ಟ್ರಾಫಿಕ್ ಕಿರಿಕಿರಿ: ಸಚಿವರಿಗೆ ಶಿವರಾಜ್ಕುಮಾರ್ ಮನವಿ
Team Udayavani, Nov 8, 2017, 11:37 AM IST
ಬೆಂಗಳೂರು: ಹೊರವರ್ತುಲ ರಸ್ತೆಯ ನಾಗವಾರ ಬಳಿಯ ಮಾನ್ಯತಾ ಟೆಕ್ ಪಾರ್ಕ್ನಿಂದಾಗಿ ಆ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದ್ದು ಸಮಸ್ಯೆ ನಿವಾರಿಸುವಂತೆ ಚಿತ್ರ ನಟ ಶಿವರಾಜ್ಕುಮಾರ್ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಮಾಡಿದ್ದಾರೆ.
ಮಂಗಳವಾರ ವಿಧಾನಸೌಧಕ್ಕೆ ಮನವಿ ನೀಡಲು ಆಗಮಿಸಿದ ಶಿವರಾಜ್ಕುಮಾರ್ ಹಾಗೂ ಆ ಭಾಗದ ನಿವಾಸಿಗಳ ಜತೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಕೊಠಡಿಯಲ್ಲಿ ಚರ್ಚಿಸಿದ ರಾಮಲಿಂಗಾರೆಡ್ಡಿಯವರು, ಸದ್ಯದಲ್ಲೇ ಸಂಚಾರ ಪೊಲೀಸರ ಸಭೆ ಕರೆದು ದಟ್ಟಣೆ ನಿವಾರಣೆ ಮಾರ್ಗೋಪಾಯಗಳ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ನಂತರ ಮಾತನಾಡಿದ ರಾಮಲಿಂಗಾರೆಡ್ಡಿ, ಮಾನ್ಯತಾ ಟೆಕ್ಪಾರ್ಕ್ ನಿರ್ಮಾಣ ವೇಳೆ 30 ಸಾವಿರ ಉದ್ಯೋಗಿಗಳು ಕಾರ್ಯನಿರ್ವಹಿಸಲಿದ್ದು, ವಾಹನ ಸಂಚಾರಕ್ಕೆ ಬದಲಿ ರಸ್ತೆ ಉಪಯೋಗಿಸುವುದಾಗಿ ಮುಚ್ಚಳಿಕೆ ಬರೆದುಕೊಡಲಾಗಿತ್ತು.
ಆದರೀಗ ಟೆಕ್ಪಾರ್ಕ್ನಲ್ಲಿ 1.50 ಲಕ್ಷ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದು ಅವರ ವಾಹನಗಳು ರಸ್ತೆಗಿಳಿಯುವುದರಿಂದ ಸುತ್ತಮುತ್ತಲ ನಿವಾಸಿಗಳಿಗೆ ನಿತ್ಯ ತೊಂದರೆಯಾಗುತ್ತಿದೆ. ಸಂಚಾರ ದಟ್ಟಣೆ ಎದುರಾಗಿದ್ದು, ಸಮಸ್ಯೆ ನಿವಾರಣೆಗೆ ನಟ ಶಿವರಾಜ್ಕುಮಾರ್ ಮನವಿ ನೀಡಿರುವುದಾಗಿ ತಿಳಿಸಿದರು.
ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರ ಜತೆಯೂ ಈ ಬಗ್ಗೆ ಮಾತನಾಡಿ ನಗರ ಸಂಚಾರ ಪೊಲೀಸರೊಂದಿಗೂ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದೇನೆ ಎಂದು ಹೇಳಿದರು. ಮಾನ್ಯತಾ ಟೆಕ್ಪಾರ್ಕ್ ಉದ್ಯೋಗಿಗಳ ವಾಹನಗಳಿಂದಾಗುತ್ತಿದ್ದ ಸಂಚಾರ ದಟ್ಟಣೆ ವಿರೋಧಿಸಿ ಇತ್ತೀಚೆಗೆ ಸ್ಥಳೀಯ ನಾಗರಿಕರೊಂದಿಗೆ ನಟ ಶಿವರಾಜ್ಕುಮಾರ್ ಪ್ರತಿಭಟನೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?
Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ
Ramanagara: ತಂದೆಯಿಂದಲೇ ಮಗನ ಕೊಲೆ.!
Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ