ಅಯೋಧ್ಯೆ ವಿವಾದ ಇತ್ಯರ್ಥಕ್ಕೆ ಡಿ.6ರೊಳಗೆ ಕರಡು ಸಿದ್ದ
Team Udayavani, Nov 7, 2017, 12:39 PM IST
ಲಕ್ನೋ : ಅಯೋಧ್ಯಾ ವಿವಾದವನ್ನು ಶಾಂತಿಯುತವಾಗಿ ಇತ್ಯರ್ಥ ಪಡಿಸುವ ಪ್ರಸ್ತಾವವೊಂದರ ಕರಡನ್ನು ಡಿ.6ರೊಳಗೆ (1992ರಲ್ಲಿ ಬಾಬರಿ ಮಸೀದಿ ಧ್ವಂಸಗೊಂಡ ದಿನ) ತಾನು ಸಿದ್ಧಪಡಿಸುವುದಾಗಿ ಉತ್ತರ ಪ್ರದೇಶ ಶಿಯಾ ಸೆಂಟ್ರಲ್ ವಕ್ಫ್ ಮಂಡಳಿ ಹೇಳಿದೆ.
ಮಂಡಳಿ ಅಧ್ಯಕ್ಷ ವಾಸಿಂ ರಿಜ್ವಿ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ ಈ ತಿಂಗಳಲ್ಲಿ ನಾನು ಅಯೋಧ್ಯೆಗೆ ಭೇಟಿ ನೀಡಿ ಅಲ್ಲಿನ ಸಾಧುಗಳು ಹಾಗೂ ಮಹಾಂತರನ್ನು ಭೇಟಿಯಾಗುತ್ತೇನೆ ಎಂದು ಹೇಳಿದರು.
ಆಯೋಧ್ಯಾ ವಿವಾದವನ್ನು ಪರಸ್ಪರ ತಿಳಿವಳಿಕೆ ಮತ್ತು ಹೊಂದಾಣಿಕೆಯ ನೆಲೆಯಲ್ಲಿ ಶಾಂತಿಯುತವಾಗಿ ಇತ್ಯರ್ಥಡಿಸುವ ಪ್ರಸ್ತಾವವನ್ನು ನಾನು ಈ ಹಿಂದೆಯೇ ಅಯೋಧ್ಯೆಯ ಸಾಧುಗಳು ಮತ್ತು ಮಹಾಂತರೊಂದಿಗೆ ಶರತ್ತುಗಳು ಮತ್ತು ನಿಬಂಧನೆಗಳ ಬಗ್ಗೆ ಚರ್ಚಿಸಿದ್ದೇನೆ ಎಂದು ರಿಜ್ವಿ ಹೇಳಿದರು.
ಡಿ.6ರ ಒಳಗೆ ನಾವು ಪರಸ್ಪರ ತಿಳಿವಳಿಕೆಯ ಒಪ್ಪಂದಕ್ಕೆ ಬರಲಿರುವುದಾಗಿ ನಾನು ಹಾರೈಸುತ್ತೇನೆ ಎಂದು ರಿಜ್ವಿ ಹೇಳಿದರು.
ರಿಜ್ವಿ ಅವರು ಕಳೆದ ತಿಂಗಳಲ್ಲಿ ಆರ್ಟ್ ಆಫ್ ಲಿವಿಂಗ್ನ ಸ್ಥಾಪಕ ಶ್ರೀ ಶ್ರೀ ರವಿ ಶಂಕರ್ ಗುರೂಜಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವ ಯೋಜನೆ ಕುರಿತಾದ ಮಂಡಳಿಯ ನಿಲುವನ್ನು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ