ನೋಟು ಅಮಾನ್ಯದಿಂದ ನಲುಗಿದ ಸಾಮಾಜಿಕ-ಆರ್ಥಿಕ ಕ್ಷೇತ್ರ


Team Udayavani, Nov 9, 2017, 3:07 PM IST

09-31.jpg

ದಾವಣಗೆರೆ: ಕೇಂದ್ರ ಸರ್ಕಾರ 2016ರ ನ.8 ರಂದು ಕೈಗೊಂಡ ಗರಿಷ್ಠ ಮುಖಬೆಲೆ ನೋಟು ಅಮಾನೀಕರಣ ಎಂಬುದು ಸಾಮಾಜಿಕ, ಆರ್ಥಿಕ ಕ್ಷೇತ್ರದ ದಮನೀಕರಣ ನೀತಿ ಎಂದು ಬೆಂಗಳೂರಿನ ಸಾಹಿತಿ ಮುರುಳಿಕೃಷ್ಣ ವಿಶ್ಲೇಷಿಸಿದ್ದಾರೆ.

ಸಿಪಿಐ ಜಿಲ್ಲಾ ಮಂಡಳಿ, ಸಿಪಿಐ(ಎಂ) ಜಿಲ್ಲಾ ಸಮಿತಿ ಸಂಯುಕ್ತಾಶ್ರಯದಲ್ಲಿ ಬುಧವಾರ ರೋಟರಿ ಬಾಲಭವನದಲ್ಲಿ ಹಮ್ಮಿಕೊಂಡ ನೋಟು ರದ್ಧತಿ ಮತ್ತು ಜಿ.ಎಸ್‌.ಟಿ.ಯ ದುಷ್ಪರಿಣಾಮ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ, ಕೇಂದ್ರ ಸರ್ಕಾರದ ಮಾಡಿದ ಗರಿಷ್ಠ ಮುಖಬೆಲೆ ನೋಟು ಅಮಾನ್ಯ ಕ್ರಮ ದೇಶದ ಸಾಮಾಜಿಕ, ಆರ್ಥಿಕ ಕ್ಷೇತ್ರದ ಮೇಲೆ ಊಹೆಗೂ ನಿಲುಕುದ ದುಷ್ಪರಿಣಾಮ ಬೀರಿದೆ. ಜನ ಸಾಮಾನ್ಯರು, ಕೃಷಿಕರು, ಕಾರ್ಮಿಕ ವರ್ಗವನ್ನು ಸಂಕಷ್ಟಕೀಡು ಮಾಡಿದೆ ಎಂದರು.

ಭಯೋತ್ಪಾದನೆ, ನಕ್ಸಲ್‌ ಚಟುವಟಿಕೆ, ಕಪ್ಪುಹಣ, ಭ್ರಷ್ಟಾಚಾರ, ಖೋಟಾ ನೋಟು ಹಾವಳಿ ತಡೆಯುವ ಉದ್ದೇಶದಿಂದ ಆರ್ಥಿಕ ಕ್ಷೇತ್ರದ ಸರ್ಜಿಕಲ್‌ ಸೈಕ್‌(ನಿರ್ದಿಷ್ಟ ದಾಳಿ) ನಡೆಸಿದ್ದಾಗಿ ಕೇಂದ್ರ ಸರ್ಕಾರ ನೋಟು ಅಮಾನ್ಯದ ಬಗ್ಗೆ ಹೇಳಿಕೊಂಡಿತ್ತು. ನೋಟು ಅಮಾನ್ಯದಂತಹ ತುರ್ತುಕ್ರಮಕ್ಕೆ ಒಂದು ವರ್ಷವಾದರೂ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕನಸು ಈ ಕ್ಷಣಕ್ಕೂ
ನನಸಾಗಿಲ್ಲ. ಕೇಂದ್ರ ಸರ್ಕಾರ ನೋಟು ಅಮಾನ್ಯ ಧೀರ್ಘಾವಧಿ ಒಳ್ಳೆಯ ಪರಿಣಾಮ ಉಂಟು ಮಾಡಲಿದೆ ಎಂಬ ಅಂದಾಜಿಸಿತ್ತು. ಅದಕ್ಕೂ ಮುನ್ನ ಅಲ್ಪಾವಧಿಯ ಪರಿಣಾಮದ ಫಲವಾಗಿ ಆರ್ಥಿಕ ಕ್ಷೇತ್ರವೇ ಬೇರೆ ಕಡೆ ಮುಖ ಮಾಡಿದೆ ಎಂದರು.

2016ರ ನ. 8 ಮಧ್ಯರಾತ್ರಿಯಿಂದ ಅನ್ವಯವಾಗುವಂತೆ 500, 1ಸಾವಿರ ಮುಖಬೆಲೆಯ ನೋಟು ರದ್ಧುಪಡಿಸಿದ ಸಂದರ್ಭದಲ್ಲಿ 15.44 ಲಕ್ಷ ಕೋಟಿ ಮೌಲ್ಯದ ನೋಟುಗಳು ಚಲಾವಣೆಯಲ್ಲಿದ್ದವು. ಚಲಾವಣೆಯಲ್ಲಿದ್ದ ಒಟ್ಟಾರೆ ಶೇ. 85ರಷ್ಟು 500, 1 ಸಾವಿರ ಮುಖಬೆಲೆ ನೋಟುಗಳಿದ್ದವು. 15.44 ಲಕ್ಷ ಕೋಟಿ 24 ಬಿಲಿಯನ್‌ಗೆ ಸಮ. ಕೇಂದ್ರ ಸರ್ಕಾರ ಎಲ್ಲ ಹಣ ವಾಪಾಸ್ಸು ಬರುವ ನಿರೀಕ್ಷೆ ಇಟ್ಟುಕೊಂಡಿತ್ತು. ವಾಪಾಸ್ಸಾಗಿದ್ದು 15.28 ಲಕ್ಷ ಕೋಟಿ. ಇನ್ನೂ 16 ಸಾವಿರ ಕೋಟಿಯ ಲೆಕ್ಕಕ್ಕೇ ಸಿಕ್ಕಿಲ್ಲ ಎಂದು ದೂರಿದರು.
ಅತಿ ಮುಖ್ಯವಾಗಿ ಗರಿಷ್ಟ ಮುಖಬೆಲೆಯ ನೋಟುಗಳ ಅಮಾನ್ಯ ಮಾಡುವಂತಹ ಆರ್ಥಿಕ ದುಸ್ಥಿತಿಯ ವಾತಾವರಣ ಇರಲೇ ಇಲ್ಲ. ಜಗತ್ತಿನ ಇತಿಹಾಸದಲ್ಲಿ ಯಾವುದೇ ದೇಶದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ನೋಟುಗಳ ಅಪಮೌಲ್ಯ ಮಾಡಿಯೇ ಇಲ್ಲ. ನೋಟು ಅಮಾನ್ಯ ನಂತರ ಕೆಲವೇ ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೇ ನೋಟು ಅಮಾನ್ಯ ಮಾಡಿದ್ದು ತಪ್ಪು ಎಂಬುದು ಮನವರಿಕೆ ಆಗಿದೆ. ಆದರೆ, ಅದನ್ನು ಬಹಿರಂಗವಾಗಿ ತೋರಿಸದೆ ನೋಟು ಅಮಾನ್ಯಕ್ಕೆ ದೇಶಪ್ರೇಮದ ನಶೆಯ ಸ್ಪರ್ಶ ನೀಡಲಾಗುತ್ತಿದೆ ಎಂದು ಹೇಳಿದರು.

ನೋಟು ಅಮಾನ್ಯದ ನಂತರ ಹೊರ ತಂದ 500, 2 ಸಾವಿರ ಮುಖಬೆಲೆಯ ನೋಟುಗಳ ಮುದ್ರಣಕ್ಕೆ 20 ಸಾವಿರ ಟನ್‌ ಕಾಗದ ಆಮದು ಮಾಡಿಕೊಳ್ಳಬೇಕಾಯಿತು.  1.29 ಲಕ್ಷ ಕೋಟಿ ಸಾಗಾಣಿಕೆ ವೆಚ್ಚ ಮಾಡಬೇಕಾಯಿತು. ನೋಟು ಅಮಾನ್ಯದಂತಹ ಬಹು ಮುಖ್ಯ ಆರ್ಥಿಕ ಕ್ರಮ ತೆಗೆದುಕೊಳ್ಳುವ ಮುನ್ನ ಕೇಂದ್ರ ಸರ್ಕಾರ ಯಾವುದೇ ಪೂರ್ವ ತಯಾರಿ ಮಾಡಿಕೊಂಡಿರಲಿಲ್ಲ. ಹಾಗಾಗಿ
ತಾತ್ಕಾಲಿಕ ಸಮಸ್ಯೆ ನಿವಾರಣೆ ಮಾಡಲಿಕ್ಕೆ ಸಾಧ್ಯವೇ ಆಗಲಿಲ್ಲ. ಮೊದಲು 50 ದಿನ ಕಾಲಾವಕಾಶ ಕೇಳಿದ್ದ ಪ್ರಧಾನಿ ನರೇಂದ್ರ ಮೋದಿ ಸಮಸ್ಯೆ ನಿವಾರಿಸಲು ಈವರೆಗೆ ಸಾಧ್ಯ ಆಗಿಲ್ಲ. ಆಗುವುದೂ ಇಲ್ಲ ಎಂದು ಹೇಳಿದರು.

ನೋಟು ಅಮಾನ್ಯದ ನಂತರ ಜನರು ತಮ್ಮದೇ ಹಣಕ್ಕಾಗಿ ಬ್ಯಾಂಕ್‌ಗಳ ಮುಂದೆ ಉದ್ದನೆಯ ಸರತಿ ಸಾಲಲ್ಲಿ ಮಳೆ, ಚಳಿ,
ಬಿಸಿಲು ಎನ್ನದೆ ಕಾಯಬೇಕಾಯಿತು. 100ಕ್ಕೂ ಹೆಚ್ಚು ಜನರು, 80ಕ್ಕೂ ಹೆಚ್ಚು ಬ್ಯಾಂಕ್‌ ಉದ್ಯೋಗಿಗಳು ಸಾವನ್ನಪ್ಪಿದರು. ಆದರೆ, ಕೇಂದ್ರ ಸರ್ಕಾರ ಒಂದೇ ಒಂದು ಸಾಂತ್ವನ ಮಾತು ಹೇಳದೆ ಅತ್ಯಂತ ಅಮಾನವೀಯವಾಗಿ ವರ್ತಿಸಿತು. ನೋಟು ಅಮಾನ್ಯದ ನಂತರ ಭಯೋತ್ಪಾದನೆ, ನಕ್ಸಲ್‌ ಚಟುವಟಿಕೆ, ಭ್ರಷ್ಟಾಚಾರ, ಕಪ್ಪುಹಣ, ನಕಲಿ ನೋಟು ಚಲಾವಣೆ ನಿಯಂತ್ರಣಕ್ಕೆ ಬಂದಿಲ್ಲ ಎಂದು ತಿಳಿಸಿದರು.

ಪ್ರೊ. ಡಾ| ಎ.ಬಿ. ರಾಮಚಂದ್ರಪ್ಪ ಮಾತನಾಡಿ, ನೋಟು ಅಮಾನ್ಯ ಆರ್ಥಿಕ ಬಾಂಬಾದರೆ, ಜಿಎಸ್‌ಟಿ ತೆರಿಗೆ ಬಾಂಬ್‌. ನೋಟು ಅಮಾನ್ಯ, ಜಿಎಸ್‌ಟಿ ದುಷ್ಪರಿಣಾಮದ ಗಮನ ಬೇರೆಡೆ ಸೆಳೆಯಲು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ ಎಂದು ದೂರಿದ ಅವರು, ಕಾಂಗ್ರೆಸ್‌-ಬಿಜೆಪಿ ಸದಾ ಜನರ ಕೊರಳ ಕೊಯ್ಯುವ ಪಕ್ಷಗಳು ಎಂದರು.

ಹಿರಿಯ ಕಾರ್ಮಿಕ ಮುಖಂಡ ಎಚ್‌. ಕೆ. ರಾಮಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಕೆ.ಎಲ್‌. ಭಟ್‌, ಆನಂದರಾಜ್‌, ಎಂ.ಬಿ. ಶಾರದಮ್ಮ, ಟಿ.ಎಸ್‌. ನಾಗರಾಜ್‌, ಕೆ.ಜಿ. ಶಿವಮೂರ್ತಿ, ಇ. ಶ್ರೀನಿವಾಸ್‌, ಮಹಮ್ಮದ ಬಾಷಾ, ಆವರಗೆರೆ ವಾಸು ಇತರರು ಇದ್ದರು. ಐರಣಿ ಚಂದ್ರು, ಅಂಜಿನಪ್ಪ ಲೋಕಿಕೆರೆ ಜಾಗೃತಿ ಗೀತೆ ಹಾಡಿದರು. ಕೆ.ಎಸ್‌. ಆನಂದರಾಜ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.