ಸಿದ್ದರಾಮಯ್ಯ ಗಂಡೋ,ಹೆಣ್ಣೋ ಎನ್ನುವ ಸಂಶಯ..!
Team Udayavani, Nov 18, 2017, 5:05 PM IST
ಚಿತ್ರದುರ್ಗ: ”ಮುಖ್ಯಮಂತ್ರಿ ಸಿದ್ದರಾಮಯ್ಯ,ಸಚಿವ ಆಂಜನೇಯ ಅವರನ್ನು ಗಂಡು ಅಂತ ಕರಿಬೇಕೋ? ಹೆಣ್ಣು ಅಂತ ಕರಿಬೇಕೋ ?”ಎಂದು ಶನಿವಾರ ಇನ್ನೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
‘ಟಿಪ್ಪು ಜಯಂತಿ ಆಚರಣೆ ನಡೆಸಿದ್ದನ್ನು ವಿರೋಧಿಸಿ ಒನಕೆ ಓಬವ್ವ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಸಿಎಂ ಮತ್ತು ಸಚಿವರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
‘ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರ ವಿರುದ್ಧ ಕಿಡಿ ಕಾರಿದರು. ಪೊಲೀಸರೊಂದಿಗೆ ನಾವು ಜಂಗಿ ಕುಸ್ತಿ ಆಡಲೂ ಸಿದ್ದರಿದ್ದೇವೆ’ ಎಂದರು.
‘ಸಚಿವ ಆಂಜನೆಯ ಸಿದ್ದರಾಮಯ್ಯ ಅವರ ಬಾಲ ಹಿಡಿದುಕೊಂಡು ಹೋಗುತ್ತಿದ್ದಾನೆ, ಇನ್ನು ಕೇವಲ ನಾಲ್ಕು ತಿಂಗಳು ಮಾತ್ರ ಬಾಲ ಆಡಿಸೋದು’ ಎಂದರು.
‘ಪಾಕಿಸ್ತಾನ ಜಿಂದಾಬಾದ್ ಎನ್ನುವವರಿಗೆ ಬೆಂಬಲ ಕೊಡ್ತಾರೆ, ದೇಶ ಭಕ್ತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುತ್ತಿರಲ್ಲಾ, ಸಿದ್ದರಾಮಯ್ಯ ಅವರನ್ನು ಗಂಡು ಅಂತ ಕರಿಬೇಕೋ? ಹೆಣ್ಣು ಅಂತ ಕರಿಬೇಕೋ?.ಪೊಲೀಸರೇ,ಈಗ ಹೇಳುವುದಿಲ್ಲ, ಇನ್ನೊಂದು ಪ್ರಕರಣ ದಾಖಲಿಸಿ ಆ ಮೇಲೆ ಹೇಳುತ್ತೇವೆ. ಇಲ್ಲಿ 50 ಸಾವಿರ ಜನ ಸೇರಿಸುತ್ತೇವೆ’ ಎಂದು ಗುಡುಗಿದರು.
ವೇದಿಕೆಯಲ್ಲಿ ಮಾಜಿ ಸಚಿವ ಸಿ.ಟಿ.ರವಿ.ಎ.ನಾರಾಯಣಸ್ವಾಮಿ ಮೊದಲಾದವರು ಹಾಜರಿದ್ದರು.
‘ಸಿದ್ದರಾಮಯ್ಯ ವೋಟಿಗಾಗಿ ಬೂಟು ನೆಕ್ಕಲು ಸಿದ್ದ’ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಅನಂತ್ ಕುಮಾರ್ ವಿರುದ್ಧ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ