ಬೆಳಗಾವಿಯಲ್ಲಿಂದು ಜೆಡಿಎಸ್ ಸಮಾವೇಶ
Team Udayavani, Nov 14, 2017, 6:15 AM IST
ಬೆಳಗಾವಿ: ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಗುರಿಯೊಂದಿಗೆ ಮೈಸೂರಿನಲ್ಲಿ ಕರ್ನಾಟಕ ವಿಕಾಸ ಯಾತ್ರೆ ಮತ್ತು ಬೃಹತ್ ಸಮಾವೇಶ ನಡೆಸಿದ್ದ ಜೆಡಿಎಸ್ ಮಂಗಳವಾರ ಬೆಳಗಾವಿಯಲ್ಲಿ ಬೃಹತ್ ರೈತ ಸಮಾವೇಶ ಹಮ್ಮಿಕೊಂಡಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ಕೇಂದ್ರದ ಎನ್ಡಿಎ ಸರ್ಕಾರದಲ್ಲಿ ಸಚಿವರಾಗಿದ್ದ ರೈತ ನಾಯಕ ಬಾಬಾಗೌಡ ಪಾಟೀಲ್ ಪಾಲ್ಗೊಂಡು ತಮ್ಮ ಬೆಂಬಲವನ್ನು ಜೆಡಿಎಸ್ಗೆ ನೀಡಲಿದ್ದಾರೆ.
ಜತೆಗೆ ಬಾಬಾಗೌಡ ಪಾಟೀಲ್ ಅವರ ಪುತ್ರ ಪ್ರಕಾಶ್ ಗೌಡ ಪಾಟೀಲ್ ಇದೇ ವೇಳೆ ಜೆಡಿಎಸ್ ಸೇರಲಿದ್ದಾರೆ. ಅಲ್ಲದೆ, ರಾಯಚೂರಿನಿಂದ ಬೈಕ್ ರ್ಯಾಲಿ ಮೂಲಕ ಹೊರಟಿರುವ ಕಾಂಗ್ರೆಸ್ನ ಉಚ್ಛಾಟಿತ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಈ ಸಮಾವೇಶದಲ್ಲಿ ಪಾಲ್ಗೊಂಡು ಅಧಿಕೃತವಾಗಿ ಜೆಡಿಎಸ್ ಜತೆ ಗುರುತಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ
ICSE: ರಾಜ್ಯದ ವಿದ್ಯಾರ್ಥಿಗಳಿಗೆ ಶೇ. 99 ಮೀರಿದ ಫಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ
Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ
ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ
Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ