15 ದಿನದೊಳಗೆ ಸಾರಿಗೆ ಅದಾಲತ್
Team Udayavani, Nov 19, 2017, 11:55 AM IST
ಮಂಗಳೂರು : ಹದಿನೈದು ದಿನದೊಳಗೆ ಮಂಗಳೂರಲ್ಲಿ ಸಾರಿಗೆ ಅದಾಲತ್ ಆಯೋಜಿಸುವಂತೆ ಜಿಲ್ಲಾ ಸಾರಿಗೆ ಪ್ರಾಧಿಕಾರಕ್ಕೆ ಕರ್ನಾಟಕ ಲೋಕಾಯುಕ್ತ ನ್ಯಾ| ಪಿ. ವಿಶ್ವನಾಥ ಶೆಟ್ಟಿ ಆದೇಶಿಸಿದ್ದಾರೆ.
ಮಂಗಳೂರಿನ ಪುರಭವನದಲ್ಲಿ ಲೋಕಾಯುಕ್ತರ ಉಪಸ್ಥಿತಿಯಲ್ಲಿ ಶುಕ್ರವಾರ ಸಾರ್ವಜನಿಕ ದೂರುಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮದಲ್ಲಿ ಠಶೋಕ್ ಭಟ್ ಅವರು ದೂರು ಸಲ್ಲಿಸಿದರು. ಪ್ರತಿ ಮೂರು ತಿಂಗಳಿಗೊಮ್ಮೆ ಸಾರಿಗೆ ಅದಾಲತ್ ನಡೆಸಬೇಕು ಎಂಬುದಾಗಿ ನಿಯಮ ಇದೆ. ಆದರೆ ಇದನ್ನು ಪಾಲಿಸಿಲ್ಲ ಎಂದರು. ಇದಕ್ಕೆ ಉತ್ತರಿಸಿದ ಜಿಲ್ಲಾ ಸಾರಿಗೆ ಅಧಿಕಾರಿ ಜಿ.ಎಸ್. ಹೆಗ್ಡೆ ಅವರು ಸಿಬಂದಿ ಕೊರತೆಯಿಂದಾಗಿ ಸಾರಿಗೆ ಅದಾಲತ್ ನಡೆಸಲು ಸಾಧ್ಯವಾಗಿಲ್ಲ ಎಂದರು. ಆದರೆ ಸಿಬಂದಿ ಕೊರತೆ ಮುಂದಿಟ್ಟು ಅದಾಲತ್ ನಡೆಸದಿರುವುದು ಸರಿಯಲ್ಲ. ತತ್ ಕ್ಷಣ ಕ್ರಮ ಕೈಗೊಂಡು 15 ದಿನಗಳಲ್ಲಿ ಅದಾಲತ್ ನಡೆಸಬೇಕು. ಮುಂದೆ ಎಂದಿನಂತೆ ನಿಯಮಿತ ಅದಾಲತ್
ನಡೆಸಬೇಕು ಎಂದು ಸೂಚಿಸಿದರು.
ಅಧಿಕಾರಿಗಳ ಜನಸ್ಪಂದನೆ ಅಗತ್ಯ ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಈಗಾಗಲೇ 23 ಜಿಲ್ಲೆಗಳಲ್ಲಿ ದೂರುಗಳ ವಿಚಾರಣೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸಿದ್ದೇನೆ. ಅಧಿಕಾರಿಗಳು ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು. ಲಂಚ ಸ್ವೀಕಾರ ಮಾತ್ರ ದುರಾಡಳಿತವಲ್ಲ. ಜನರ ಕೆಲಸ ಮಾಡದಿದ್ದರೂ ದುರಾಡಳಿತವೇ. ಶಿಸ್ತುಕ್ರಮಕ್ಕೆ ಲೋಕಾಯುಕ್ತ ಕಾಯ್ದೆಯಲ್ಲಿ ಅವಕಾಶವಿದೆ ಎಂದು ಲೋಕಾಯುಕ್ತರು ಎಚ್ಚರಿಸಿದರು.
104 ಅರ್ಜಿಗಳು ಕಂದಾಯ ಇಲಾಖೆ, ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ ಸಹಿತ ವಿವಿಧ ಇಲಾಖೆಗಳಿಗೆ ಸಂಬಂಧಿಸಿ ನ. 15ರಿಂದ17ರ ವರೆಗೆ ಒಟ್ಟು 104 ಅರ್ಜಿಗಳು ಸಲ್ಲಿಕೆಯಾಗಿದ್ದು ಇದರಲ್ಲಿ ನ. 17ರ ಮಧ್ಯಾಹ್ನದ ವರೆಗೆ 32 ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲಾಗಿದೆ.
ಮಾಹಿತಿ ಹಕ್ಕುದಾರರಲ್ಲಿ ಕೆಲವು ಮಂದಿ ಈ ಅವಕಾಶವನ್ನು ಕೆಟ್ಟ ಉದ್ದೇಶಕ್ಕೆ ಬಳಸಿಕೊಳ್ಳುತ್ತಿರುವ ದೂರುಗಳು ಬರುತ್ತಿವೆ. ಆದ್ದರಿಂದ ಲೋಕಾಯುಕ್ತಕ್ಕೆ ಅತಿ ಹೆಚ್ಚು ದೂರು ಸಲ್ಲಿಸುತ್ತಿರುವವರ ಹಿನ್ನೆಲೆ ಪರಿಶೀಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.
ಲೋಕಾಯುಕ್ತ ಅಪರ ನಿಬಂಧಕ ಮೋಹನ್, ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಜಿ.ಪಂ. ಸಿಇಒ ಡಾ| ಎಂ.ಆರ್. ರವಿ, ಲೋಕಾಯುಕ್ತ ಎಸ್ಪಿ ರೇಷ್ಮಾ ಜಿ.ಕೆ., ದ.ಕ. ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಉಪಸ್ಥಿತರಿದ್ದರು.
ಡಿ. 4 ರಂದು ಮತ್ತೆ ವಿಚಾರಣೆ ಸಾರ್ವಜನಿಕ ದೂರುಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮದಲ್ಲಿ ಬಾಕಿಯುಳಿದಿರುವ ಅರ್ಜಿಗಳನ್ನು ಡಿ. 4ರಂದು ಇತ್ಯರ್ಥಗೊಳಿಸಲಾಗುವುದು. ಅಂದು ಅಪರಾಹ್ನ 2.30ರಿಂದ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮ ನಡೆಯುವುದು. ಸಲ್ಲಿಕೆಯಾಗಿರುವ ಅರ್ಜಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಜರಗಿಸಿ ಅದರ ಬಗ್ಗೆ ವರದಿಯನ್ನು ಡಿ. 4ರಂದು ನೀಡಬೇಕು ಎಂದು ಲೋಕಾಯುಕ್ತ ನ್ಯಾ| ವಿಶ್ವನಾಥ ಶೆಟ್ಟಿ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ
The Safest Online Gaming Sites: Shielding Your Gaming Experience
ವಿಕ್ರಮ್ ಪುತ್ರನ ಜೊತೆ ಮಾರಿ ಸೆಲ್ವರಾಜ್ ಸಿನಿಮಾ: ʼಬೈಸನ್ʼ ಫಸ್ಟ್ ಲುಕ್ ಔಟ್
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO