ಬೌರಿಂಗ್‌ ವಿದ್ಯಾಲಯಕ್ಕೆ ಮೆಟ್ರೋ ಸಂಪರ್ಕಕ್ಕೆ ಚಿಂತನೆ


Team Udayavani, Nov 9, 2017, 1:06 PM IST

blore3.jpg

ಬೆಂಗಳೂರು: ಶಿವಾಜಿನಗರದಲ್ಲಿ ಬುಧವಾರವಷ್ಟೇ ಶಂಕುಸ್ಥಾಪನೆ ನೆರವೇರಿಸಲಾದ ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ವೈದ್ಯಕೀಯ ಮಹಾ ವಿದ್ಯಾಲಯಕ್ಕೆ ಮೆಟ್ರೋ ಸಂಪರ್ಕ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. “ನಮ್ಮ ಮೆಟ್ರೋ’ 2ನೇ ಹಂತದಲ್ಲಿ ಶಿವಾಜಿನಗರದ ಮೂಲ ಕವೇ ಸುರಂಗ ಮಾರ್ಗದಲ್ಲಿ ಮೆಟ್ರೋ ಹಾದು ಹೋಗಲಿದ್ದು ಅದನ್ನು ಹತ್ತಿರದಲ್ಲೇ ಇರುವ ಬೌರಿಂಗ್‌ ಆಸ್ಪತ್ರೆಗೆ ತೆಗೆದುಕೊಂಡು ಹೋಗಲು ಚರ್ಚೆ ನಡೆದಿದೆ.

ಇದಕ್ಕಾಗಿ ಮೆಟ್ರೋ ರೈಲು ಮಾರ್ಗ ನಿರ್ಮಿಸುವುದಿಲ್ಲ ವಾದರೂ ಸುರಂಗದಲ್ಲೇ ಶಿವಾಜಿನಗರ- ವೈದ್ಯಕೀಯ ಕಾಲೇಜು ನಡುವೆ ಪ್ರತ್ಯೇಕ ಪಾದಚಾರಿ ಪಥ ರೂಪಿಸಲಾಗುವುದು. ಆಗ, ಕಾಲೇಜು ಬಾಗಿಲಿಗೆ ಮೆಟ್ರೋ ಮಾರ್ಗ ಬರುವುದರಿಂದ ಕಲ್ಪಿಸುವುದರಿಂದ ಅಲ್ಲಿ ಬರುವ ವಿದ್ಯಾರ್ಥಿಗಳು ಮತ್ತು ರೋಗಿಗಳಿಗೆ ಅನುಕೂಲ ಆಗುತ್ತದೆ ಎಂಬುದು ಲೆಕ್ಕಾಚಾರ. ಈ ಸಂಬಂಧ ಸಾಧಕ-ಬಾಧಕಗಳ ಅಧ್ಯಯನಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ) ಮುಂದಾಗಿದೆ.

ಎರಡನೇ ಹಂತದ “ನಮ್ಮ ಮೆಟ್ರೋ’ ಯೋಜನೆಯಲ್ಲಿ ವಿಸ್ತರಿಸಿದ ಮಾರ್ಗಗಳ ಜತೆಗೆ 2 ಪ್ರತ್ಯೇಕ ಮೆಟ್ರೋ ಮಾರ್ಗಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಆ ಪೈಕಿ ಒಂದು ಮಾರ್ಗ ಗೊಟ್ಟಿಗೆರೆ (ಐಐಎಂಬಿ) -ನಾಗವಾರ ನಡುವೆ ಸಂಪರ್ಕ ಕಲ್ಪಿಸಲಿದೆ. 13.79 ಕಿ.ಮೀ. ಉದ್ದದ ಈ ಸುರಂಗ ಮಾರ್ಗವು ಶಿವಾಜಿನಗರದ ಮೂಲಕವೇ ಹಾದುಹೋಗಲಿದ್ದು, ಅಲ್ಲೊಂದು ನಿಲ್ದಾಣವನ್ನೂ ನಿರ್ಮಿಸುತ್ತಿದೆ. ಹಾಗಾಗಿ, ಪಕ್ಕದಲ್ಲೇ ಇರುವ ಬೌರಿಂಗ್‌ ಆಸ್ಪತ್ರೆಗೆ
ಸಂಪರ್ಕ ಕಲ್ಪಿಸಬಹುದು ಇದರಿಂದ ಅನುಕೂಲ ವಾಗಲಿದೆ ಎಂಬುದು ಸರ್ಕಾರದ ನಿರ್ಧಾರ .ಶಿವಾಜಿನಗರ ಬಸ್‌
ನಿಲ್ದಾಣದ ಹಿಂಭಾಗದಲ್ಲೇ ಮೆಟ್ರೋ ನಿಲ್ದಾಣ ರೂಪಿಸಲಾಗುತ್ತಿದೆ. ಅಲ್ಲಿಂದ ಕೇವಲ ಸುಮಾರು 200 ಮೀಟರ್‌ ಅಂತರದಲ್ಲೇ ಬೌರಿಂಗ್‌ ಆಸ್ಪತ್ರೆ ಇದ್ದು, ಆವರಣದಲ್ಲೇ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಬೆನ್ನಲ್ಲೇ ಇವೆರಡರ ನಡುವೆ ಸಂಪರ್ಕ ಕಲ್ಪಿಸುವ ಸಂಬಂಧ ಸ್ಥಳೀಯ ಜನಪ್ರತಿನಿಧಿಗಳಿಂದ ಒತ್ತಾಯ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿಎಂಆರ್‌ಸಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿದೆ.

ನೋಟಿಸ್‌ ಜಾರಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಮೆಟ್ರೋ ನಿಲ್ದಾಣಗಳಲ್ಲಿ ನೀರು ನುಗ್ಗು ತ್ತಿದ್ದು, ಈ ಸಂಬಂಧ
ಲೋಕಾಯುಕ್ತರು ಬಿಎಂಆರ್‌ಸಿ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿ ಸಿಕೊಂಡಿದ್ದಾರೆ. ಈ ಸಂಬಂಧ ನಿಗಮಕ್ಕೆ ನೋಟಿಸ್‌ ಜಾರಿ ಮಾಡಲಾಗಿದೆ. ಮುಖ್ಯವಾಗಿ ನಾಯಂಡ ಹಳ್ಳಿಯ ಮೆಟ್ರೋ ನಿಲ್ದಾಣದ ಎದುರು ವೃಷಭಾವತಿ ನದಿ ಹಾದುಹೋಗಿದೆ. ಆ ನೀರು ನಿಲ್ದಾಣದಲ್ಲಿ ನುಗ್ಗುತ್ತಿದೆ. ಇದನ್ನು ತಡೆಯಲು ಏನು ಕ್ರಮ ಕೈಗೊಂಡಿದ್ದೀರಿ? ಎಂದು ನೋಟಿಸಿನಲ್ಲಿ ಪ್ರಶ್ನಿಸಿದೆ ಎಂದು ಮೂಲಗಳು ತಿಳಿಸಿವೆ.

ಶಿವಾಜಿನಗರದ ಮೂಲಕ ಹಾದುಹೋಗುವ ಮೆಟ್ರೋ ಅನ್ನು ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ವೈದ್ಯಕೀಯ ಕಾಲೇಜಿಗೆ
ಸಂಪರ್ಕ ಕಲ್ಪಿಸುವ ಆಲೋಚನೆ ಇದೆ. ಹೇಗೆ ವ್ಯವಸ್ಥೆ ಕಲ್ಪಿಸಬೇಕು ಎಂಬುದರ ಬಗ್ಗೆ ವ್ಯವಸ್ಥಾಪಕ
ನಿರ್ದೇಶಕರು ನಿರ್ಧರಿಸುವರು.
ಯು.ಎ. ವಸಂತರಾವ್‌ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ, ಬಿಎಂಆರ್‌ಸಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.