ಕನಕನಿಗೆ ಅಪಚಾರ:ಹೋರಾಡುವವರ ಜತೆ ನಾನೂ ಭಾಗಿ


Team Udayavani, Nov 13, 2017, 11:37 AM IST

121117Astro08.jpg

ಉಡುಪಿ: ಪೂರ್ವಾಭಿಮುಖನಾಗಿದ್ದ ಶ್ರೀಕೃಷ್ಣ ಕನಕನ ಭಕ್ತಿ ನೋಡಿ ಪಶ್ಚಿಮಾಭಿಮುಖನಾಗಿರುವುದು ಸತ್ಯ. ಆದರೆ ಆ ಬಗ್ಗೆ ಕೆಲವರು ಅಪ ಚಾರ ಎಸಗು ತ್ತಾರೆ. ಅವರ ವಿರುದ್ಧ ಹೋರಾಟ ನಡೆಸು ವವರ ಜತೆಗೆ ನಾನು ಭಾಗಿ ಯಾಗಲು ಸಿದ್ಧನಿದ್ದೇನೆ ಎಂದು ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.

ಹಾಲುಮತ ಮಹಾಸಭಾದ ಆಶ್ರಯದಲ್ಲಿ ರವಿವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಕನಕ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀಕೃಷ್ಣ ಮಠದ ಹೊರಗಿರುವ ಕಿಂಡಿಯ ಮೂಲಕ ಕನಕ ಶ್ರೀಕೃಷ್ಣನನ್ನು ನೋಡಿದರೆ, ಒಳ ಗಿರೋದು ಕೃಷ್ಣ ಕನಕನನ್ನು ನೋಡಿ ದರ್ಶನ ಮಾಡಿದ ಕಿಂಡಿ. ಕೃಷ್ಣ ಪಶ್ಚಿಮಕ್ಕೆ ತಿರುಗಿ ದ್ದಾನೆ ಎನ್ನುವುದಕ್ಕೆ ವಾದಿರಾಜರು ಮತ್ತು ವ್ಯಾಸರಾಜರು ಸಾಕ್ಷಿ. ಅವರ ಸ್ತೋತ್ರದಲ್ಲಿಯೂ ಇದರ ಉಲ್ಲೇಖವಿದೆ. ಮಠದ ಒಳಗಿರುವ ಕನಕ ಮೂರ್ತಿಗೆ ಪ್ರತಿದಿನ ಪೂಜೆ ನಡೆಯುತ್ತದೆ. ಶ್ರೀಕೃಷ್ಣ ಯಾವತ್ತಿಗೂ ಹಿಂದುಳಿದ ಭಕ್ತರ ಪರ ವಿರು ತ್ತಾನೆ ಎಂದರು.

ಏಕತೆ ಸಂದೇಶ ನೀಡಿದ ಕನಕದಾಸರು
ಕನಕರು ಬಸವಣ್ಣನಂತೆ ಕ್ರಾಂತಿಕಾರಿಯಾಗಿದ್ದರು. ಹಿಂದುಳಿದ ವರ್ಗದಲ್ಲಿ  ಅವತರಿಸಿದ ಕನಕ ದಾಸರು ಇಡೀ ರಾಜ್ಯಕ್ಕೆ ಏಕತಾ ಸಂದೇಶ ನೀಡಿ ದವರು. ಶ್ರೀಕೃಷ್ಣನನ್ನು ತಿರುಗಿಸುವ ಮೂಲಕ ಸಮಾಜದ ಕಣ್ಣು ತೆರೆಸಿದ್ದಾರೆ. ಶ್ರೀಕೃಷ್ಣ ಪೂರ್ವ ದಿಂದ ಪಶ್ಚಿಮಕ್ಕೆ ತಿರುಗಿದ್ದಾನೆ. ಯುವಜನತೆ ಪಾಶ್ಚಾತ್ಯದಿಂದ ನಮ್ಮ ಸಂಸ್ಕೃತಿಯತ್ತ  ತಿರುಗಬೇಕು ಎಂದರು.

ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಮಾತ ನಾಡಿ, ಯಾವ ಸಮುದಾಯ ತಿರಸ್ಕಾರಕ್ಕೆ ಒಳ ಗಾಗಿ ದೆಯೋ ಇಂದು ಜಾಗೃತವಾಗುತ್ತಿದೆ. ತುಳಿತ ಕ್ಕೊಳಗಾದವರು ದೂರವಾಗುತ್ತಾರೆ ಎಂಬುದನ್ನು ಎಲ್ಲರು ತಿಳಿಯಬೇಕು. ಹಾಲುಮತ ಬಹುದೊಡ್ಡ ಪರಂಪರೆ, ಇತಿಹಾಸ ಹೊಂದಿದೆ. ಆದರೆ ಅದು ಕೈಚೆಲ್ಲಿ ಹೋಗಿದೆ. ಸಮುದಾಯ ರಾಜಕೀಯ, ಸಾಮಾಜಿಕವಾಗಿ ಪ್ರಗತಿ ಕಾಣಬೇಕು. ಆಗ ಮಾತ್ರ ಜಾಗೃತಿಯಾಗಲು ಸಾಧ್ಯ ಎಂದು ಹೇಳಿದರು.

ಹಾಲುಮತ ಮಹಾಸಭಾ ನನ್ನನ್ನು ಉಡುಪಿಗೆ ಬರುವಂತೆ ಮಾಡಿದ್ದು, ಉಡುಪಿ-ಕಾಗಿನೆಲೆಗೆ ಸೇತುವೆಯಾಗಿದೆ. ಪೇಜಾವರ ಶ್ರೀಗಳು ಕನಕನ ವಿಚಾರದ ಕುರಿತಂತೆ ಎಲ್ಲ ಅನುಮಾನಗಳನ್ನು ದೂರ ಮಾಡಿದ್ದಾರೆ ಎಂದರು.

ಬುದ್ಧಿಜೀವಿಗಳಿಂದ ಅಪಚಾರ
ಕೆಲವು ಬುದ್ಧಿಜೀವಿಗಳು ಪ್ರಚಾರಕ್ಕಾಗಿ ಕನಕನಭಕ್ತಿಗೆ ಕೃಷ್ಣ ತಿರುಗಿ ನಿಂತಿಲ್ಲ ಎನ್ನುತ್ತಾರೆ. ಆದರೆ ಕನಕನ ಕಿಂಡಿ ಕನಕನ ಪವಾಡ ಇದೆಲ್ಲ ಇತಿಹಾಸ. ಯಾರೂ ಇದನ್ನು ಬದಲಿಸಲು ಸಾಧ್ಯವಿಲ್ಲ. ಕನಕನ ಕಿಂಡಿಯಿಂದ ಉಡುಪಿಗೂ ಕೀರ್ತಿ ಬಂದಿದೆ ಎಂದು ಕಾಗಿನೆಲೆ ಸ್ವಾಮೀಜಿ ಹೇಳಿದರು.

ಶ್ರೀ ಪೇಜಾವರ ಮಠದ ಕಿರಿಯ ಯತಿ, ಸುವರ್ಣಮುಖೀ ಸಂಸ್ಕೃತಧಾಮದ ಸಂಸ್ಥಾಪಕ ಆಚಾರ್ಯ ಡಾ| ಅಮೆರಿಕ ನಾಗರಾಜ್‌, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ, ಮೈಸೂರು ಶಾಸಕ ಎಂ.ಕೆ.  ಸೋಮಶೇಖರ, ವಿಶ್ವನಾಥ್‌, ರಾಜಶೇಖರ ಇಟ್ನಾಳ, ಗಾಜಿಗೌಡ್ರು, ಡಾ| ನಾಗಾಲಕ್ಷ್ಮೀ, ಪಳನಿಸ್ವಾಮಿ, ಪುಷೋತ್ತಮ ಮರಿಗೌಡ, ರಾಮಪ್ಪ, ಆರ್‌. ಶಂಕರ್‌ ಉಪಸ್ಥಿತರಿದ್ದರು. ಮಾಲೇಗೌಡ ಪ್ರಸ್ತಾವನೆಗೈದರು. ರುದ್ರಣ್ಣ ಗುಳಗುಳಿ ಸ್ವಾಗತಿಸಿದರು.

ಕನಕ-ಉಡುಪಿಗೆ ಅವಿನಾಭಾವ ಸಂಬಂಧವಿದೆ. ಕಾಗಿನೆಲೆ ಮಠದ ಶಾಖೆಯನ್ನು ಉಡುಪಿಯಲ್ಲಿ ಸ್ಥಾಪಿಸಲು ಎಲ್ಲ ರೀತಿಯ ಸಹಕಾರ ನೀಡುತ್ತೇನೆ. ಈ ವಿಚಾರದ ಕುರಿತಾಗಿ ಮುಖ್ಯಮಂತ್ರಿಗಳ ಜತೆಗೂ ಚರ್ಚಿಸುತ್ತೇನೆ. 50 ವರ್ಷದ ಹಿಂದಿನ ಕನಕ ಗುಡಿಯ ಪುನರ್‌ ನಿರ್ಮಾಣಕ್ಕೂ ಅನುದಾನ ತರಲು ಪ್ರಯತ್ನಿಸುತ್ತೇನೆ.
– ಪ್ರಮೋದ್‌ ಮಧ್ವರಾಜ್‌
ಜಿಲ್ಲಾ  ಉಸ್ತುವಾರಿ ಸಚಿವ

ನಿಮ್ಮದು ಗಂಗಾಮತ-ನಮ್ಮದು ಹಾಲುಮತ
ಹಾಲುಮತ ಸಮುದಾಯದ ವತಿಯಿಂದ ಕಾಗಿನೆಲೆ ಶ್ರೀಗಳು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರನ್ನು ಸಮ್ಮಾನಿಸಿ, ನಿಮ್ಮದು ಗಂಗಾಮತ ನಮ್ಮದು ಹಾಲುಮತ. ಯಾವುದೇ ಪ್ರಾಣಿಯೂ ಜನ್ಮತಾಳಿದ ಕೂಡಲೇ ಬೇಕಾ ಗಿರುವುದು ಹಾಲು. ಅದು ಬೆಳೆಯುವಾಗ ಬೇಕಾಗಿರುವುದು ನೀರು. ಹೀಗಾಗಿ ಹಾಲುಮತ-ಗಂಗಾಮತ ಕೂಡಿ ಜಗತ್ತು ಆಳಬಹುದು ಎಂದರು.

 ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಕನಕನ ಕಿಂಡಿಯ ಮೂಲಕವೇ ಶ್ರೀಕೃಷ್ಣನ ದರ್ಶನ ಪಡೆದರು. ಆದರೆ ಶ್ರೀಕೃಷ್ಣ ಮಠದೊಳಗೆ ಪ್ರವೇಶಿಸಲಿಲ್ಲ. ಸಾವಿರಾರು ಪೂರ್ಣಕುಂಭ, ಚೆಂಡೆ, ಸ್ತಬ್ಧಚಿತ್ರಗಳೊಂದಿಗೆ ವೈಭವದ ಮೆರವಣಿಗೆಯಲ್ಲಿ ನಗರದ ಜೋಡುಕಟ್ಟೆಯಿಂದ ಸರ್ವಿಸ್‌ ಬಸ್‌ ನಿಲ್ದಾಣ ಮಾರ್ಗವಾಗಿ ಕಲ್ಸಂಕ ಮೂಲಕ ರಥಬೀದಿಗೆ ಆಗಮಿಸಿ ದರು. ಮಠದ ದಿವಾನ ರಘುರಾಮಾಚಾರ್ಯ ಹೂ ಮಾಲೆ ಹಾಕಿ ಸ್ವಾಗತಿಸಿದರು. 

 ಪೇಜಾವರ ಶ್ರೀಗಳಿಗೆ ಆಹ್ವಾನ
ಪರ್ಯಾಯ ಪೇಜಾವರ ಶ್ರೀಗಳಿಗೆ ಕಾಗಿನೆಲೆ ಶ್ರೀಗಳು ಕರಿಯ ಕಂಬಳಿಯನ್ನು ಹಾಕಿ ಗೌರವಿಸಿ, ಆರೋಗ್ಯಯುತವಾಗಿರುವಂತೆ ಹಾರೈಸಿದರು. 2018 ಫೆಬ್ರವರಿಯಲ್ಲಿ ನಡೆಯುವ ಕಾಗಿನೆಲೆ ಗುರುಪೀಠದ ರಜತಮಹೋತ್ಸವಕ್ಕೆ ಪೇಜಾವರ ಶ್ರೀಗಳಿಗೆ ಆಹ್ವಾನ ನೀಡಿದರು. ಕರಿಯ ಕಂಬಳಿ ನಮ್ಮ ಸಂಸ್ಕೃತಿಯ ಪ್ರತೀಕ. ಕನಕದಾಸರು ಕರಿಯ ಕಂಬಳಿ ಹೊದ್ದು  ಭಕ್ತಿ ಸಾಗರವನ್ನೇ ಹರಿಸಿದ್ದಾರೆ ಎಂದರು.

ಟಾಪ್ ನ್ಯೂಸ್

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.