ಅಮೇರಿಕಾದಲ್ಲಿ ಮಾತು ಕೊಟ್ಟು, ಬೆಂಗಳೂರಲ್ಲಿ ಈಡೇರಿಸಿದ್ರು


Team Udayavani, Nov 17, 2017, 6:00 AM IST

AMERICA.jpg

ಕಳೆದ ವರ್ಷ ಅಮೇರಿಕಾದಲ್ಲಿ ನಡೆದ ಅಕ್ಕ ಸಮ್ಮೇಳನಕ್ಕೆ ಹೋದ ಸಂದರ್ಭದಲ್ಲೇ ನೃತ್ಯ ನಿರ್ದೇಶಕ ಇಮ್ರಾನ್‌ ಸರ್ದಾರಿಯಾ, ತಾವು ನಿರ್ದೇಶಿಸುತ್ತಿರುವ ಹೊಸ ಚಿತ್ರದ ಬಗ್ಗೆ ಅಂಬರೀಶ್‌ಗೆ ಹೇಳಿದ್ದರಂತೆ. ಆಗಲೇ ಚಿತ್ರದ ಟೀಸರ್‌ ಬಿಡುಗಡೆ ಮಾಡುವುದಕ್ಕೆ ಬರಬೇಕು ಎಂದು ಆಹ್ವಾನಿಸಿದ್ದರಂತೆ. “ಆಯ್ತು ಹೋಗ್ಲಾ …’ ಎಂದು ಪ್ರಾಮಿಸ್‌ ಮಾಡಿದ್ದ ಅಂಬರೀಶ್‌, ಈಗ ಅದನ್ನು ಉಳಿಸಿಕೊಂಡಿದ್ದಾರೆ. ಇತ್ತೀಚೆಗೆ “ಉಪ್ಪು ಹುಳಿ ಖಾರ’ ಚಿತ್ರದ ಪಾತ್ರಗಳ ಟೀಸರ್‌ ಬಿಡುಗಡೆ ಸಮಾರಂಭ ನಡೆಯಿತು. ಆ ಸಮಾರಂಭಕ್ಕೆ ಅಂಬರೀಶ್‌ ಅವರೇ ಮುಖ್ಯ ಅತಿಥಿಯಾಗಿ ಬಂದಿದ್ದರು. ಅವರ ಜೊತೆಗೆ ಇನ್‌ಫೋಸಿಸ್‌ನ ಉಪಾಧ್ಯಕ್ಷರಾದ ರಾಮ್‌ದಾಸ್‌ ಕಾಮತ್‌ ಸಹ ಇದ್ದರು. ಅಂದು ಒಟ್ಟು ನಾಲ್ಕು ಟೀಸರ್‌ಗಳು ಬಿಡುಗಡೆಯಾದವು.

ಮೊದಲು ಚಿತ್ರದ ಮೂವರು ನಾಯಕರು ಮತ್ತು ನಾಯಕಿಯರನ್ನು ಪರಿಚಯಿಸುವ ಮೂವರು ಟೀಸರ್‌ಗಳು ಬಿಡುಗಡೆಗೊಂಡವು. ನಂತರ ಮಾಲಾಶ್ರೀ ಅವರ ಇನ್ನೊಂದು ಟೀಸರ್‌ ಬಿಡುಗಡೆಯಾಯಿತು. ನಂತರ ಮಾತನಾಡಿದ ಮಾಲಾಶ್ರೀ, ತಮ್ಮನ್ನು ಈ ಚಿತ್ರದಲ್ಲಿ ಬಹಳ ವಿಭಿನ್ನವಾಗಿ ತೋರಿಸಿದ್ದಾರೆ ಎಂದು ಹೇಳಿದರು. “ನಾನು ಇದುವರೆಗೂ ಹಲವು ಚಿತ್ರಗಳಲ್ಲಿ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದೇನೆ. ಈ ಚಿತ್ರದಲ್ಲೂ ಪೊಲೀಸ್‌ ಅಧಿಕಾರಿಯ ಪಾತ್ರವಾದರೂ, ವಿಭಿನ್ನವಾದ ಪಾತ್ರವಿದೆ. ಇಮ್ರಾನ್‌ ಹೇಳಿದಂಗೆ ಮಾಡಿದ್ದೀನಿ. ನಾನು ಈ ಚಿತ್ರದಲ್ಲಿ ಹೇಗೆ ಮಾಡಿದ್ದೀನಿ ಅಂತ ನೀವೆಲ್ಲಾ ಹೇಳಬೇಕು. ಹೊಸಬರ ಜೊತೆಗೆ ಕೆಲಸ ಮಾಡಿದ್ದು ಖುಷಿ ಕೊಟ್ಟಿತು. ಇನ್ನು ಈ ಚಿತ್ರದಲ್ಲಿ ಇಮ್ರಾನ್‌ ನನ್ನಿಂದ ಎರಡು ಸ್ಟೆಪ್‌ ಹಾಕಿಸಿದ್ದಾರೆ. ಹೇಗಿದೆ ಎಂಬುದು ನೀವೇ ನೋಡಿ’ ಎಂದು ಮಾಲಾಶ್ರೀ ಅವರು ಮೈಕು ಕೆಳಗಿಟ್ಟರು.

ಟೀಸರ್‌ ನೋಡಿ ನೀರು ಕುಡಿಬೇಕು ಎಂದೇ ಮಾತು ಶುರು ಮಾಡಿದರು ಅಂಬರೀಶ್‌. “ಟೀಸರ್‌ ನೋಡಿ ಖುಷಿಯಾಯಿತು. ಅಮೇರಿಕಾಗೆ ಹೋದಾಗ ಇಮ್ರಾನ್‌ ಹೇಳಿದ್ದರು. ಅದರಂತೆ ಬಂದೆ. ಅನುಶ್ರೀ ಟಿವಿಗಿಂಥ ಹತ್ತುಪಟ್ಟು ಚೆನ್ನಾಗಿ ಕಾಣಿಸುತ್ತಾರೆ. ಕನ್ನಡ ಚಿತ್ರರಂಗಕ್ಕೆ ತುಂಬಾ ಹೊಸಬರು ಬರುತ್ತಿದ್ದಾರೆ. ಹೊಸಬರು ಬರಬೇಕು. ಚಿತ್ರರಂಗವನ್ನು ಬೆಳೆಸಬೇಕು’ ಎಂದು ಅಂಬರೀಶ್‌ ಹಾರೈಸಿದರು.

ಅದಕ್ಕೂ ಮುನ್ನ ಶರತ್‌, ಅನುಶ್ರೀ, ಶಶಿ, ಜಯಶ್ರೀ, ಧನು ಮುಂತಾದವರು ಮಾತಾಡಿ ತಮ್ಮ ಪ್ರಯತ್ನಕ್ಕೆ ಶುಭ ಕೋರಿದರು. ಇಮ್ರಾನ್‌ ಮತ್ತು ನಿರ್ಮಾಪಕ ರಮೇಶ್‌ ರೆಡ್ಡಿ ಸಹ ಚಿತ್ರಕ್ಕೆ ಹಾರೈಸಿ ಎಂದು ಕೇಳುತ್ತಾ ಮಾತು ಮುಗಿಸಿದರು.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.