ಕುಮಾರಪರ್ವ ಆರಂಭ; ಮೊದಲ ಬಾರಿ ವೇದಿಕೆ ಹತ್ತಿದ ಚೆನ್ನಮ್ಮ


Team Udayavani, Nov 8, 2017, 6:10 AM IST

hdk.jpg

ಮೈಸೂರು: ಬಿಜೆಪಿಯಾಯ್ತು ಇದೀಗ ಜೆಡಿಎಸ್‌ನ ಕುಮಾರಪರ್ವ-2018; ಹೊಸ ಮನ್ವಂತರದ ಶುಭಾರಂಭ ಯಾತ್ರೆ ಆರಂಭವಾಗಿದೆ.

ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ಜೆಡಿಎಸ್‌ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಇಲ್ಲಿನ ಚಾಮುಂಡೇಶ್ವರಿ ಕ್ಷೇತ್ರದ ಲಿಂಗದೇವರ ಕೊಪ್ಪಲಿನಲ್ಲಿ ತಮ್ಮ ಯಾತ್ರೆ ಹಾಗೂ ಸಮಾವೇಶಕ್ಕೆ ಚಾವಮೆ ನೀಡಿದರು. ಈ ಬಳಿಕ ಮಾತನಾಡಿದ ಅವರು, ಬಿಜೆಪಿ ಮತ್ತು ಕಾಂಗ್ರೆಸ್‌ಗೆ ತಲಾ ಐದು ವರ್ಷಗಳ ಕಾಲ ಆಡಳಿತಕ್ಕೆ ಅವಕಾಶ ಕೊಟ್ಟಿದ್ದೀರಿ. 2018ರ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿ, ಸರ್ಕಾರ ರಚಿಸಲು ಅವಕಾಶ ನೀಡಿ ಎಂದು ಜನರಲ್ಲಿ ಮನವಿ ಮಾಡಿದರು.

ಜನರಿಂದ ಆಯ್ಕೆಯಾಗದೇ ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿದ್ದ ನನ್ನ ಆ 20 ತಿಂಗಳ ಅವಧಿ ಸಿನಿಮಾವೊಂದರ ಟ್ರೇಲರ್‌ ಇದ್ದಂತೆ. ಆಗ ರಾಜ್ಯಕ್ಕೆ ನನ್ನಿಂದ ಕಿಂಚಿತ್ತು ಸೇವೆ ಆಗಿದೆ ಎಂಬ ಭಾವನೆ ನಿಮ್ಮಲ್ಲಿದ್ದರೆ ಒಮ್ಮೆ ಅವಕಾಶ ಕೊಡಿ. ನನ್ನ ಕನಸಿನ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲು ನನ್ನಿಂದ ಆಗಿಲ್ಲ. ಪ್ರಧಾನಿ ಮೋದಿ ಅವರಂತೆ ನಾನು ಐದು ವರ್ಷ ಕೇಳಲ್ಲ. ಆದರೆ ಕೇವಲ 2 ವರ್ಷ ಮಾತ್ರ ಕೊಡಿ ಸಾಕು. ನನ್ನ ಬದುಕನ್ನೇ ನಿಮಗೆ ಮೀಸಲಿಟ್ಟಿದ್ದೇನೆ. ನಾಡಿನ ಜನರ ಬದುಕು ಹಸನುಗೊಳಿಸುವ ಸರ್ಕಾರ ರಚನೆಗೆ ಆಶೀರ್ವಾದ ಮಾಡಿ ಎಂದು ಕೋರಿದರು.

ಆಗ ಬಿಜೆಪಿ ಜತೆ ಕೈಜೋಡಿಸಿದ್ದು ತಂದೆಯವರಿಗೆ ಸಮಾಧಾನ ತಂದಿರಲಿಲ್ಲ. ನನ್ನ ಮಗ ದಾರಿ ತಪ್ಪಿದ ಎಂಬ ನೋವು ಅವರಿಗಿದೆ. ಅವರಿಗೆ ನೋವು ಕೊಟ್ಟು, ಆರೋಗ್ಯ ಹಾಳು ಮಾಡಿ ಮುಖ್ಯಮಂತ್ರಿಯಾಗಿದ್ದೆ. ಈಗ ಜನರ ಆಶೀರ್ವಾದದಿಂದಲೇ ನಾನು ಮುಖ್ಯಮಂತ್ರಿಯಾಗಬೇಕು ಎಂಬುದು ದೇವೇಗೌಡರ ಮನಸ್ಸಿನಲ್ಲಿ ಇದೆ. ಅದಕ್ಕಾಗಿಯೇ ಈ ವಯಸ್ಸಲ್ಲೂ ಪಕ್ಷ ಸಂಘಟನೆಗಾಗಿ ಅವರು ಹೋರಾಟ ಮಾಡುತ್ತಿದ್ದಾರೆ ಎಂದರು.

ಕೊಟ್ಟಮಾತು ತಪ್ಪಿಲ್ಲ: ನಾನು ಎಂದೂ ಕೊಟ್ಟ ಮಾತಿಗೆ ತಪ್ಪಿದವನಲ್ಲ. ನನ್ನ 20 ತಿಂಗಳ ಅವಧಿ ನಂತರ ಮಾತುಕತೆಯಂತೆಯೇ ಯಡಿಯೂರಪ್ಪ ಅವರಿಗೆ ಅಧಿಕಾರ ಬಿಟ್ಟುಕೊಟ್ಟಿದ್ದೆ. ಆದರೆ ಅನಂತ್‌ಕುಮಾರ್‌ ಸೇರಿದಂತೆ ಬಿಜೆಪಿ ನಾಯಕರೇ ಷಡ್ಯಂತ್ರ ಮಾಡಿ ಏಳೇ ದಿನಕ್ಕೆ ಯಡಿಯೂರಪ್ಪ ರಾಜೀನಾಮೆ ಕೊಡುವಂತೆ ಮಾಡಿದರು. ಆ ಸತ್ಯವನ್ನು ಕೆಜೆಪಿ ಕಟ್ಟಿದಾಗ ಸಾರ್ವಜನಿಕ ಸಭೆಗಳಲ್ಲಿ ಯಡಿಯೂರಪ್ಪ ಅವರೇ ಹೇಳಿದ್ದಾರೆ ಎಂದರು. ಇನ್ನು ಸಿಎಂ ಸಿದ್ದರಾಮಯ್ಯ ಅವರಿಂದ ಕುರುಬರಿಗೆ ರಕ್ಷಣೆ ಸಿಗುತ್ತಿಲ್ಲ ಎಂದೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಚೆನ್ನಮ್ಮ ದೇವೇಗೌಡ, ಶಾಸಕ ಜಿ.ಟಿ.ದೇವೇಗೌಡ, ಮಾಜಿ ಸಂಸದ ಎಚ್‌.ವಿಶ್ವನಾಥ್‌, ಸಂಸದ ಸಿ.ಎಸ್‌.ಪುಟ್ಟರಾಜು, ಶಾಸಕರಾದ ಸಾ.ರಾ.ಮಹೇಶ್‌, ಬಂಡೆಪ್ಪ ಕಾಶೆಂಪುರ, ಕೋನರೆಡ್ಡಿ, ನಾರಾಯಣ ಸ್ವಾಮಿ, ಕೆ.ಟಿ.ಶ್ರೀಕಂಠೇಗೌಡ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಮೊದಲ ಬಾರಿಗೆ ವೇದಿಕೆ ಹಂಚಿಕೊಂಡ ಚೆನ್ನಮ್ಮ ದೇವೇಗೌಡ
ವಿಶೇಷವೆಂದರೆ ಇದೇ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ವೇದಿಕೆ ಹತ್ತಿದರು. ದೇವೇಗೌಡರ ಜತೆಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವುದನ್ನು ಹೊರತುಪಡಿಸಿದರೆ ರಾಜಕೀಯ ಸಭೆ, ಸಮಾರಂಭಗಳಲ್ಲಿ ಈವರೆಗೆ ಕಾಣಿಸಿಕೊಳ್ಳದೆ ಇದ್ದ ಚೆನ್ನಮ್ಮ ದೇವೇಗೌಡ ಅವರು ಈ ಬಾರಿ ಮಾತ್ರ ವೇದಿಕೆಯಲ್ಲಿ ಕಾಣಿಸಿಕೊಂಡರು. ಇದಕ್ಕೂ ಮುನ್ನ ಚಾಮುಂಡಿಬೆಟ್ಟದ ಶ್ರೀಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕರ್ನಾಟಕ ವಿಕಾಸ ವಾಹಿನಿಗೆ ಚಾಲನೆ ನೀಡಿದ ಸಂದರ್ಭ, ಉತ್ತನಹಳ್ಳಿಯ ಶ್ರೀ ಜಾÌಲಾಮುಖೀ ತ್ರಿಪುರ ಸುಂದರಿದೇವಿ ಅಮ್ಮನವರ ದರ್ಶನ ಹಾಗೂ ಹಿನಕಲ್‌ನ ಶ್ರೀ ನನ್ನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವಾಗಲು ಚೆನ್ನಮ್ಮ ಅವರು ದೇವೇಗೌಡರ ಜತೆಗಿದ್ದರು.

ಟಾಪ್ ನ್ಯೂಸ್

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.