ಅನಿವಾಸಿ ಕನಡಿಗರಿಗೆ ಎನ್‌ಆರ್‌ಕೆ ಕಾರ್ಡ್‌


Team Udayavani, Nov 10, 2017, 9:55 AM IST

10-12.jpg

ಬೆಂಗಳೂರು: ವಿಶ್ವದಲ್ಲಿರುವ ಕನ್ನಡಿಗರಿಗೆ ತಾಯ್ನಾಡಿನ ಬಗ್ಗೆ ಹೆಮ್ಮೆ ಮೂಡಿಸಲು ಅನಿವಾಸಿ ಕನ್ನಡಿಗರಿಗೆ ವಿಶೇಷ ಗುರುತಿನ ಚೀಟಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. 192 ರಾಷ್ಟ್ರಗಳಲ್ಲಿನ ಅನಿವಾಸಿ ಕನ್ನಡಿಗರನ್ನು ಗುರುತಿಸಿ ಡಿಸೆಂಬರ್‌ನಲ್ಲಿ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಘಟಕದ ಮೂಲಕ ಎನ್‌ಆರ್‌ಕೆ (ನಾನ್‌ ರೆಸಿಡೆಂಟ್‌ ಕನ್ನಡಿಗ) ಕಾರ್ಡ್‌ಗಳನ್ನು ನೀಡಲು ಸರ್ಕಾರ ತೀರ್ಮಾನಿಸಿದೆ.

ಸುಮಾರು 13 ಲಕ್ಷಕ್ಕೂ ಹೆಚ್ಚಿನ ಕನ್ನಡಿಗರು ವಿಶ್ವದೆಲ್ಲೆಡೆ ವಾಸವಾಗಿದ್ದು, ಎಲ್ಲರೂ ಕರ್ನಾಟಕ ಸರ್ಕಾರದೊಂದಿಗೆ ಸಂಪರ್ಕ ಹೊಂದಿಲ್ಲ. ಅಲ್ಲದೇ ಹೊರ ದೇಶಗಳಲ್ಲಿರುವ ಎಲ್ಲ ಕನ್ನಡಿಗರ ಬಗ್ಗೆ ರಾಜ್ಯ ಸರ್ಕಾರದ ಬಳಿಯೂ ಸೂಕ್ತ ದಾಖಲೆಗಳಿಲ್ಲ. ಅನಿವಾಸಿ ಕನ್ನಡಿಗರಿಗೆ ಅಪಘಾತ, ವಂಚನೆ, ಸಾವು ಸಂಭವಿಸಿದಾಗ ಮಾತ್ರ ಅನಿವಾಸಿ ಕನ್ನಡಿಗರು ರಾಜ್ಯ ಸರ್ಕಾರವನ್ನು ಸಂಪರ್ಕಿಸಿ ಸಹಾಯ ಕೇಳುವ ಪರಿಪಾಠವಿದೆ. ಅಲ್ಲದೇ ಕನ್ನಡಿಗರು ತಮ್ಮ ತಾಯಿ ನಾಡು ಬಿಟ್ಟು ಹೊರಗಡೆ ಹೋದಾಗ ನಾಡಿನ ಸಂಪರ್ಕ ಕಡಿದುಕೊಂಡು ಅನಾಥ ಭಾವ ಮೂಡುವ ಸಂದರ್ಭ ಹೆಚ್ಚಿರುತ್ತದೆ. ಅಂತಹ ಭಾವನೆಯನ್ನು ಹೋಗಲಾಡಿಸಲು ಅನಿವಾಸಿ ಕನ್ನಡಿಗರ ಘಟಕ ವಿದೇಶದಲ್ಲಿರುವ ಕನ್ನಡಿಗರಿಗೆ ಎನ್‌ಆರ್‌ಕೆ ಕಾರ್ಡ್‌ ನೀಡುವ ಮೂಲಕ ಹೆಮ್ಮೆ ಮೂಡುವುದರ ಜತೆಗೆ ರಾಜ್ಯ ಸರ್ಕಾರ ತಮ್ಮನ್ನು ಗುರುತಿಸಿದೆ ಎಂಬ ಅಭಿಮಾನ ಮೂಡಿಸಲು ಮುಂದಾಗಿದೆ.

ಎನ್‌ಆರ್‌ಕೆ ಕಾರ್ಡ್‌ ವಿಶೇಷವೇನು?:
ಉದ್ಯೋಗ ಅರಸಿ ಹೊರ ದೇಶಗಳಿಗೆ ಹೋಗಿರುವ ಕನ್ನಡಿಗರು ತಾವು ದುಡಿದ ದುಡ್ಡನ್ನು ಊರಿಗೆ ಕೊಡುವಾಗ ಫ‌ಂಡ್‌ ಟ್ರಾನ್ಸ್‌ಫ‌ರ್‌ ಮಾಡಲು ಅವರು ವಿದೇಶಿ ಕರೆನ್ಸಿಯನ್ನು ಭಾರತೀಯ ರೂಪಾಯಿಗೆ ವಿನಿಮಯ ಮಾಡಿಕೊಳ್ಳಬೇಕು. ಅದಕ್ಕೆ ಬ್ಯಾಂಕ್‌ಗಳು ಹಣ ವಿನಿಮಯಕ್ಕೆ ಚಾರ್ಜ್‌ ಮಾಡುತ್ತವೆ. ಅಂತಹ ಹೆಚ್ಚಿನ ಸರ್ವಿಸ್‌ ಚಾರ್ಜ್‌ಗಳನ್ನು ಕಡಿಮೆ ಮಾಡಲು ಎನ್‌ಆರ್‌ಐ ಕರ್ನಾಟಕ
ಘಟಕ ಖಾಸಗಿ ಬ್ಯಾಂಕ್‌ ಜತೆ ಒಪ್ಪಂದ ಮಾಡಿಕೊಂಡು ಎನ್‌ಆರ್‌ಕೆ ಕಾರ್ಡ್‌ ಹೊಂದುವ ಕನ್ನಡಿಗರಿಗೆ ರಿಯಾಯ್ತಿ ನೀಡಲು ಅವಕಾಶ ಕಲ್ಪಿಸಿ ಕೊಡಲು ತೀರ್ಮಾನಿಸಿದೆ. ಅಲ್ಲದೇ ಅನಿವಾಸಿ ಕನ್ನಡಿಗರು ರಾಜ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯದಲ್ಲಿ ಪ್ರವಾಸ ಕೈಗೊಂಡರೆ, ಟ್ರಾವೆಲ್‌, ಹೋಟೆಲ್‌ ಹಾಗೂ ಆಸ್ಪತ್ರೆಗಳಲ್ಲಿಯೂ ಎನ್‌ಆರ್‌ಕೆ ಕಾರ್ಡ್‌ ಹೊಂದಿದವರಿಗೆ ಡಿಸ್ಕೌಂಟ್‌ ದರದಲ್ಲಿ ಸೌಲಭ್ಯ ದೊರೆಯು ವಂತೆ ನೋಡಿಕೊಳ್ಳಲು ಈ ಕಾರ್ಡ್‌ನಲ್ಲಿ ಅವಕಾಶ ದೊರೆಯುವಂತೆ ಮಾಡಲಾಗಿದೆ.

ವಿಶೇಷವಾಗಿ ಅನೇಕ ಅನಿವಾಸಿ ಕನ್ನಡಿಗರು ರಾಜ್ಯದಲ್ಲಿ ಉದ್ದಿಮೆ ಸ್ಥಾಪನೆ ಮಾಡುವುದು. ತಾವು ಹುಟ್ಟಿ ಬೆಳೆದ ಊರು, ಜಿಲ್ಲೆಗಳಲ್ಲಿ ಸಾಮಾಜಿಕ ಸೇವೆ ಮಾಡಲು ಮುಂದೆ ಬರುತ್ತಾರೆ. ಅಂತಹ ಸಂದರ್ಭದಲ್ಲಿ ಅವರು ಹಣ ವರ್ಗಾವಣೆ ಮಾಡುವಾಗ ಸಾಕಷ್ಟು ತೆರಿಗೆ ವಿಧಿಸಲಾಗುತ್ತದೆ. ಎನ್‌ಆರ್‌ಕೆ ಕಾರ್ಡ್‌ ಹೊಂದಿದ ಅನಿವಾಸಿ ಕನ್ನಡಿಗರು ರಾಜ್ಯದಲ್ಲಿ ಸಮಾಜ ಸೇವೆ ಮಾಡಲು ಮುಂದಾದರೆ, ಅವರಿಗೆ ತೆರಿಗೆ ರಿಯಾಯ್ತಿಯನ್ನೂ ನೀಡಲು ಸರ್ಕಾರ ನಿರ್ಧರಿಸಿದೆ.

ಕಾರ್ಡ್‌ ಪಡೆಯಲು ಅರ್ಹತೆ: ಭಾರತೀಯ ಪಾರ್ಸ್‌ ಪೋರ್ಟ್‌ ಹೊಂದಿರುವ ಹಾಗೂ ಕನಿಷ್ಠ 6 ತಿಂಗಳಿಂದ ವಿದೇಶಗಳಲ್ಲಿ ವಾಸವಾಗಿರುವ ಕನ್ನಡಿಗರು ಎನ್‌ಆರ್‌ಕೆ ಕಾರ್ಡ್‌ ಪಡೆಯಲು ಅರ್ಹರಾಗಿರುತ್ತಾರೆ. ಎನ್‌ಆರ್‌ಕೆ ಕಾರ್ಡ್‌ ಪಡೆಯಲು ಅನಿವಾಸಿ ಕನ್ನಡಿಗರು ಯಾವುದೇ ವೆಚ್ಚ ಭರಿಸಿದೇ, ಎನ್‌ ಆರ್‌ಐ ಫೋರಂ ಕರ್ನಾಟಕ ಡಾಟ್‌ ಆರ್ಗ್‌ನಲ್ಲಿ ತಮ್ಮ ಸಂಪೂರ್ಣ ವಿವರ ನೀಡಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ಮಾಹಿತಿ ಆಧಾರದಲ್ಲಿ ಎನ್‌ಆರ್‌ಐ ಕರ್ನಾಟಕ ಘಟಕದಿಂದ ಎನ್‌ಆರ್‌ಕೆ ಕಾರ್ಡ್‌ ಉಚಿತವಾಗಿ ನೀಡಲಾಗುತ್ತದೆ.

ಓಸಿಐ, ಪಿಐಒಗಳಿಗೆ ಅವಕಾಶವಿಲ್ಲ: ಕರ್ನಾಟಕ ಮೂಲದವರಾಗಿದ್ದರೂ ವಿದೇಶಗಳಲ್ಲಿಯೇ ನೆಲೆಸಿ ಆ ದೇಶದ ಪಾರ್ಸ್‌ ಪೊರ್ಟ್‌ ಹೊಂದಿರುವ ಓಸಿಐ (ಓವರ್‌ ಸೀ ಸಿಟಿಜನ್‌) ಹಾಗೂ ರಾಜ್ಯದ ಮೂಲದವರಾಗಿದ್ದು ವಿದೇಶಗಳಲ್ಲಿಯೇ ತಲೆಮಾರುಗಳಿಂದ ನೆಲೆಸಿ ಪಿಐಒ (ಪರಸನ್ಸ್‌ ಆಫ್ ಇಂಡಿಯನ್‌ ಓರಿಜನ್‌) ಗಳಾಗಿ ಅಲ್ಲಿನ ಪ್ರಜೆಗಳಾಗಿದ್ದರೆ ಅಂತವರಿಗೆ ಎನ್‌ಆರ್‌ಕೆ ಕಾರ್ಡ್‌ ಪಡೆಯಲು ಅವಕಾಶವಿಲ್ಲ. 

ಎನ್‌ಆರ್‌ಕೆಗಳಿಗೆ ರಾಜ್ಯ ಸರ್ಕಾರ ಅಧಿಕೃತ ಗುರುತಿನ ಚೀಟಿ ನೀಡುವುದರಿಂದ ಸರ್ಕಾರ ತಮ್ಮನ್ನು ಗುರುತಿಸಿದೆ ಎಂಬ ಅಭಿಮಾನ ಅವರಲ್ಲಿ ಮೂಡುತ್ತದೆ. ಅಲ್ಲದೇ ಅವರು ರಾಜ್ಯದೊಂದಿಗೆ ಸಂಪರ್ಕ ಇಟ್ಟುಕೊಳ್ಳಲು ಅನುಕೂಲವಾಗುತ್ತದೆ. ಇದರಿಂದ ವಿದೇಶಗಳಲ್ಲಿರುವ ಕನ್ನಡಿಗರ ಬಗ್ಗೆ ನಮಗೂ ಸ್ಪಷ್ಟ ಮಾಹಿತಿ ದೊರೆತಂತಾಗುತ್ತದೆ. 
 ●ಡಾ. ಆರತಿ ಕೃಷ್ಣ, ಅನಿವಾಸಿ ಭಾರತೀಯಕ್ಷೆ ಫೋರಂನ ಕರ್ನಾಟಕ ಉಪಾಧ್ಯಕ್ಷೆ

ರಾಜ್ಯ ಸರ್ಕಾರ ನಮಗೆ ಅಧಿಕೃತ ಗುರುತಿನ ಚೀಟಿ ನೀಡಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಇದರಿಂದ ನಮಗೂ ನಮ್ಮ ನಾಡಿನ ಬಗ್ಗೆ ಹೆಮ್ಮೆ ಬೆಳೆಯುವುದರ ಜತೆಗೆ ರಾಜ್ಯದೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಲು ಅನುಕೂಲವಾಗುತ್ತದೆ.
 ●ಈಶ್ವರ್‌ ಕೇದಾರಿ, ಅಮೆರಿಕದಲ್ಲಿರುವ ಅನಿವಾಸಿ ಕನ್ನಡಿಗ

 ●ಶಂಕರ ಪಾಗೋಜಿ

ಟಾಪ್ ನ್ಯೂಸ್

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.