ದೆಹಲಿ ಮಾಲಿನ್ಯದಲ್ಲಿ ಸ್ವಲ್ಪಮಟ್ಟಿಗೆ ಸುಧಾರಣೆ
Team Udayavani, Nov 17, 2017, 7:20 AM IST
ನವದೆಹಲಿ: ದೆಹಲಿ ವಾಯುಮಾಲಿನ್ಯದಲ್ಲಿ ಅಲ್ಪ ಮಟ್ಟಿನ ಸುಧಾರಣೆ ಕಂಡಿದ್ದು, ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ಹೇರಿದ್ದ ನಿಷೇಧ ಹಿಂಪಡೆಯಲಾಗಿದೆ. ವಾಯುಮಾಲಿನ್ಯವು ತುರ್ತು ಪರಿಸ್ಥಿತಿ ಸನ್ನಿವೇಶಕ್ಕಿಂತ ಕೆಳಕ್ಕೆ ಇಳಿದಿದೆ.
ಟ್ರಕ್ಗಳಿಗೆ ನಗರ ಪ್ರವೇಶ ನಿಷೇಧ ಹಾಗೂ ಪಾರ್ಕಿಂಗ್ ಶುಲ್ಕ ಹೆಚ್ಚಳ ನಿರ್ಧಾರವನ್ನೂ ಹಿಂಪಡೆಯಲಾಗಿದೆ. ಈ ಸಂಬಂಧ ಸುಪ್ರೀಂಕೋರ್ಟ್ ನೇತೃತ್ವದ ಸಮಿತಿ ಆದೇಶ ಹೊರಡಿಸಿದೆ.
ಕೃಷಿ ತ್ಯಾಜ್ಯ ಖರೀದಿಗೆ ನಿರ್ಧಾರ: ಮಾಲಿನ್ಯಕ್ಕೆ ಕಾರಣವಾಗುವ ಕೃಷಿ ತ್ಯಾಜ್ಯ ಸುಡುವುದನ್ನು ತಡೆಯುವ ನಿಟ್ಟಿನಲ್ಲಿ ಕೃಷಿ ತ್ಯಾಜ್ಯ ಖರೀದಿಸಿ ತನ್ನ ವಿದ್ಯುತ್ ಘಟಕದಲ್ಲಿ ಉರುವಲಾಗಿ ಬಳಸಲು ಎನ್ಟಿಪಿಸಿ ನಿರ್ಧರಿಸಿದೆ. ಈ ಸಂಬಂಧ ಶೀಘ್ರದಲ್ಲೇ ಟೆಂಡರ್ ಕರೆಯುವುದಾಗಿ ಇಂಧನ ಸಚಿವ ಆರ್.ಕೆ.ಸಿಂಗ್ ಹೇಳಿದ್ದಾರೆ. ಟನ್ಗೆ 5,500 ರೂ. ದರದಲ್ಲಿ ಕೃಷಿ ತ್ಯಾಜ್ಯ ಖರೀದಿಸಲಿದೆ.
ಕೋಸ್ಟರಿಕಾ ರಾಯಭಾರಿಗೆ ಬೆಂಗಳೂರಲ್ಲಿ ಚಿಕಿತ್ಸೆ: ದೆಹಲಿ ಮಾಲಿನ್ಯದಿಂದಾಗಿ ಅಸ್ವಸ್ಥಗೊಂಡ ಕೋಸ್ಟರಿಕಾ ರಾಯಭಾರಿ ಮಾರಿಯೆಲಾ ಕ್ರೂಜ್ ಅಲ್ವರೆಜ್ ಬೆಂಗಳೂರಲ್ಲಿ ಚಿಕಿತ್ಸೆ ಪಡೆದಿ ದ್ದಾರೆ. ಈ ಬಗ್ಗೆ ಅವರು ಬ್ಲಾಗ್ನಲ್ಲಿ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ