟನೆ ಬಲಗೊಂಡಿದ್ದು, ಕಾರ್ಯಕರ್ತರು ಉತ್ಸಾಹದೊಂದಿಗೆ ಇದೇ ವೇಗದಲ್ಲಿ ಮುನ್ನಡೆಯಬೇಕು ಎಂದರು. ಮಾಜಿ ಶಾಸಕ ಸುಭಾಷ ಗುತ್ತೇದಾರ ಮಾತನಾಡಿದರು.
ಸರಸಂಬಾದ ಯಶ್ವಂತರಾವ್ ಗುಬ್ಯಾಡ್, ಬಸಯ್ನಾ ಸ್ವಾಮಿ, ಶರಣಬಸಪ್ಪ ಪೊಲೀಸ್ ಪಾಟೀಲ, ಪ್ರಭುಲಿಂಗ ಪೊಲೀಸ್ ಪಾಟೀಲ, ಘನಲಿಂಗಪ್ಪ ಪಾಟೀಲ, ಚಿದಂಬರಾಯ ಪಾಟೀಲ, ಚಂದ್ರಶೇಖರ ಬಿರಾದಾರ, ಸಾಯಬಣ್ಣಾ ಸಂಗೋಳಗಿ, ಸಂತೋಷ ರಾಠೊಡ ಹಾಗೂ ಇನ್ನಿತರರು ಕಾಂಗ್ರೆಸ್ ಮತ್ತು ವಿವಿಧ ಪಕ್ಷಗಳನ್ನು ತೊರೆದು ಬಿಜೆಪಿ ಸೇರ್ಪಡೆಯಾದರು.
ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ, ಜಿ.ಪಂ ಅಧ್ಯಕ್ಷೆ ಸುವರ್ಣಾ ಮಲಾಜಿ, ವಿದ್ಯಾಸಾಗರ ಕುಲಕರ್ಣಿ,
ವೀರಣ್ಣಾ ಮಂಗಾಣೆ, ಹರ್ಷಾನಂದ ಗುತ್ತೇದಾರ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ
Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು
Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ
ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ