ಕುಲಾಲ ಸಂಘ: 14ನೇ ವಾರ್ಷಿಕ ಸ್ನೇಹ ಸಮ್ಮಿಲನ


Team Udayavani, Nov 21, 2017, 3:05 PM IST

20-Mum01a.jpg

ಮುಂಬಯಿ: ಯುವಕರಲ್ಲಿ ನಾಯಕತ್ವದ ಗುಣವಿದೆ. ಅವರ ಸರಿಯಾದ ಸದ್ಭಳಿಕೆಯನ್ನು ಸಂಘಟನೆಗೆ ಅಳವಡಿಸಬೇಕು. 87 ವರ್ಷಗಳ ಹಿಂದೆ ಸ್ಥಾಪಿತವಾದ ಈ ಸಂಸ್ಥೆ  ಯುವ ಜನಾಂಗದ ಕೊಡುಗೆಯಾಗಿದೆ. ಕುಲದ ಸರ್ವತೋಮುಖ ಅಭಿವೃದ್ಧಿಗಾಗಿ ಹುಟ್ಟಿಕೊಂಡ ಕುಲಾಲ ಸಂಘ ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಬಹಳಷ್ಟು ಕೊಡುಗೆ ನೀಡಿದೆ. ಸ್ಥಳೀಯ ಸಮಿತಿಗಳ ಸ್ನೇಹ ಸಮ್ಮಿಲನಗಳು ಹೃದಯ ಹೃದಯಗಳ ಬೆಸುಗೆಯೊಂದಿಗೆ ಮುನ್ನಡೆಯಲಿ ಎಂದು ಕುಲಾಲ ಸಂಘ ಮುಂಬಯಿ ಇದರ ನೂತನ ಅಧ್ಯಕ್ಷ ದೇವದಾಸ್‌ ಎಲ್‌. ಕುಲಾಲ್‌ ಅವರು ನುಡಿದರು.

ನ. 19ರಂದು ನಲಸೋಪರ ಪಶ್ಚಿಮದ ಹೊಟೇಲ್‌ ಗ್ಯಾಲಕ್ಸಿ ಸಭಾಂಗಣದಲ್ಲಿ ಕುಲಾಲ ಸಂಘ ಮುಂಬಯಿ ಮೀರಾರೋಡ್‌-ವಿರಾರ್‌ ಸ್ಥಳೀಯ ಸಮಿತಿಯ 14ನೇ ವಾರ್ಷಿಕ ಸ್ನೇಹ ಸಮ್ಮಿಲನದ ಅಧ್ಯಕ್ಷ ವಹಿಸಿ ಮಾತನಾಡಿದ, ಅವರು ಸ್ವಜಾತಿ ಸಂಘಟನೆಯೊಂದಿಗೆ ಇತರ ಪರಿಸರದ ಕನ್ನಡ-ತುಳು ಸಂಸ್ಥೆಯೊಂದಿಗೆ ನಿಕಟ ಸಂಪರ್ಕವಿರಿಸಬೇಕು. ತಾನು ಬದುಕಿ ಇತರ ಬದುಕಿಗೆ ಆಸರೆಯಾಗುವ ಮಾನವ ಧರ್ಮವನ್ನು ಬೆಳೆಸಬೇಕು ಎಂದರು.
ಮೀರಾರೋಡ್‌-ವಿರಾರ್‌ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಸುಂದರ ಪೂಜಾರಿ ಸ್ವಾಗತಿಸಿ ಮಾತನಾಡಿ, ಕ್ರೀಡೆ, ಆರೋಗ್ಯ ಹಾಗೂ ಶಿಕ್ಷಣಕ್ಕೆ ಸ್ಥಳೀಯ ಸಮಿತಿಯು ಸಾಧ್ಯವಾದಷ್ಟು ಶ್ರಮ ವಹಿಸಿ ಯಶಸ್ವಿಗೊಳಿಸಿದೆ. ಪೂರ್ವಜರು ಪಟ್ಟ ಶ್ರಮದ ದ್ಯೋತಕವಾದ ಕುಲಾಲ ಸಂಘ ಮುಂಬಯಿಯನ್ನು ಅತ್ಯಧಿಕಸದಸ್ಯರಸೇರ್ಪಡೆಯೊಂದಿಗೆ ಭದ್ರತೆಗೊಳಿಸಬೇಕು ಎಂದು ನುಡಿದರು.

ಜ್ಯೋತಿ ಕೋ ಆಪರೇಟಿವ್‌ ಸೊಸೈಟಿಯ ಕಾರ್ಯಾಧ್ಯಕ್ಷ ಗಿರೀಶ್‌ ಬಿ. ಸಾಲ್ಯಾನ್‌ ಅವರು ಮಾತನಾಡಿ, ಕುಲಾಲ ಸಂಘ ಪ್ರಾಯೋಜಿತ ಜ್ಯೋತಿ ಕೋ ಆಪರೇಟಿವ್‌ ಸೊಸೈಟಿ ಆರ್ಥಿಕ ಕ್ಷೇತ್ರದಲ್ಲಿ ಗಮನೀಯ ಪ್ರಗತಿ ಸಾಧಿಸಿದೆ. ಈಗಾಗಲೇ ನಲಸೋಪರ ಮತ್ತು ಪುಣೆ ಶಾಖೆಗಳನ್ನು ತೆರೆಯಲು ಪರವಾನಿಗೆ ದೊರಕಿದೆ. ವಿವಿಧ ಸಾಲ-ಸೌಲಭ್ಯಗಳ ಸದುಪಯೋಗಕ್ಕೆ ಸ್ವಜಾತಿ-ಬಾಂಧವರು ಮುಂದಾ ಗಬೇಕು ಎಂದರು.

ಇದೇ ಸಂದರ್ಭದಲ್ಲಿ ಕಟ್ಟಡ ಸಮಿತಿಯ ಉಪ ಸಮಿತಿಯ ಕಾರ್ಯಾಧ್ಯಕ್ಷ ಡಿ. ಐ. ಮೂಲ್ಯ ಸ್ಥಳೀಯ ಸಮಿತಿಯ ಮಾಜಿ ಉಪ ಕಾರ್ಯಾಧ್ಯಕ್ಷ ಮಹಾಬಲ ಮೂಲ್ಯ, ಸ್ಥಳೀಯ ಸಮಿತಿಯ ಹಿರಿಯ ಸದಸ್ಯೆ ಜಾನಕಿ ಭುಜಂಗ ಬಂಗೇರ ಅವರನ್ನು ವೇದಿಕೆಯ ಗಣ್ಯರು ಸಮ್ಮಾನಿಸಿದರು. ಬಾಲ ಪ್ರತಿಭೆಗಳಾದ ಆಶಾ ಸಿ. ಮೂಲ್ಯ, ನಿಶಾ ಪಿ. ಕುಲಾಲ್‌, ಕೃಷ್ಣ ಸೂರ್ಯವಂಶಿ ಅವರಿಗೆ ಪ್ರತಿಭಾ ಪುರಸ್ಕಾರವನ್ನಿತ್ತು ನೀಡಿ ಗೌರವಿಸಲಾಯಿತು.
ಕೇಂದ್ರ ಕಚೇರಿಯ ಉಪಾಧ್ಯಕ್ಷ ರಘು ಮೂಲ್ಯ, ಗೌರವ ಪ್ರಧಾನ ಕಾರ್ಯದರ್ಶಿ ಕರುಣಾಕರ ಬಿ. ಸಾಲ್ಯಾನ್‌, ಕೋಶಾಧಿಕಾರಿ ಜಯ ಎಸ್‌. ಅಂಚನ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಎಸ್‌. ಗುಜರನ್‌, ಥಾಣೆ-ಕಸರಾ-ಕರ್ಜತ್‌ -ಭಿವಂಡಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಆನಂದ ಬಿ. ಮೂಲ್ಯ, ನವಿಮುಂಬಯಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಶೇಖರ ಮೂಲ್ಯ, ಚರ್ಚ್‌ ಗೇಟ್‌-ದಹಿಸರ್‌ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ರಘು ಪಿ. ಮೂಲ್ಯ, ಸಿಎಸ್‌ಟಿ-ಮುಲುಂಡ್‌ ಸ್ಥಳೀಯ ಸಮಿತಿಯ ಉಪಾಧ್ಯಕ್ಷ ಸುಂದರ ಮೂಲ್ಯ, ಸಂಘಟನಾ ಕಾರ್ಯಾಧ್ಯಕ್ಷ ಉಮಾನಾಥ ಮೂಲ್ಯ, ಅಮೂಲ್ಯ ಪತ್ರಿಕೆಯ ಸಂಪಾದಕ ಶಂಕರ ವೈ. ಮೂಲ್ಯ ಅವರು ಮಾತನಾಡಿ ಶುಭ ಹಾರೈಸಿದರು.

ಗುರುವಂದನ ಭಜನಾ ಮಂಡಳಿಯ ಕಾರ್ಯಾಧ್ಯಕ್ಷ ಚಂದ್ರಶೇಖರ ಕುಲಾಲ್‌, ಕಾರ್ಯದರ್ಶಿ ಆದ್ಯಪಾಡಿ ವಾಮನ್‌ ಡಿ. ಮೂಲ್ಯ, ಸ್ಥಳೀಯ ಸಮಿತಿಯ ಕಾರ್ಯದರ್ಶಿ ಮೋಹನ್‌ ಬಂಜನ್‌, ಕೋಶಾಧಿಕಾರಿ ಯೋಗೇಶ್‌ ಬಂಗೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುರೇಖಾ ಬಂಜನ್‌, ಕಾರ್ಯಾಧ್ಯಕ್ಷ ರಘುನಾಥ ಕರ್ಕೇರ ಮತ್ತಿತರ ಗಣ್ಯರನ್ನು ಗೌರವಿಸಿದರು.

ಕುಂಬಾರ ಗೀತೆಯನ್ನು ಉದಯ ಮೂಲ್ಯ ಮೀರಾರೋಡ್‌ ಅವರು ಹಾಡಿದರು. ಆಶಾ ಮೂಲ್ಯ, ಪ್ರಣೀತಾ ಮೂಲ್ಯ ಪ್ರಾರ್ಥನೆಗೈದರು. ಗೀತಾ ಬಂಗೇರ ಮತ್ತು ಜಯಂತಿ ಬಂಗೇರ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ವೈವಿಧ್ಯಮಯ ನೃತ್ಯಗಳು ಪ್ರದರ್ಶನಗೊಂಡಿತು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.