300 ವಿದ್ಯಾರ್ಥಿಗಳಿಗೆ ಸರಬರಾಜಾಗಿಲ್ಲ ಪಠ್ಯಪುಸ್ತಕ 


Team Udayavani, Nov 9, 2017, 3:31 PM IST

9-Nov-13.jpg

ಪುತ್ತೂರು: ಮಿಷನ್‌ 95+ ಯೋಜನೆಯನ್ನು ಜಾರಿಗೆ ತಂದದ್ದು ನಾವೇ. ಆದರೆ ಇದರ ಯಶಸ್ಸಿಗೆ ಹಿಂದೆ ಬೀಳಲು ಕೂಡ ನಾವೇ ಕಾರಣವಾದರೆ ಹೇಗೆ?

ಪುತ್ತೂರು ತಾಲೂಕಿನ ಪ್ರಾಥಮಿಕ ಶಾಲೆಯ 300 ವಿದ್ಯಾರ್ಥಿಗಳಿಗೆ ಇನ್ನೂ ಪಠ್ಯಪುಸ್ತಕ ಸರಬರಾಜಾಗದ ಹಿನ್ನೆಲೆಯಲ್ಲಿ ಬುಧವಾರ ನಡೆದ ತಾ.ಪಂ. ಮಾಸಿಕ ಕೆಡಿಪಿ ಸಭೆಯಲ್ಲಿ ಈ ಪ್ರಶ್ನೆ ಮೂಡಿಬಂದಿತು. ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ನಿರ್ಲಕ್ಷ್ಯ ಯಾಕೆ ?
ವಿಷಯ ಪ್ರಸ್ತಾಪಿಸಿದ ಸ್ಥಾಯೀ ಸಮಿತಿ ಅಧ್ಯಕ್ಷ ಮುಕುಂದ ಗೌಡ ಮಾತನಾಡಿ, ರಾಮಕುಂಜ ಶಾಲೆಯಲ್ಲಿ 59 ವಿದ್ಯಾರ್ಥಿಗಳಿಗೆ ಇನ್ನೂ ಪಠ್ಯಪುಸ್ತಕ ಸಿಕ್ಕಿಲ್ಲ. ತಾಲೂಕಿನಲ್ಲಿ ಇಂತಹ ಎಷ್ಟು ಮಕ್ಕಳಿಗೆ ಪುಸ್ತಕ ಸಿಕ್ಕಿಲ್ಲ. ಇಲಾಖೆಯ ಇಂತಹ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳನ್ನು ಬಲಿ ನೀಡುವುದು ಯಾಕೆ? ಮಿಷನ್‌ 95+ ಯೋಜನೆಯನ್ನು ಹಮ್ಮಿಕೊಂಡು, ಪಠ್ಯ ಪುಸ್ತಕ ನೀಡದೇ ಇರುವುದು ಸರಿಯಲ್ಲ. ಹೀಗಿರುವಾಗ ಶೇ. 100 ಫಲಿತಾಂಶ ಪಡೆಯುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ಉತ್ತರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ, ತಾಲೂಕಿನಲ್ಲಿ 300 ವಿದ್ಯಾರ್ಥಿಗಳಿಗೆ ಪುಸ್ತಕ ಸಿಗಲು ಬಾಕಿ ಇದೆ. ಈ
ವಿಷಯವನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಇದೀಗ ಪಠ್ಯಪುಸ್ತಕವನ್ನು ಜಿಲ್ಲೆಗೆ ಕಳುಹಿಸಿಕೊಡಲಾಗಿದೆ. ಶೀಘ್ರ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಗುವುದು ಎಂದರು.

ಶಾಲೆ ಆರಂಭವಾಗಿ ಆರು ತಿಂಗಳು ಕಳೆಯಿತು. ಇದಕ್ಕೆ ಮೊದಲು ಜೆರಾಕ್ಸ್‌ ಮಾಡಿಯಾದರೂ ನೀಡಬಹುದಿತ್ತು.
ವಾರದೊಳಗೆ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ತಲುಪಿಸಿ ಎಂದು ಸಭೆಯಲ್ಲಿ ಸೂಚಿಸಲಾಯಿತು.

ಅತಿಥಿ ಶಿಕ್ಷಕರಿಗೆ ವೇತನ ನೀಡಿಲ್ಲ
ಉಪಾಧ್ಯಕ್ಷೆ ರಾಜೇಶ್ವರಿ ಮಾತನಾಡಿ, ಅತಿಥಿ ಶಿಕ್ಷಕರಿಗೆ ವೇತನ ನೀಡಿಲ್ಲ ಎಂಬ ದೂರು ಬಂದಿದೆ. ಯಾವ ಕಾರಣಕ್ಕಾಗಿ ವೇತನ ನೀಡಿಲ್ಲ ಎಂದು ಪ್ರಶ್ನಿಸಿದರು.

ಉತ್ತರಿಸಿದ ಬಿಇಒ, ಇತ್ತೀಚೆಗೆ ಡಿಡಿಪಿಐ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ಶೀಘ್ರದಲ್ಲಿ ವೇತನ ಪಾವತಿಸುವ ಸಾಧ್ಯತೆ ಇದೆ ಎಂದರು.ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿ  ಜಗದೀಶ್‌ ಮಾತನಾಡಿ, ತತ್‌ಕ್ಷಣ ಇದನ್ನು ಫಾಲೋಅಪ್‌ ಮಾಡಿ. ಅತಿಥಿ ಶಿಕ್ಷಕರನ್ನು ದುಡಿಸಿಕೊಂಡು, ವೇತನ ನೀಡಲಿಲ್ಲ ಎಂದು ಆಗುವುದು ಬೇಡ. ಅಲ್ಲದೇ ಅತಿಥಿ ಶಿಕ್ಷಕರು ಅರ್ಧದಲ್ಲಿ ಶಾಲೆಯಿಂದ ಹೋದರೆ, ಪಾಠ ಪ್ರವಚನಕ್ಕೆ ತೊಂದರೆಯಾದೀತು. ಇದಕ್ಕೆ ಅವಕಾಶ ನೀಡಬೇಡಿ ಎಂದು ಕಿವಿಮಾತು ಹೇಳಿದರು.

ಶಾಂತಿನಗರ ಶಾಲಾ ವಿದ್ಯಾರ್ಥಿಯೊಬ್ಬ ಪ್ರಧಾನಿಗೆ ಪತ್ರ ಬರೆದಿದ್ದಾನೆ. ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಮುಕುಂದ ಪ್ರಶ್ನಿಸಿದರು. ಉತ್ತರಿಸಿದ ಬಿಇಒ, ಮೂರು ದಿನಕ್ಕೊಮ್ಮೆ ಸಿಆರ್‌ಪಿಯನ್ನು ನಿಯೋಜನೆ ಮಾಡಲಾಗಿದೆ ಎಂದರು.

ಬಜತ್ತೂರು ಕಡಬದಿಂದ ಹೊರಕ್ಕೆ
ಕಡಬ ತಾಲೂಕು ರಚನೆಯ ಬಗ್ಗೆ ಜಿಲ್ಲಾಧಿಕಾರಿಗಳ ಹಂತದಲ್ಲಿ ಕ್ರಮ ಜರಗಿಸಲಾಗುತ್ತಿದೆ. ಬಜತ್ತೂರನ್ನು ಕಡಬದಿಂದ ಹೊರಕ್ಕೆ ಇಡಲಾಗಿದೆ ಎಂದು ತಹಶೀಲ್ದಾರ್‌ ಅನಂತಶಂಕರ ಮಾಹಿತಿ ನೀಡಿದರು.

ಸರಕಾರಿ ಆಸ್ಪತ್ರೆ ಬಗ್ಗೆ ದೂರು
ಸರಕಾರಿ ಆಸ್ಪತ್ರೆಯ ಬಗ್ಗೆ ಪ್ರಶ್ನಿಸಿದ ಅಧ್ಯಕ್ಷೆ ಭವಾನಿ ಚಿದಾನಂದ್‌, ಆಸ್ಪತ್ರೆ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದೆ. ಹಿಂದಿನ ತಿಂಗಳು ಎಷ್ಟು ಹೆರಿಗೆ ಮಾಡಿಸಲಾಗಿದೆ ಎಂದರು ಪ್ರಶ್ನಿಸಿದರು. ಉತ್ತರಿಸಿದ ಆಸ್ಪತ್ರೆ ಆಡಳಿತಾಧಿಕಾರಿ, ಹಿಂದಿನ ತಿಂಗಳು 24 ಗರ್ಭಿಣಿಯರು ಆಸ್ಪತ್ರೆಗೆ ಬಂದಿದ್ದು, 9 ಸಿಜೇರಿಯನ್‌ ಆಗಿದೆ ಎಂದರು. ಹಾಗಾದರೆ ಹೆರಿಗೆಗೆ ಸುಳ್ಯಕ್ಕೆ ಕಳುಹಿಸುವುದು ಯಾಕೆ ಎಂದು ಅಧ್ಯಕ್ಷೆ ಮರು ಪ್ರಶ್ನಿಸಿದರು. ಹೆಚ್ಚಾಗಿ ಪುತ್ತೂರು ಆಸ್ಪತ್ರೆಯಲ್ಲಿ ಸಾಧ್ಯವಾಗದಿದ್ದರೆ ಮಂಗಳೂರಿನ ಲೇಡಿಗೋಷನ್‌ಗೆ ಕಳುಹಿಸಲಾಗುತ್ತಿದೆ. ಬಳಿಕ ಅವರಿಚ್ಛೆಯಂತೆ ತೆರಳುತ್ತಾರೆ ಎಂದರು. ಪ್ರತಿಕ್ರಿಯಿಸಿದ ಅಧ್ಯಕ್ಷೆ, ಸರಕಾರಿ ಆಸ್ಪತ್ರೆಯಲ್ಲಿ ಸ್ಪಂದಿಸುತ್ತಿಲ್ಲ ಎಂಬ ದೂರು ಬರುತ್ತಿದೆ. ದೂರು ಬಾರದ ಹಾಗೇ ಕೆಲಸ ಮಾಡಬೇಕಾದ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಸೂಚಿಸಿದರು.

ಟಾಪ್ ನ್ಯೂಸ್

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.