ನೇಪಾಲ ಸಾಧನೆಯನ್ನು ಪ್ರಶಂಸಿಸಿದ ದ್ರಾವಿಡ್‌


Team Udayavani, Nov 14, 2017, 6:35 AM IST

Rahul-Dravid-13.jpg

ಕೌಲಾಲಂಪುರ: ಅಂಡರ್‌-19 ಏಶ್ಯ ಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ರವಿವಾರ ಭಾರತ ತಂಡ ನೇಪಾಲದ ಕೈಯಲ್ಲಿ ಆಘಾತಕಾರಿ ಸೋಲನುಭವಿಸಿದ್ದು ದೊಡ್ಡ ಸುದ್ದಿಯಾಗಿದೆ. ನೇಪಾಲ ಪಾಲಿಗೆ ಇದು ಕ್ರಿಕೆಟ್‌ ಇತಿಹಾಸದ ಅತೀ ದೊಡ್ಡ ಹಾಗೂ ಸ್ಮರಣೀಯ ವಿಜಯ ಎಂಬುದರಲ್ಲಿ ಎರಡು ಮಾತಿಲ್ಲ.

ಈ ಸಂದರ್ಭದಲ್ಲಿ ಭಾರತದ ಕಿರಿಯರ ತಂಡದ ಕೋಚ್‌ ರಾಹುಲ್‌ ದ್ರಾವಿಡ್‌ ವಿಜೇತ ತಂಡವನ್ನು ಅಭಿನಂದಿಸಿ ನಿಜವಾದ ಕ್ರೀಡಾಸ್ಫೂರ್ತಿ ಮೆರೆದಿದ್ದಾರೆ. ನೇಪಾಲ ತಂಡದ ಕೋಚ್‌ ಬಿನೋದ್‌ ಕುಮಾರ್‌ ಇದನ್ನು ಮಾಧ್ಯಮದವರಲ್ಲಿ ಬಹಳ ಖುಷಿಯಿಂದ ಹೇಳಿಕೊಂಡಿದ್ದಾರೆ.

“ರಾಹುಲ್‌ ದ್ರಾವಿಡ್‌ ಅವರದು ನಿಜಕ್ಕೂ ವಿನಮ್ರ ವ್ಯಕ್ತಿತ್ವ. ಅವರು ಗೆಲುವಿನ ಬಳಿಕ ನಮ್ಮ ತಂಡದ ಸಾಧನೆಯನ್ನು ಕೊಂಡಾಡಿ ಅಭಿನಂದನೆ ಸಲ್ಲಿಸಿದರು. ಈ ಗೆಲುವಿಗೆ ನೀವು ಬೇರೆಲ್ಲರಿಗಿಂತಲೂ ಹೆಚ್ಚು ಅರ್ಹರಾಗಿದ್ದೀರಿ, ಈ ಕೂಟದಲ್ಲಿ ಉಳಿದವರಿಗಿಂತ ಉತ್ತಮ ಪ್ರದರ್ಶನ ನೀಡಿದಿರಿ ಎಂದು ದ್ರಾವಿಡ್‌ ನಮ್ಮ ಗೆಲುವನ್ನು ಪ್ರಶಂಸಿಸಿದರು. ಇದರಿಂದ ನಮಗೆ ನಿಜಕ್ಕೂ ರೋಮಾಂಚನವಾಗಿದೆ. ಭಾರತ ಒಂದು ಬಲಾಡ್ಯ ತಂಡ. ಈವರೆಗೆ ನಾವು ಅವರೆದುರು ಯಾವುದೇ ಪಂದ್ಯದಲ್ಲಿ ಗೆದ್ದದ್ದಿಲ್ಲ. ಹೀಗಾಗಿ ನಮ್ಮ ಪಾಲಿಗೆ ಇದು ದೊಡ್ಡ ಗೆಲುವು…’ ಎಂದು ಬಿನೋದ್‌ ಕುಮಾರ್‌ ಹೇಳಿದರು.

ರವಿವಾರದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ನೇಪಾಲ 8 ವಿಕೆಟಿಗೆ ಕೇವಲ 185 ರನ್‌ ಗಳಿಸಿದರೆ, ಭಾರತ 48.1 ಓವರ್‌ಗಳಲ್ಲಿ 166ಕ್ಕೆ ಆಲೌಟ್‌ ಆಗಿತ್ತು.

ಮಂಗಳವಾರ ನಡೆಯುವ “ಎ’ ವಿಭಾಗದ ಕೊನೆಯ ಲೀಗ್‌ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು ಎದುರಿಸಲಿದೆ. ಸೆಮಿಫೈನಲ್‌ ಪ್ರವೇಶಿಸಬೇಕಾದರೆ ಭಾರತಕ್ಕೆ ಗೆಲುವು ಅನಿವಾರ್ಯ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.