ಕಮಲ್ ಹಾಸನ್ ನೂತನ ಆ್ಯಪ್ ಬಿಡುಗಡೆ, ತಮಿಳುನಾಡಿನಾದ್ಯಂತ ಪ್ರವಾಸ
Team Udayavani, Nov 7, 2017, 3:07 PM IST
ಚೆನ್ನೈ: ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಬಹುಭಾಷಾ ನಟ ಕಮಲ್ ಹಾಸನ್ ಮಂಗಳವಾರ ತಿಳಿಸಿದ್ದು, ಕೂಡಲೇ ತಾವು ರಾಜಕೀಯ ಜೀವನ ಪ್ರವೇಶಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ತಮ್ಮ ಹುಟ್ಟುಹಬ್ಬದ ದಿನದಂದೇ(ಇಂದು) ನೂತನ ಪಕ್ಷವನ್ನು ಘೋಷಿಸಲಿದ್ದಾರೆ ಎಂಬ ದಟ್ಟ ವದಂತಿ ಹಬ್ಬಿತ್ತು. ಆದರೆ ಯಾವುದೇ ಘೋಷಣೆ ಮಾಡುವ ಮುನ್ನ ಸಾಕಷ್ಟು ಶ್ರಮದ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ತಮ್ಮ ರಾಜಕೀಯ ಪ್ರವೇಶ ಕಾಲ ಸನ್ನಿಹಿತವಾಗಿದ್ದು, ಇದರ ಪ್ರಥಮ ಹೆಜ್ಜೆಯಾಗಿ ಹುಟ್ಟುಹಬ್ಬದಂದು ಚೆನ್ನೈನ ಖಾಸಗಿ ಹೋಟೆಲ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೊಸ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದ್ದಾರೆ.
ನಾನು ಇಂದು ಹೊಸ ರಾಜಕೀಯ ಪಕ್ಷವನ್ನು ಘೋಷಿಸುತ್ತೇನೆ ಎಂದು ಹಲವು ವದಂತಿ ಹರಡಿತ್ತು. ಆದರೆ ಅದಕ್ಕೂ ಮುನ್ನ ನಾನು ಕೂಡಾ ಸಾಕಷ್ಟು ಕೆಲಸ ಮಾಡಲಿಕ್ಕಿದೆ. ನಿಮ್ಮ ಜತೆ ಕುಳಿತುಕೊಂಡು ವಿಶ್ಲೇಷಣೆ ನಡೆಸಿದ ನಂತರವೇ ರಾಜಕೀಯ ಪಕ್ಷವನ್ನು ಘೋಷಿಸುವುದಾಗಿ ತಿಳಿಸಿದರು.
ಆ ನಿಟ್ಟಿನಲ್ಲಿ ತಮ್ಮ ಅಭಿಮಾನಿಗಳು, ಜನರ ಜತೆ ನೇರ ಸಂಪರ್ಕದಲ್ಲಿ ಇರಲು ಹೊಸ ಆಪ್ ಅನ್ನು ಬಿಡುಗಡೆ ಮಾಡಿರುವುದಾಗಿ ಹೇಳಿದರು. ಈ ಆಪ್ ಮಾಹಿತಿದಾರರಿಗೊಂದು ವೇದಿಕೆಯಾಗಿದೆ. ಎಲ್ಲಿ ಯಾವುದೇ ತಪ್ಪುಗಳು ನಡೆದರು ಕೂಡಾ ಈ ಆಪ್ ಅನ್ನು ಉಪಯೋಗಿಸಿಕೊಂಡು ಮಾಹಿತಿ ನೀಡಬಹುದಾಗಿದೆ. ಈ ಮೂಲಕ ನ್ಯಾಯ ಒದಗಿಸಲು ಪ್ರಯತ್ನಿಸುವುದಾಗಿ ಹೇಳಿದರು.
ಹಿಂದುಗಳ ಮನ ನೋಯಿಸುವುದು ನನ್ನ ಉದ್ದೇಶವಲ್ಲ:
ಇತ್ತೀಚೆಗಷ್ಟೇ ಬಲಪಂಥೀಯ ಉಗ್ರಗಾಮಿಗಳ ಬಗ್ಗೆಯೂ ಎಚ್ಚರದಿಂದ ಇರಬೇಕು ಎಂದು ಹೇಳಿಕೆ ನೀಡುವ ಮೂಲಕ ನಟ ಕಮಲ್ ಹಾಸನ್ ತೀವ್ರ ವಿವಾದಕ್ಕೊಳಗಾಗಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಉಪಯೋಗಿಸಿದ ಶಬ್ದ ತುಂಬಾ ಕಠಿಣವಾದದ್ದು. ನಾನು ನಿಜಕ್ಕೂ ಹಿಂದುಗಳ ಮನಸ್ಸನ್ನು ನೋಯಿಸಬೇಕೆಂದು ಈ ಹೇಳಿಕೆ ನೀಡಿಲ್ಲ. ನಾನು ಕೂಡಾ ಹಿಂದೂ ಕುಟುಂಬದಿಂದ ಬಂದವನು, ಆದರೆ ನಾವು ಅದನ್ನು(ಹಿಂದುತ್ವ) ಮತ್ತೊಂದು ದಿಕ್ಕಿನತ್ತ ಕೊಂಡೊಯ್ಯಬೇಕಾದ ಅಗತ್ಯತೆ ಇದೆ ಎಂದು ವಿಶ್ಲೇಷಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ
CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ
Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ
Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್ ಲಾಂಚ್
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್