ಗೂಂಡಾಸ್ತ್ರ ಬಳಕೆಯಾಗುತ್ತಿಲ್ಲ


Team Udayavani, Nov 11, 2017, 11:17 AM IST

RAMREDDY.jpg

ಬೆಂಗಳೂರು: ರೌಡಿಗಳ ಹತೋಟಿಗೆ ಗೂಂಡಾ ಕಾಯ್ದೆಯನ್ನು ಸಮರ್ಪಕವಾಗಿ ಬಳಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಎಫ್ಕೆಸಿಸಿಐನಲ್ಲಿ ಶುಕ್ರವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು/

ನಮ್ಮಲ್ಲಿ ಗೂಂಡಾ ಕಾಯ್ದೆಯನ್ನು ಸರಿಯಾಗಿ ಉಪಯೋಗಿಸುತ್ತಿಲ್ಲ. ರೌಡಿಸಂ ಹತೋಟಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ನಿಮ್ಮ ಪೊಲೀಸ್‌ಠಾಣಾ ವ್ಯಾಪ್ತಿಯಲ್ಲಿ ರೌಡಿಗಳು ಇರಬೇಕು. ಇಲ್ಲವೇ ಪೊಲೀಸರಿರಬೇಕು. ಯಾರು ಇರಬೇಕು ಎಂಬುದನ್ನು ನೀವೇ ತೀರ್ಮಾನಿಸಿಕೊಳ್ಳಿ ಎಂದಿದ್ದೇನೆ.

ರೌಡಿಗಳು ಮನೆಯಲ್ಲಿರಬೇಕು ಅಥವಾ ರಾಜ್ಯ ಬಿಟ್ಟು ಹೋಗಬೇಕು. ಹೀಗೆ ಮಾಡಲು ಈಗಿರುವ ಅಧಿಕಾರ ಸಾಲದೇ ಎಂದು ಕೇಳಿದ್ದು, ಪದೇ ಪದೇ ಸಾರ್ವಜನಿಕರಿಗೆ ತೊಂದರೆ ಕೊಡುವವರಿಗೆ ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಬಾಲಕಿಯರು ಮತ್ತು ಮಹಿಳಾ ಶಾಲಾ- ಕಾಲೇಜುಗಳು ಸುತ್ತಮುತ್ತ ಪೊಲೀಸ್‌ ಬೀಟ್‌ಗೆ ವ್ಯವಸ್ಥೆ ಮಾಡಿದ್ದು, ಪೋಲಿ ಹುಡುಗರು ಚುಡಾಯಿಸುವಂತ ಘಟನೆಗಳಿಗೆ ಕಡಿವಾಣ ಹಾಕಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಮೀಟರ್‌ ಬಡ್ಡಿ, ಓಸಿ, ಗಾಂಜಾ ಮಾರಾಟ ಇಲ್ಲದಂತೆ ಮಾಡಬೇಕು.

ಹೊರ ದೇಶಗಳಿಂದ ಶಿಕ್ಷಣಕ್ಕಾಗಿ ಬಂದು ಪುಂಡಾಟಿಕೆ ಮಾಡುವವರ ವೀಸಾ ರದ್ದುಪಡಿಸಿ, ವಾಪಸ್‌ ಕಳುಹಿಸುವಂತೆ ಅಧಿಕಾರಿಗೆ ಸೂಚನೆ ನೀಡಲಾಗಿದೆ. ಪ್ರತಿ ಏರಿಯಾಗಳಲ್ಲೂ ಬೀಟ್‌ ಪೊಲೀಸರನ್ನು ನೇಮಕ ಮಾಡಿದ್ದು, ಸರಗಳ್ಳತನ, ಅತ್ಯಾಚಾರ, ಕಳ್ಳತನ ತಡೆಗೆ ಎಚ್ಚರ ವಹಿಸುವಂತೆ ಸೂಚಿಸಿದ್ದೇನೆ ಎಂದರು. 

ನಂಬರ್‌ ಪ್ಲೇಟ್‌ ಮೇಲೆ ವಾಹನದ ನೋಂದಣಿ ಸಂಖ್ಯೆ ಬಿಟ್ಟು ಬೇರೆ ಯಾವುದೇ ರೀತಿಯ ಬರಹಗಳನ್ನು ಬರೆದುಕೊಂಡಿದ್ದರೆ, ಅವುಗಳನ್ನು ಕಿತ್ತುಹಾಕಿ ಕೇಸು ಮಾಡಬೇಕು. ವೀಲಿಂಗ್‌, ಹೆಲ್ಮೆಟ್‌ ಧರಿಸದೇ ಬೈಕ್‌ ಚಾಲನೆ, ಮದ್ಯ ಸೇವಿಸಿ ವಾಹನ ಚಾಲನೆ ಸೇರಿದಂತೆ ಟ್ರಾಫಿಕ್‌ ನಿಯಮಗಳನ್ನು ಪಾಲನೆ ಮಾಡದವರ ವಿರುದ್ಧ ಕೇಸು ದಾಖಲಿಸಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.

ಶೇ.40ರಷ್ಟು ರಸ್ತೆ ಅಪಘಾತಗಳು ವಾಹನ ಚಾಲನೆ ಮಾಡುವಾಗ ಮೊಬೈಲ್‌ ಬಳಸುವುದು  ಮತ್ತು ಸೀಟ್‌ಬೆಲ್ಟ್ ಧರಿಸದೇ ನಡೆಯುತ್ತಿದ್ದು, ಜನಸಾಮಾನ್ಯರೇ ಈ ಬಗ್ಗೆ ಜಾಗೃತಿ ವಹಿಸಬೇಕು ಎಂದು ಹೇಳಿದರು. 

ಸಿಸಿ ಕ್ಯಾಮೆರಾ ಅಳವಡಿಕೆ: ಬಿಬಿಎಂಪಿ ಮತ್ತು ಪೊಲೀಸ್‌ ಇಲಾಖೆ ಸಹಯೋಗದಲ್ಲಿ ತಲಾ 10 ಲಕ್ಷ ರೂ.ವೆಚ್ಚದಂತೆ ಎಷ್ಟು ಸಿಸಿ ಕ್ಯಾಮೆರಾ ಬರುತ್ತವೆಯೋ ಅಷ್ಟನ್ನು ಆಯಾ ವಾರ್ಡ್‌ಗಳಲ್ಲಿ ಅವಳಡಿಸಲು ಕ್ರಮಕೈಗೊಳ್ಳುವಂತೆ ಮೇಯರ್‌ ಸಂಪತ್‌ರಾಜ್‌ ಅವರಲ್ಲಿ ವಿನಂತಿಸಿದ್ದೇನೆ. ಎಲ್ಲಾ ವಾರ್ಡ್‌ಗಳ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವುದರಿಂದ ಅಪರಾಧ ಕೃತ್ಯಗಳ ತಡೆಗೆ ಅನುಕೂಲವಾಗಲಿದೆ. ಮುಂದಿನ ವಾರದಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. 

ಸಿಡಿಪಿ ಬದಲಾಗಬೇಕು: ಯಾವುದೇ ಹೊಸ ಬಡಾವಣೆ ನಿರ್ಮಾಣವಾಗಬೇಕಾದರೂ, ಪಾರ್ಕ್‌, ಆಟದ ಮೈದಾನ ಇರುವಂತೆ ಪಾರ್ಕಿಂಗ್‌ ವ್ಯವಸ್ಥೆ ಇರುಬೇಕಾದ್ದು ಕಡ್ಡಾಯ. ಇಲ್ಲಿಯವರೆಗೂ ಅಂತಹ ವ್ಯವಸ್ಥೆಯನ್ನೇ ಮಾಡಿಲ್ಲ. ಇನ್ನು ಮುಂದಾದರೂ ಪಾರ್ಕಿಂಗ್‌ ವ್ಯವಸ್ಥೆ ಇರುವಂತೆ ಮಾಡಲು ಸಿಡಿಪಿ (ಸಿಟಿ ಡೆವಲಪ್‌ಮೆಂಟ್‌ ಪ್ಲಾನ್‌)ಬದಲಾಯಿಸಬೇಕಿದೆ ಎಂದರು. 

ದ್ವಿಮುಖ ಸಂಚಾರ ವ್ಯವಸ್ಥೆ ಕಲ್ಪಿಸಿ: ಟೌನ್‌ಹಾಲ್‌-ಮಿನರ್ವ ವೃತ್ತ, ಕೆ.ಆರ್‌.ವೃತ್ತದಿಂದ ಸಿಟಿ ಸಿವಿಲ್‌ ಕೋರ್ಟ್‌, ವಿಠuಲ ಮಲ್ಯ ರಸ್ತೆಯಿಂದ ಹಡ್ಸನ್‌ ವೃತ್ತ ಹಾಗೂ ರಿಚ್‌ಮಂಡ್‌ ವೃತ್ತದಿಂದ ಅಶೋಕ ನಗರ ವೃತ್ತದ ವರೆಗಿನ ರಸ್ತೆಗಳು ಏಕಮುಖ ಸಂಚಾರ ವ್ಯವಸ್ಥೆ ಇದೆ. ಅದನ್ನು ದ್ವಿಮುಖ ಸಂಚಾರಯಾಗಿ ಪರಿವರ್ತಿಸಲು ಕ್ರಮಕೈಗೊಂಡರೆ, ಟ್ರಾಫಿಕ್‌ ಸಮಸ್ಯೆ ಕಡಿಮೆಯಾಗಲಿದೆ.

ಕೆಲವು ಸಿಗ್ನಲ್‌ಗ‌ಳಲ್ಲಿ ಅಳವಡಿಸಲಾಗಿರುವ ಟೈಮರ್‌ಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅದಕ್ಕಾಗಿ ಮುಖ್ಯವಾದ ಜಂಕ್ಷನ್‌ಗಳಲ್ಲಿ ಅತ್ಯಾಧುನಿಕ ಸೌರಶಕ್ತಿ ಸಿಗ್ನಲ್‌ ವ್ಯವಸ್ಥೆ ಮಾಡಬೇಕು ಎಂದು ಎಫ್ಕೆಸಿಸಿಐ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷ ಪ್ರಕಾಶ್‌ ಮಂಡೋತ್‌ ಮನವಿ ಮಾಡಿದರು. 

ಸಿಸಿ ಕ್ಯಾಮೆರಾಗೆ ದೇಣಿಗೆ: ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಜತೆಗೆ ಟ್ರಾಫಿಕ್‌ ಜಂಪ್‌ ಇತ್ಯಾದಿ ಸಮಸ್ಯೆಗಳ ನಿವಾರಣೆಗೆ ಪೊಲೀಸ್‌ ಇಲಾಖೆ ಸಹಕಾರದಲ್ಲಿ ಎಫ್ಕೆಸಿಸಿ ವತಿಯಿಂದ ಕೆ.ಜಿ.ರಸ್ತೆಯಲ್ಲಿ ಅಗತ್ಯ ಸಿಸಿ ಕ್ಯಾಮೆರಾ ಅಳವಡಿಸಲು ದೇಣಿಗೆ ನೀಡಲಾಗುವುದು ಎಂದು ಸಂಸ್ಥೆ ಅಧ್ಯಕ್ಷ ಕೆ.ರವಿ ತಿಳಿಸಿದರು.

ಟಾಪ್ ನ್ಯೂಸ್

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

4-udupi

Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

3

Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

4-udupi

Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.