ಮತ್ತೆ ಕಿರುತೆರೆಗೆ ಬಂದ ರವಿಚಂದ್ರನ್
Team Udayavani, Nov 14, 2017, 11:41 AM IST
ಕಲರ್ ಕನ್ನಡ ಚಾನಲ್ನಲ್ಲಿ “ಡ್ಯಾನ್ಸಿಂಗ್ ಸ್ಟಾರ್’ ಕಾರ್ಯಕ್ರಮದ ತೀರ್ಪುಗಾರರಾಗಿದ್ದ ರವಿಚಂದ್ರನ್, ಈಗ ಮತ್ತೆ ತೀರ್ಪುಗಾರರಾಗಿ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ಅವರು ಉದಯ ಟಿವಿಯಲ್ಲಿ ನವೆಂಬರ್ 18ರಿಂದ ಪ್ರಾರಂಭವಾಗಲಿರುವ “ಉದಯ ಸಿಂಗರ್ ಜ್ಯೂನಿಯರ್’ ಕಾರ್ಯಕ್ರಮಕ್ಕೆ ತೀರ್ಪುಗಾರರಾಗಿದ್ದಾರೆ.
ಹೌದು, ಉದಯ ಟಿವಿಯು “ಉದಯ ಸಿಂಗರ್ ಜ್ಯೂನಿಯರ್’ ಎಂಬ ಗಾಯನ ಸ್ಪರ್ಧೆಯನ್ನು ಆಯೋಜಿಸಿದ್ದು, ಈ ಕಾರ್ಯಕ್ರಮವು ನವೆಂಬರ್ 18ರಿಂದ ಶನಿವಾರ ಮತ್ತು ಭಾನುವಾರ ರಾತ್ರಿ ಪ್ರಸಾರವಾಗಲಿದೆ. 16 ಮಕ್ಕಳ ಈ ಸ್ಪರ್ಧೆಯಲ್ಲಿ ರವಿಚಂದ್ರನ್ ಮತ್ತು ದಕ್ಷಿಣ ಭಾರತದ ಜನಪ್ರಿಯ ಗಾಯಕ ಮನೋ ಅವರು ತೀರ್ಪುಗಾರರಾಗಿದ್ದು, ಹಿನ್ನೆಲೆ ಗಾಯಕಿ ಸಂಗೀತಾ ರವೀಂದ್ರನಾಥ್ ಅವರು ನಿರೂಪಕಿಯಾಗಿ ನಿರ್ವಹಿಸಲಿದ್ದಾರೆ.
ಈ ಸ್ಪರ್ಧೆಯಲ್ಲಿ ಚಲನಚಿತ್ರಗಳ ಹಾಡುಗಳೊಂದಿಗೆ ಶಾಸ್ತ್ರೀಯ ಸಂಗೀತ, ಜಾನಪದ, ಭಕ್ತಿಗೀತೆ, ದೇಶಭಕ್ತಿ ಗೀತೆ ಮತ್ತು ಇಂಡೋವೆಸ್ಟರ್ನ್ ಹಾಡುಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಪ್ರತಿಯೊಂದು ಸಂಚಿಕೆಯಲ್ಲಿಯೂ ವಿವಿಧ ರೀತಿಯ ವಿಷಯಗಳನ್ನು ಇಟ್ಟುಕೊಂಡು ಮಕ್ಕಳಿಂದ ಹಾಡಿಸಲಾಗುತ್ತಿದೆ. ಪ್ರತಿ ವಾರವೂ ಒಂದು ಎಲಿಮಿನೇಶನ್ ರೌಂಡ್ ಹೊಂದಿದ್ದು, ಕೊನೆಗೆ ಗ್ರಾಂಡ್ ಫಿನಾಲೆ ನಡೆಯಲಿದೆ.
ಈ ಕಾರ್ಯಕ್ರಮವು ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
MUST WATCH
ಹೊಸ ಸೇರ್ಪಡೆ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್