ಬೆಂಗಳೂರು : ನಸುಕಿನ ವೇಳೆ ವ್ಯಕ್ತಿಯ ಬರ್ಬರ ಹತ್ಯೆ
Team Udayavani, Nov 14, 2017, 11:56 AM IST
ಬೆಂಗಳೂರು: ನಗರದ ಮಹಾಲಕ್ಷ್ಮೀ ಲೇಔಟ್ನಲ್ಲಿ ಮಂಗಳವಾರ ನಸುಕಿನ ವೇಳೆ ಅಪರಿಚಿತ ವ್ಯಕ್ತಿಯೋರ್ವರನ್ನು ಮಾರಕಾಯುಧಗಳಿಂದ ಕೊಚ್ಚಿ, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆಗೈಯಲಾಗಿದೆ.
ಮೆಟ್ರೋ ನಿಲ್ದಾಣದ ಬಳಿಯೇ ಹತ್ಯೆ ನಡೆದಿದ್ದು, ಮಣಪ್ಪುರಂ ಕಗೋಲ್ಡ್ ಲೋನ್ ಸೆಂಟರ್ ಬಳಿಯಿಂದ ಸುಮಾರು 35 ವರ್ಷ ಪ್ರಾಯದ ವ್ಯಕ್ತಿಯನ್ನು ಅಟ್ಟಾಡಿಸಿಕೊಂಡು ಬಂದು ಹತ್ಯೆಗೈಯಲಾಗಿದೆ.
ಈ ಪ್ರದೇಶದಲ್ಲಿ ಸಿಸಿಟಿವಿಗಳು ಇಲ್ಲದ ಕಾರಣ ವ್ಯಕ್ತಿಯ ಗುರುತು ಪತ್ತೆ ಹಚ್ಚುವುದು ಕಷ್ಟವಾಗಿದೆ.
ಮಹಾಲಕ್ಷ್ಮೀ ಲೇಔಟ್ ಪೊಲೀಸರು ತುಂಡಾದ ಕೈ ಸಮೇತ ಶವವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.