ಇನ್ನು ಸಿದ್ದರಾಮಯ್ಯ ದರ್ಪ ನಡೆಯಲ್ಲ: ಎಚ್ಡಿಕೆ 


Team Udayavani, Nov 8, 2017, 12:17 PM IST

m1-kumar.jpg

ಮೈಸೂರು: ಸಿದ್ದರಾಮಯ್ಯ ಅವರ ಹಣ, ಅಧಿಕಾರದ ದರ್ಪ ನಡೆಯುವುದಿಲ್ಲ. ಬೆಳೆಸಿದ ಪಕ್ಷಕ್ಕೆ ದ್ರೋಹ ಮಾಡಿದ, ಶಕ್ತಿ ತುಂಬಿದ ಕಾರ್ಯಕರ್ತರಿಗೆ ದ್ರೋಹ ಬಗೆದ ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿ ಕ್ಷೇತ್ರದ ಜನತೆಯೇ ಉತ್ತರ ಕೊಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಲಿಂಗದೇವರ ಕೊಪ್ಪಲು ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಕುಮಾರಪರ್ವ-2018; ಹೊಸ ಮನ್ವಂತರದ ಶುಭಾರಂಭ, ಜೆಡಿಎಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತನ್ನನ್ನು ಸೋಲಿಸಲು ಎಲ್ಲಾ ನಾಯಕರೂ ಒಂದಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ನಿಮ್ಮನ್ನು ಸೋಲಿಸಲು ನಾಯಕರು ಬೇಕಿಲ್ಲ. ಚಾಮುಂಡೇಶ್ವರಿ ಕ್ಷೇತ್ರದ ಜನರು ಸಾಕು ಎಂದು ಹೇಳಿದರು. ಹಾಸನದಲ್ಲಿ ಪರಿವರ್ತನಾ ಯಾತ್ರೆ ಮಾಡಿದ ಬಿಜೆಪಿ ನಾಯಕರು, ರೈತರಿಗೆ ದೇವೇಗೌಡರ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ರೈತರೇ ಅವರಿಗೆ ಉತ್ತರ ಕೊಡುತ್ತಾರೆ. ಮುಖ್ಯಮಂತ್ರಿಯವರ ಪದ ಬಳಕೆ, ಹಾವಭಾವಗಳನ್ನು ಜನತೆ ಗಮನಿಸುತ್ತಿದ್ದಾರೆ. ಕಾಂಗ್ರೆಸ್‌-ಬಿಜೆಪಿ ನಾಯಕರ ಬಗ್ಗೆ ವೈಯಕ್ತಿಕ ಟೀಕೆಗಳಿಗೆ ತಾನು ಸಮಯ ವ್ಯರ್ಥ ಮಾಡಲ್ಲ. ಚುನಾವಣೆ ಹೊಸ್ತಿಲಲ್ಲಿರುವಾಗ ಹಿಂದಿನ ಬಿಜೆಪಿ ಸರ್ಕಾರದಲ್ಲಿನ ಭ್ರಷ್ಟಾಚಾರ ಬಯಲು ಮಾಡಲು ಹೊರಟಿರುವ ಮುಖ್ಯಮಂತ್ರಿ,

ಕಳೆದ ನಾಲ್ಕೂವರೆ ವರ್ಷ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು.ಈ ಸಭೆಯನ್ನು ಕಂಡು ಜಿ.ಟಿ.ದೇವೇಗೌಡರ ಮೇಲೂ ಗದಾಪ್ರಹಾರ ಆರಂಭವಾಗಬಹುದು. ಇದಕ್ಕೆಲ್ಲಾ ಹೆದರಬೇಕಿಲ್ಲ, ನಾವಿದ್ದೇವೆ ಎಂದು ಅಭಯ ನೀಡಿದರು.

ರೈತರು ಕುಗ್ಗಿ ಹೋಗಿದ್ದಾರೆ: ನೋಟು ರದ್ಧತಿ, ಜಿಎಸ್‌ಟಿ ಜಾರಿಯಿಂದ ರೈತರು ಕುಗ್ಗಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ರೈತರ ಬಗ್ಗೆ ನಿಜಕ್ಕೂ ಕಮಿಟ್‌ಮೆಂಟ್‌ ಇದ್ದಿದ್ದರೆ ಕೇಂದ್ರ ಸರ್ಕಾರದ ಕಡೆ ಕೈತೋರಿಸದೆ, ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತಿದ್ದರು ಎಂದು ಹೇಳಿದರು.

ಸಿದ್ದು ಸಾಲ ಮಾಡಿದ್ದೇಕೆ?: ವಿರೋಧ ಪಕ್ಷಗಳಲ್ಲಿ ಇರುವವರೆಲ್ಲಾ ಭ್ರಷ್ಟರು. ತಾವೊಬ್ಬರೆ ಸತ್ಯ ಹರಿಶ್ಚಂದ್ರರು ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ, ತನ್ನ ಅವಧಿಯಲ್ಲಿ ತಿಂಗಳಿಗೆ ಸರಾಸರಿ 4 ಸಾವಿರ ಕೋಟಿಯಂತೆ ಸಾಲ ಮಾಡಿದ್ದಾರೆ. ಈ ಸಾಲ ಮಾಡಿದ್ದೇಕೆ ಎಂಬುದನ್ನು ಜನತೆ ಮುಂದಿಡಲಿ ಎಂದು ಸವಾಲು ಹಾಕಿದರು.

ಮೈಸೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಮರಳು ದಂಧೆ ತಡೆಯಲಾಗಲಿಲ್ಲ. ಮಟ್ಕಾ ದಂಧೆಗೆ ಪೊಲೀಸರನ್ನೇ ಬಳಸಿಕೊಳ್ಳುತ್ತಿದ್ದೀರಿ. ಮುಂದಿನ ಮುಖ್ಯಮಂತ್ರಿ ತಾನೇ ಎಂದು ಹೇಳಿಕೊಳ್ಳುತ್ತಿದ್ದೀರಿ. ಯಾವ ಪುರುಷಾರ್ಥಕ್ಕೆ ನೀವು ಮತ್ತೂಮ್ಮೆ ಮುಖ್ಯಮಂತ್ರಿ ಆಗಬೇಕು ಎಂದು ಪ್ರಶ್ನಿಸಿದರು. 

100 ಕೋಟೆ ತರುತ್ತಾರೆ ಎಚ್ಚರಿಕೆ: ನಂಜನಗೂಡು, ಗುಂಡ್ಲುಪೇಟೆ ಚುನಾವಣೆಯನ್ನು ಹೇಗೆ ನಡೆಸಿದರು ಎಂಬುದು ಗೊತ್ತಿದೆ. ಪೊಲೀಸ್‌ ಜೀಪುಗಳಲ್ಲಿ ಹಣ ಬರುತ್ತದೆ. ಜಿ.ಟಿ.ದೇವೇಗೌಡರನ್ನು ಸೋಲಿಸಲು 100 ಕೋಟಿ ತರುತ್ತಾರೆ ಎಚ್ಚರಿಕೆಯಿಂದಿರಿ ಎಂದು ಮುಖಂಡರು, ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ನಾವೂ ಗೊಬ್ಬರ ಹೊತ್ತಿದ್ದೇವೆ…: ಮಾತೆತ್ತಿದರೆ ತಾನು ರೈತನ ಮಗ, ಕುರಿ ಕಾಯ್ದಿದ್ದೇನೆ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತರ ಆತ್ಮಹತ್ಯೆ ಬಗ್ಗೆ ಕನಿಕರವಿಲ್ಲ. ರೈತರ ಕಷ್ಟ ಏನು ಎಂದು ತನ್ನ ತಂದೆ-ತಾಯಿ ಕಲಿಸಿದ್ದಾರೆ. ನೀವೊಬ್ಬರೇ ಅಲ್ಲ ಕುರಿ ಕಾಯ್ದಿರುವುದು, ನಾವೂ ಗೊಬ್ಬರ ಹೊತ್ತಿದ್ದೇವೆಂದು ಮಾಜಿ ಸಿಎಂ ಕುಮಾರಸ್ವಾಮಿತಿರುಗೇಟು ನೀಡಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.