ಜೋಪಾನ ಕಚ್ಚತ್ತೆ! ಕೆಂಪಿರ್ವೆಯಾಗಿ ಬಂದ್ರು ದತ್ತಣ್ಣ


Team Udayavani, Nov 16, 2017, 3:11 PM IST

Kempirve.jpg

ಒಬ್ಬ ಸಾಮಾನ್ಯ ಮನುಷ್ಯ ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಲ್ಲ …ನಾಳೆ ಬಿಡುಗಡೆಯಾಗುತ್ತಿರುವ ದತ್ತಣ್ಣ ಅಭಿನಯದ “ಕೆಂಪಿರ್ವೆ’ ಚಿತ್ರದ ಸಾರಾಂಶವೇನು ಎಂದು ಕೇಳಿದರೆ, ನಿರ್ದೇಶಕ ವೆಂಕಟ್‌ ಈ ರೀತಿಯಾಗಿ ಉತ್ತರಿಸುತ್ತಾರೆ. ಅದೇ ಕಾರಣಕ್ಕೆ ಈ ಚಿತ್ರಕ್ಕೆ ದತ್ತಣ್ಣ ಎಂಬ ಸಾಮಾನ್ಯ ಜನರ ಪ್ರತಿನಿಧಿಯನ್ನೇ ಅವರು ಹೀರೋ ಮಾಡಿದ್ದಾರೆ. ಅವರ ಮೂಲಕ ಒಂದು ವಿಭಿನ್ನ ಕಥೆ ಹೇಳುವುದಕ್ಕೆ ಹೊರಟಿದ್ದಾರೆ.

ಇಲ್ಲಿ ದತ್ತಣ್ಣ ಅವರು ವೆಂಕಟೇಶಮೂರ್ತಿ ಎಂಬ ಹತಾಶ ವೃದ್ಧರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಹೋರಾಟವೇ ಈ ಚಿತ್ರದ ಕಥೆಯಂತೆ. ಇಷ್ಟಕ್ಕೂ ದತ್ತಣ್ಣ ಯಾಕೆ ಮತ್ತು ಯಾರ ವಿರುದ್ಧ ಹೋರಾಡುತ್ತಾರೆ ಎಂಬ ಪ್ರಶ್ನೆ ಬರುವುದು ಸಹಜ. ಈ ಕುರಿತು ಹೇಳುವ ನಿರ್ದೇಶಕರು, ಒಂದು ರಹಸ್ಯವನ್ನು ಬಿಟ್ಟುಕೊಡುತ್ತಾರೆ. 

“ನನಗೆ ಗೊತ್ತಿರುವಂತೆ ಯಾವುದೇ ಚಿತ್ರದಲ್ಲೂ ಈ ವಿಷಯದ ಬಗ್ಗೆ ಚರ್ಚೆಯಾಗಿಲ್ಲ. ನಮ್ಮ ದೇಶದಲ್ಲಿ ಇಂಟಲಿಜೆನ್ಸ್‌ ಫೈನಾನ್ಸ್‌ ಯೂನಿಟ್‌ ಅಂತಿದೆ. ಭಯೋತ್ಪಾದಕರು ಶಸ್ತ್ರಗಳನ್ನು ಹಿಡಿದು ಯುದ್ಧ ಮಾಡುತ್ತಾರೆ. ಆದರೆ, ಕೆಲವರು ಸದ್ದು ಮಾಡದೆಯೇ ಎಕಾನಮಿ ವಾರ್‌ ಮಾಡುತ್ತಾರೆ. ಅರ್ಥ ವ್ಯವಸ್ಥೆಯನ್ನೇ ಬುಡಮೇಲು ಮಾಡುವವರ ವಿರುದ್ಧ ಈ ಇಂಟಲಿಜೆನ್ಸ್‌ ಫೈನಾನ್ಸ್‌ ಯೂನಿಟ್‌ ಕೆಲಸ ಮಾಡುತ್ತದೆ. ಈ ಯೂನಿಟ್‌ ಕುರಿತು ಚಿತ್ರದಲ್ಲಿ ಬೆಳಕು ಚೆಲ್ಲುವ ಪ್ರಯತ್ನವನ್ನು ಮಾಡಿದ್ದೇವೆ’ ಎನ್ನುತ್ತಾರೆ ವೆಂಕಟ್‌.

ಹಿರಿಯ ಗೀತರಚನೆಕಾರ ಮತ್ತು ನಿರ್ದೇಶಕರಾದ ಸಿ.ವಿ. ಶಿವಶಂಕರ್‌ ಮಗನಾದ ವೆಂಕಟ್‌, ಇದಕ್ಕೂ ಮುನ್ನ “ಎ ಡೇ ಇನ್‌ ದಿ ಸಿಟಿ’ ಮತ್ತು “ಬಬ್ಲೂಷ’ ಎಂಬ ಎರಡು ಚಿತ್ರಗಳನ್ನು ನಿರ್ದೇಶಿಸಿದ್ದರು. ಇದು ಅವರ ಮೂರನೆಯ ಚಿತ್ರ. ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆಯನ್ನೂ ಅವರೇ ರಚಿಸಿದ್ದಾರೆ. ಈ ಚಿತ್ರದಲ್ಲಿ ದತ್ತಣ್ಣ ಅಲ್ಲದೆ ಸಯ್ನಾಜಿ ಶಿಂಧೆ, ಉಮೇಶ್‌ ಬಣಕಾರ್‌, ಶ್ರೇಯ, ರಾಜ್‌ ಬಹದ್ದೂರ್‌, ರೂಪ ಹೆಗ್ಡೆ ಸೇರಿದಂತೆ ಹಲವರು ನಟಿಸಿದ್ದಾರೆ. ಕಿಶನ್‌ ಸಂಗೀತವಿರುವ ಈ ಚಿತ್ರವು ಅಮೃತ ಫಿಲ್ಮ್ ಸೆಂಟರ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿದೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.