ರೈತರೊಂದಿಗೆ ಚೆಲ್ಲಾಟ


Team Udayavani, Nov 21, 2017, 4:15 PM IST

ray1.jpg

ಹಟ್ಟಿ ಚಿನ್ನದ ಗಣಿ: ನಾರಾಯಣಪುರ ಬಲದಂಡೆ ನಾಲೆಯಿಂದ ಗುಡ್ಡದಂಚಿನ ರೈತರ ಜಮಿನುಗಳಿಗೆ ನೀರು ಹರಿಸಲು ಮೀನ ಮೇಷ ಎಣಿಸುತ್ತಿರುವ ಕೃಷ್ಣ ಭಾಗ್ಯ ಜಲ ನಿಗಮ ಮತ್ತು ಸರ್ಕಾರ ಸದ್ದಿಲ್ಲದೆ ರೈತರ ಬಾಳಲ್ಲಿ ಆಟವಾಡುತ್ತಿದೆ.

ಬಸವಸಾಗರ ಜಲಾಶಯದ ಬಲದಂಡೆ ಮುಖ್ಯ ನಾಲೆಯ 54ನೇ ಕಿ.ಮೀ. ರೆಗ್ಯೂಲೇಟರ್‌ ಎಸ್ಕೇಪ್‌ ಮೂಲಕ ಬರುವ ನೀರನ್ನು ಒಂದೆಡೆ ಸಂಗ್ರಹ ಮಾಡಿ ಗುಡ್ಡದಂಚಿನ ಗ್ರಾಮಗಳ ಯರಜಂತಿ, ಪೈದೋಡ್ಡಿ ಸೇರಿ ಹಲವು ದೊಡ್ಡಿಗಳ ರೈತರ ಸುಮಾರು 700 ಹೆಕ್ಟೇರ್‌ ಪ್ರದೇಶಕ್ಕೆ ನೀರು ಹರಿಸಲು ಕೆಬಿಜೆಎನ್‌ಎಲ್‌ ನಾಲೆ ನಿರ್ಮಿಸಿದೆ. ಮಳೆ ಇಲ್ಲದ ಬರಗಾಲದ ಪರಿಸ್ಥಿತಿಯಲ್ಲೂ ರೈತರ ಜಮೀನುಗಳಿಗೆ ನೀರಿನ ತೊಂದರೆ ಆಗದಂತೆ ನಿಗಮದ ಅಧಿಕಾರಿಗಳು ಎರಡೂ ನಾಲೆಗಳ ಮೂಲಕ ನೀರು ಹರಿಸಿದ್ದರು. ಇದರಿಂದ ರೈತರು ಮುಂಗಾರಿನಲ್ಲಿ ಸಜ್ಜೆ, ಬೇಸಿಗೆ ಬೆಳೆಯಾದ ಶೇಂಗಾ ಬಿತ್ತನೆ ಮಾಡುತ್ತಿದ್ದರು.

ನೀರು ಹರಿವಿಗೆ ತಡೆ: ಪ್ರಸಕ್ತ ವರ್ಷ ಉತ್ತಮ ಮಳೆ ಆಗಿದ್ದು, ಬಸವಸಾಗರ ಅಣೆಕಟ್ಟೆಯಲ್ಲಿ ಸಾಕಷ್ಟು ನೀರು ಸಂಗ್ರಹವಿದೆ. ಆದರೆ ಮುಖ್ಯ ನಾಲೆಯ 54ನೇ ಕಿ.ಮೀ. ರೆಗ್ಯೂಲೇಟರ್‌ ಮೂಲಕ ನಾಲೆಗಳಿಗೆ ನೀರು ಹರಿಸುವುದನ್ನು ತೆಡೆಗಟ್ಟಿ ಗೇಟ್‌ ಬಂದ್‌ ಮಾಡಲಾಗಿದೆ. ಇದರಿಂದ ಗುಡ್ಡದಂಚಿನ ರೈತರ ಜಮೀನುಗಳಿಗೆ ಹನಿ ನೀರು ಹರಿಯುತ್ತಿಲ್ಲ.

ನೀರಿಗಾಗಿ ರೈತರ ಗುದ್ದಾಟ: ಬಿತ್ತನೆ ಮಾಡಿದ ನಂತರ 20 ದಿನಗಳ ನಂತರ ಶೇಂಗಾ ಬೆಳೆಗೆ ನೀರಿನ ಅಗತ್ಯವಿದೆ. ಈಗ ಜಲಾಶಯದಲ್ಲಿ ನೀರಿದ್ದರೂ 54ನೇ ಕಿ.ಮೀ. ರೆಗ್ಯೂಲೇಟರ್‌ ಮೂಲಕ ನಾಲೆಗಳಿಗೆ ನೀರು ಹರಿಸದ್ದರಿಂದ ರೈತರು ಕಂಗೆಟ್ಟಿದ್ದು, ಕೆಬಿಜೆಎನ್‌ಎಲ್‌ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನಾದರೂ ಗುಡ್ಡದಂಚಿನ ಜಮೀನುಗಳಿಗೆ ನೀರು ಹರಿಸಲು ಕೆಬಿಜೆಎನ್‌ಎಲ್‌ ಅಧಿಕಾರಿಗಳು ಕ್ರಮ ವಹಿಸಬೇಕೆಂದು ರೈತರು ಆಗ್ರಹಿಸಿದ್ದಾರೆ

ಸುಮಾರು ನಾಲ್ಕು ವರ್ಷಗಳಿಂದ ನಾಲೆ ಮೂಲಕ ನೀರು ಬಿಡಲಾಗುತ್ತಿದ್ದು, ಇದನ್ನು ನಂಬಿ ಬೇಸಿಗೆಯಲ್ಲೂ ಬಿತ್ತನೆ ಮಾಡಿ ಬದುಕು ಕಟ್ಟಿಕೊಂಡಿದ್ದೇವೆ. ಆದರೆ ಈ ವರ್ಷ ನೀರು ಬಿಡುವುದಿಲ್ಲ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವ ನಮಗೆ ಇದರ ಅರಿವು ಇಲ್ಲ. ಏಕಾಏಕಿ ನಾಲೆಗೆ ನೀರು ಬಂದ್‌ ಮಾಡಿದ್ದರಿಂದ ತೊಂದರೆ ಆಗಿದೆ.  ತಿಮ್ಮಯ್ಯ, ಯರಜಂತಿ ಗ್ರಾಮದ ರೈತ

ಯರಜಂತಿ, ಪೈದೊಡ್ಡಿ ಸೇರಿದಂತೆ ಹತ್ತಾರು ಗ್ರಾಮಗಳ ರೈತರಿಗೆ ನೀರು ಬಿಡಬೇಕು ಎಂಬ ಆದೇಶವಿಲ್ಲ. ಮುಖ್ಯ
ನಾಲೆಯಿಂದ ರೈತರ ಜಮೀನಿಗೆ ನೀರಿನ ಲಭ್ಯತೆ ಇಲ್ಲ. ಅದಕ್ಕಾಗಿ ರೆಗ್ಯೂಲೇಟರ್‌ ಎಸ್ಕೇಪ್‌ ಗೇಟ್‌ ಬಂದ್‌
ಮಾಡಲಾಗಿದೆ.  ಅಶೋಕ ಅಭಿಯಂತರ, ಕೆಬಿಜೆಎನ್‌ ಎಲ್‌ ರೋಡಲಬಂಡಾ (ಯುಕೆಪಿ)

ಟಾಪ್ ನ್ಯೂಸ್

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.