ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಗ್ರಾಮ ವಾಸ್ತವ್ಯ


Team Udayavani, Nov 20, 2017, 1:29 PM IST

blore-g1.jpg

ದೊಡ್ಡಬಳ್ಳಾಪುರ : ಗ್ರಾಮಗಳ ಏಳಿಗೆ, ಮಹಿಳೆಯರ ಸಬಲೀಕರಣಕ್ಕಾಗಿ ಯೋಜನೆಗಳನ್ನು ರೂಪಿಸುವಲ್ಲಿ ಕಾಂಗ್ರೆಸ್‌ ಪಕ್ಷ ಮುಂಚೂಣಿಯಲ್ಲಿದ್ದು, ಗ್ರಾಮಗಳ ಸ್ಥಿತಿಗತಿ ಸುಧಾರಣೆ ಪರಮೋದ್ದೇಶ ಹೊಂದಿದೆ ಎಂದು ಕೆಪಿಸಿಸಿ ಮಹಿಳಾ ಉಸ್ತುವಾರಿ ಶಾಂಭವಿ ಹೇಳಿದರು.

ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ತಿಪ್ಪೂರು ಹತ್ತಿರದ ಬೈರಾಪುರ ತಾಂಡದ ಶತಾಯುಷಿ ಮಹಿಳೆ ಗೌರಿಬಾಯಿ ಅವರ ಮನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ ಮಹಿಳಾ ಘಟಕದ ನೇತೃತ್ವದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಕಾಂಗ್ರೆಸ್‌ ಸಾಮಾಜಿಕ ನ್ಯಾಯಕ್ಕೆ ಆದ್ಯತೆ: ಇಡೀ ವಿಶ್ವದಲ್ಲೆ ಅತ್ಯಂತ ಸಮರ್ಥವಾಗಿ ಪ್ರಜಾಪ್ರಭುತ್ವ ದೇಶದಲ್ಲಿ ಆಡಳಿತ ನಡೆಸಿದ ಕೀರ್ತಿ ಮಾಜಿ ಪ್ರಧಾನ ಮಂತ್ರಿ ಇಂದಿರಾಗಾಂಧಿ ಅವರಿಗೆ ಸಲ್ಲುತ್ತದೆ. 20 ಅಂಶಗಳ ಕಾರ್ಯಕ್ರಮ ತರುವ ಮೂಲಕ ತುಳಿತಕ್ಕೆ ಒಳಗಾದವರು, ಬಡವರ ಏಳಿಗೆಗಾಗಿ ಶ್ರಮಿಸಿದ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿಯೂ ದೇಶದಲ್ಲಿನ ಸವಾಲುಗಳನ್ನು ದಿಟ್ಟವಾಗಿ ಎದುರಿಸಿದವರು. ಇಂಥ ದಿಟ್ಟ ಮಹಿಳೆ ನಮಗೆ ಸ್ಫೂರ್ತಿಯಾಗಿದ್ದು, ಇವರ ಆಶಯಗಳನ್ನು ಅನುಷ್ಟಾನಗೊಳಿಸುವಲ್ಲಿ ಶ್ರಮಿಸುತ್ತೇವೆ.

ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಿರುವ ಕಾಂಗ್ರೆಸ್‌ ಮಹಿಳಾ ಗ್ರಾಮ ವಾಸ್ತವ್ಯವನ್ನು ಸ್ಥಳೀಯ ವೈಶಿಷ್ಟ್ಯತೆಗಳ ತಾಣಗಳಲ್ಲಿ ಆಯೋಜಿಸಲಾಗುತ್ತಿದೆ. ಈ ಮೂಲಕ ಗ್ರಾಮಸ್ಥರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಬೈರಾಪುರ ತಾಂಡಾದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮುಖ್ಯವಾಗಿ ಕುಡಿತ ಮತ್ತು ಕುಡಿತದಿಂದ ಬಾಧಿತ ಕುಟುಂಬಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ತುಳಸಿ ಸಸಿ ವಿತರಣೆ: ಕೆಪಿಸಿಸಿ ಮಹಿಳಾ ಘಟಕ ಉಸ್ತುವಾರಿ ಸುಮಾರಾಣಿ ಮಾತನಾಡಿ, ದೇಶ ಕಂಡ ಅಪ್ರತಿಮ ರಾಜಕೀಯ ನಾಯಕಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ಶತಮಾನೋತ್ಸವವನ್ನು ವಿಶಿಷ್ಟವಾಗಿ ಆಚರಿಸುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ನಡೆಯುತ್ತಿದ್ದು, ಸಾಂಕೇತಿಕವಾಗಿ ತುಳಸಿ ಸಸಿಗಳನ್ನು ವಿತಸರಿಸುವ ಮೂಲಕ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಗ್ರಾಮ ವಾಸ್ತವ್ಯ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ ಮಹಿಳಾ ಘಟಕ ಅಧ್ಯಕ್ಷೆ ಎಚ್‌.ಎಸ್‌. ರೇವತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ನಡೆಯುತ್ತಿರುವ ಗ್ರಾಮ ವಾಸ್ತವ್ಯ ಗ್ರಾಮ ಜೀವನದ ಅರಿವಿಗೆ ಪೂರಕವಾಗಿದೆ ಎಂದರು. 

ಈ ವೇಳೆ ಶತಾಯುಷಿ ಗೌರಿಬಾಯಿ ಮತ್ತು ಕುಟುಂಬದೊಂದಿಗೆ ಮಹಿಳಾ ಕಾಂಗ್ರೆಸ್‌ ಮುಖಂಡರು ಸಂವಾದ ನಡೆಸಿದರು. ಜಿಪಂ ಸದಸ್ಯೆ ಕನ್ಯಾಕುಮಾರಿ, ಕೆಪಿಸಿಸಿ ಸದಸ್ಯೆ ಭಾಗ್ಯ, ವಿನೋದ, ಮಹಿಳಾ ಕಾಂಗ್ರೆಸ್‌ನ ಮುಖಂಡರಾದ ನಾಗರತ್ನ, ಮಮತಾ, ಮಂಜುಳಾ, ಪ್ರಭಾವತಿ, ಪುಷ್ಪಲತಾ, ಜ್ಯೋತಿ, ಹನುಮಂತಮ್ಮ, ರಾಜೇಶ್ವರಿ, ವರಲಕ್ಷ್ಮೀ, ಕಾಂಗ್ರೆಸ್‌ ತಾಲೂಕು ಅಧ್ಯಕ್ಷ ಬೈರೇಗೌಡ, ರಾಮಕೃಷ್ಣಯ್ಯ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.