ಶಶಿಕಲಾಗೆ ನಕಲಿ ಕಂಪೆನಿಗಳ ನಂಟು


Team Udayavani, Nov 13, 2017, 6:15 AM IST

shashikala.jpg

ಚೆನ್ನೈ: ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ವಿ.ಕೆ. ಶಶಿಕಲಾಗೆ ಶೆಲ್‌ ಕಂಪೆನಿಗಳ ನಂಟು ಇತ್ತೇ ಎಂಬ ಶಂಕೆ ವ್ಯಕ್ತವಾಗಿದೆ. ಐಟಿ ದಾಳಿ ನಡೆದ ಸಂದರ್ಭ ಜಯಾ ಟಿವಿ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ.) ವಿವೇಕ್‌ ಜಯರಾಮನ್‌ಗೆ ಸೇರಿದ 100 ಬ್ಯಾಂಕ್‌ ಖಾತೆಗಳನ್ನು ಗುರುತಿಸ ಲಾಗಿದೆ. ಮಾತ್ರವಲ್ಲ ನೋಟು ಅಪಮೌಲ್ಯದ ಬಳಿಕ ಬಹುಕೋಟಿ ರೂ. ಮೊತ್ತವನ್ನು ಅವುಗಳಲ್ಲಿ ಠೇವಣಿಯಾಗಿ ಇರಿಸಿದ್ದರ ಬಗ್ಗೆ ಅನುಮಾನ ಗಳೂ ವ್ಯಕ್ತವಾಗಿವೆ.

ವಿವೇಕ್‌ ಸದ್ಯ ಬೆಂಗಳೂರಿನ ಪರ ಪ್ಪನ ಅಗ್ರಹಾರದಲ್ಲಿ ಶಿಕ್ಷೆ ಅನುಭವಿ ಸುತ್ತಿರುವ ವಿ.ಕೆ. ಶಶಿಕಲಾರ ಸೋದರ ಸಂಬಂಧಿ. ಆದಾಯ ತೆರಿಗೆ ಅಧಿಕಾರಿಗಳು ಈ ಬ್ಯಾಂಕ್‌ ಖಾತೆ ಗಳನ್ನು ಜಪ್ತಿ ಮಾಡಿಕೊಂಡಿದ್ದು, ಶುಕ್ರವಾರ ನಡೆದಿದ್ದ ದಾಳಿಯಲ್ಲಿ 6 ಕೋಟಿ ರೂ. ನಗದು, 8.5 ಕೆಜಿ ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಜತೆಗೆ ಕಾಲೇಜೊಂದರ ಹಾಸ್ಟೆಲ್‌ ಕಪಾಟಿನಿಂದ ಬಹುಕೋಟಿ ರೂ. ಮೌಲ್ಯದ ವಜ್ರಗಳನ್ನೂ ವಶಪಡಿಸಿಕೊಳ್ಳಲಾಗಿತ್ತು.

ಜಯಾ ಟಿವಿ ಎಂ.ಡಿ. ವಿವೇಕ್‌ ಜಯರಾಮನ್‌ 20ಕ್ಕೂ ಅಧಿಕ ಕಂಪೆನಿಗಳ ಹೆಸರಲ್ಲಿ ಬ್ಯಾಂಕ್‌ ಖಾತೆ ಹೊಂದಿರುವುದು ದಾಖಲೆಗಳ ಪರಿಶೀಲನೆ ವೇಳೆ ಗೊತ್ತಾಗಿದೆ. ನೋಟು ಅಪಮೌಲ್ಯದ ಬಳಿಕ ಕೋಟಿಗಟ್ಟಲೆ ರೂ. ಮೊತ್ತವನ್ನು ಅವುಗಳಲ್ಲಿ ತೊಡಗಿಸಲಾಗಿತ್ತು. ದಾಳಿ ಸಂದರ್ಭ ಖಾತೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅವರ ಸಹೋದರಿ ಕೃಷ್ಣ ಪ್ರಿಯಾ ಮತ್ತು ಆಡಿಟರ್‌ ನಿವಾಸಕ್ಕೆ ದಾಳಿ ನಡೆಸಿದ ವೇಳೆ ಇನ್ನೂ ಹಲವು ಕಾಗದ ಪತ್ರ ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳನ್ನು ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ ಆದಾಯ ತೆರಿಗೆ ಇಲಾಖೆ ಹಿರಿಯ ಅಧಿಕಾರಿಗಳು. ಈ ಖಾತೆಯಲ್ಲಿ ತೊಡಗಿಸಲಾಗಿರುವ ಮೊತ್ತದಿಂದ ಕೋಟಿಗಟ್ಟಲೆ ರೂ. ಮೌಲ್ಯದ ಸ್ಥಿರ ಮತ್ತು ಚರ ಆಸ್ತಿ ಖರೀದಿಗೆ ವಿನಿಯೋಗಿಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ದಾಳಿ ಮುಕ್ತಾಯ: ಕೊಡನಾಡ್‌ ಎಸ್ಟೇಟ್‌, ಇತರ ಸ್ಥಳಗಳಲ್ಲಿ ರವಿ ವಾರವೂ ಶೋಧಕಾರ್ಯ ಮುಂದು ವರಿದಿತ್ತು. ಒಟ್ಟಾರೆ ಬೆಳವಣಿಗೆ ಬಗ್ಗೆ ಚೆನ್ನೈಯಲ್ಲಿ ಪ್ರತಿಕ್ರಿಯೆ ನೀಡಿದ ಆದಾಯ ತೆರಿಗೆ ಅಧಿಕಾರಿಗಳು, ಇಲಾಖೆ ದಾಳಿ ಬಹುತೇಕ ಪೂರ್ಣ ಗೊಂಡಿದೆ ಎಂದು ತಿಳಿಸಿದೆ. ಇನ್ನೇನಿದ್ದರೂ ಹೇಳಿಕೆ ದಾಖಲಿಸುವುದು, ಅದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವ ಪ್ರಕ್ರಿಯೆ ಮಾತ್ರ ಉಳಿದಿದೆ ಎಂದಿದ್ದಾರೆ.

ವಿ.ಕೆ. ಶಶಿಕಲಾ ಮತ್ತು ಇತರರ 
ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದರಲ್ಲಿ ಯಾವ ಸಂಚೂ ಇಲ್ಲ. ಸೂಕ್ತ ಮಾಹಿತಿ ಮತ್ತು ದಾಖಲೆಗಳ ಆಧಾರದಲ್ಲಿಯೇ ಕ್ರಮ ಕೈಗೊಳ್ಳಲಾಗಿದೆ.

-ಪೊನ್‌ ರಾಧಾಕೃಷ್ಣನ್‌, ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ

ಟಾಪ್ ನ್ಯೂಸ್

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.