ಹಠಕ್ಕೆ ಬಿದ್ದು ಹೋರಾಟ: ಡಾ. ರವೀಂದ್ರ
Team Udayavani, Nov 17, 2017, 7:29 AM IST
ಬೆಳಗಾವಿ: “ನಮ್ಮನ್ನು ಬೀದಿಗಿಳಿಸಿದವರಿಗೆ ಹಾಗೂ ಬೀದಿಗೆ ಇಳಿದವರಿಗೆ ಬಹಳ ಧನ್ಯವಾದಗಳು. ನಮ್ಮ ಹಕ್ಕನ್ನು ಪಡೆದುಕೊಳ್ಳಲು ನಾವು ಎಂತಹ ಹೋರಾಟಕ್ಕೂ ಸಿದ್ಧ. ಇದರಲ್ಲಿ ಅಳುಕಿನ ಮಾತೇ ಇಲ್ಲ ‘ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಎಚ್. ಎನ್. ರವೀಂದ್ರ ಹೇಳಿದರು.
ತಾರೀಹಾಳ ರಸ್ತೆಯಲ್ಲಿ ನಿರ್ಮಿಸಲಾಗಿರುವ ಪ್ರತಿಭಟನಾ ವೇದಿಕೆಯಲ್ಲಿ ಗುರುವಾರ ವೈದ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, “ನಮ್ಮ ಆತ್ಮಗೌರವ ಕಾಪಾಡಿಕೊಳ್ಳಲು ಹಠಕ್ಕೆ ಬಿದ್ದು ಈ ಹೋರಾಟ ನಡೆಸಲಾಗುತ್ತಿದೆ. ಇದು ಇಷ್ಟು ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವುದಕ್ಕೆ ಸಂಘಟನಾ ಶಕ್ತಿಯೇ ಕಾರಣ’ ಎಂದರು.
ಎಚ್ಡಿಕೆ ಅಭಯ: ಮುಷ್ಕರ ನಡೆಸುತ್ತಿರುವ ಖಾಸಗಿ ಆಸ್ಪತ್ರೆಗಳ ವೈದ್ಯರನ್ನು ಗುರುವಾರ ಸಂಜೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಭೇಟಿ ಮಾಡಿ ಮುಷ್ಕರನಿರತ ವೈದ್ಯರಿಗೆ ಅಭಯ ನೀಡಿದರು.
ಖಾಸಗಿ ಆಸ್ಪತ್ರೆಗಳಿಗೆ ತೊಂದರೆಯಾಗುವ ಕೆಪಿಎಂಇ ಕಾಯ್ದೆ ಮಸೂದೆಯನ್ನು ಸರ್ಕಾರ ಮಂಡಿಸಿದ್ದೇ ಆದರೆ ಅದು ಅಂಗೀಕಾರವಾಗದಂತೆ ನೋಡಿಕೊಳ್ಳುತ್ತೇವೆ. ಕಾಂಗ್ರೆಸ್ನಲ್ಲೂ ಈ ಮಸೂದೆ ವಿರೋಧಿ ಸುವವರಿದ್ದಾರೆ. ಚರ್ಚೆಯಲ್ಲಿ ಜೆಡಿಎಸ್ ಕಡೆಯಿಂದ ಯಾರೂ ಪಾಲ್ಗೊಳ್ಳುವುದಿಲ್ಲ.
●ಕುಮಾರಸ್ವಾಮಿ, ಮಾಜಿ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ