ಮೂರು ಸಾವಿರ ಮಠದಲ್ಲಿ ಕಾರ್ತಿಕೋತ್ಸವ ಸಂಭ್ರಮ
Team Udayavani, Nov 21, 2017, 1:08 PM IST
ಹುಬ್ಬಳ್ಳಿ: ಇಲ್ಲಿನ ಮೂರುಸಾವಿರ ಮಠದಲ್ಲಿ ಕಾರ್ತಿಕ ಸೋಮವಾರದಂದು ಲಕ್ಷ ದೀಪೋತ್ಸವ ನಡೆಯಿತು. ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಕಾರ್ತಿಕ ದೀಪೋತ್ಸವಕ್ಕೆ ದೀಪ ಬೆಳಗಿ ಚಾಲನೆ ನೀಡಿದರು.
ಶ್ರೀಮಠದ ಆವರಣದಿಂದ ಹಿಡಿದು ಹೊರ ಭಾಗದ ವರೆಗೂ ಪಣತಿಗಳನ್ನು ಇಟ್ಟು ದೀಪ ಬೆಳಗಿಸಲಾಯಿತು. ಬೆಳಗ್ಗೆಯಿಂದ ಶ್ರೀ ಗುರುಸಿದ್ಧೇಶ್ವರರ ಗದ್ದುಗೆಗೆ ವಿಶೇಷ ಪೂಜೆ, ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು.
ಮೂರುಸಾವಿರ ಮಠದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಬೆಳಗ್ಗೆ ಮಠದ ಆವರಣದಲ್ಲಿ ರಂಗೋಲಿ ಬಿಡಿಸಿ ಅದಕ್ಕೆ ತಕ್ಕಂತೆ ಹಣತೆಗಳನ್ನು ಇಟ್ಟು ಅಲಂಕಾರ ಮಾಡಿದ್ದರು. ಇದಲ್ಲದೇ ಮೂರುಸಾವಿರ ಮಠದ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಸಂಗೀತ ಕಾರ್ಯಕ್ರಮ ಪ್ರಸ್ತುತ ಪಡಿಸಿದರು.
ಮೂರುಸಾವಿರಮಠ ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಅರವಿಂದ ಕುಬಸದ, ಗೌರವ ಕಾರ್ಯದರ್ಶಿ ಹನುಮಂತ ಶಿಗ್ಗಾಂವ, ಮಹೇಶ ಟೆಂಗಿನಕಾಯಿ, ಶಂಕರಣ್ಣ ಮುನವಳ್ಳಿ, ಕುಮಾರಗೌಡ ಪಾಟೀಲ, ಚನ್ನಬಸಪ್ಪ ಧಾರವಾಡಶೆಟ್ರ, ವಿರೇಶ ಸಂಗಳದ, ರಾಜು ಕೊರಾಣಮಠ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ
Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು
LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ
MUST WATCH
ಹೊಸ ಸೇರ್ಪಡೆ
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’