ಜಡ್ಜ್ಗಳ ಹೆಸರಲ್ಲಿ ಲಂಚ: ಸಂವಿಧಾನ ಪೀಠಕ್ಕೆ ವರ್ಗ
Team Udayavani, Nov 10, 2017, 6:30 AM IST
ಹೊಸದಿಲ್ಲಿ: ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಹೆಸರಿನಲ್ಲಿ ಲಂಚ ಪಡೆದಿರುವ ಪ್ರಕರಣದ ವಿಚಾರಣೆಯನ್ನು ಐವರು ಹಿರಿಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಂವಿಧಾನ ಪೀಠ ನಡೆಸಲಿದೆ. ನ್ಯಾ.ಜೆ.ಚಲಮೇಶ್ವರ್ ಅವರನ್ನೊಳಗೊಂಡ ಪೀಠ ಕೇಂದ್ರ ಸರಕಾರ ಮತ್ತು ಸಿಬಿಐಗೆ ನೋಟಿಸ್ ನೀಡಿ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ಏಕೆ ರಚಿಸಬಾರದು ಎಂದು ಕೇಳಿದೆ. ನ.13ಕ್ಕೆ ವಿಚಾರಣೆ ನಡೆಸುವುದಾಗಿ ಹೇಳಿದೆ.
ಒಡಿಶಾದಲ್ಲಿನ ವೈದ್ಯಕೀಯ ಕಾಲೇಜಿಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ನಿವೃತ್ತ ಜಡ್ಜ್ ಮಸೂÅರ್ ಖುದ್ದುಸಿ ಮತ್ತಿತರರು ಲಂಚ ಕೇಳಿದ್ದಾರೆಂಬ ಆರೋಪದ ಮೇರೆಗೆ ಅವರನ್ನು ಬಂಧಿಸಿ, ಬಿಡುಗಡೆ ಮಾಡಲಾಗಿತ್ತು. ಇದೇ ಪ್ರಕರಣದ ಎಫ್ಐಆರ್ ಬಗ್ಗೆ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿರುವುದರಿಂದ ಅವರು ವಿಚಾರಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಬಾರದು ಎಂದು ಹಿರಿಯ ನ್ಯಾಯವಾದಿ ದುಷ್ಯಂತ್ ದವೆ ಅರಿಕೆ ಮಾಡಿದ್ದರಿಂದ ಕೋರ್ಟ್ ಈ ನಿರ್ಧಾರ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
V K Saxena ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಕೇಸ್: ಮೇಧಾ ಪಾಟ್ಕರ್ ದೋಷಿ
MEA action; ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ಕಳುಹಿಸಿದ ವಿದೇಶಾಂಗ ಸಚಿವಾಲಯ
Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ
10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ನೇಣಿಗೆ ಶರಣಾದ 10 ವರ್ಷದ ಬಾಲಕಿ
Form 17c: ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?