ಆಶ್ರಯ ಒದಗಿಸಲು ಲಿಖೀತ ಭರವಸೆ ನೀಡಲು ಆಗ್ರಹ


Team Udayavani, Nov 21, 2017, 6:05 PM IST

21-13.jpg

ದಾವಣಗೆರೆ: ರಾಮಕೃಷ್ಣ ಹೆಗಡೆ, ಚಂದ್ರೋದಯ ನಗರ ನಿವಾಸಿಗಳಿಗೆ ಆಶ್ರಯ ಯೋಜನೆ ಮನೆ ಒದಗಿಸುವ ಬಗ್ಗೆ ಲಿಖೀತ ಭರವಸೆ ನೀಡಲು ಒತ್ತಾಯಿಸಿ ನಾಗರಿಕ ಮೂಲ ಸೌಕರ್ಯ ಹೋರಾಟ ವೇದಿಕೆ ನೇತೃತ್ವದಲ್ಲಿ ನೂರಾರು ಜನರು ಸೋಮವಾರ ನಗರ ಪಾಲಿಕೆ ಆವರಣದಲ್ಲಿ ಧರಣಿ ನಡೆಸಿದ್ದಾರೆ.

ರಾಮಕೃಷ್ಣ ಹೆಗಡೆ, ಚಂದ್ರೋದಯ ನಗರದಲ್ಲಿ ಕಳೆದ 30-40 ವರ್ಷದಿಂದ ವಾಸ ಇರುವರಿಗೆ ಆಶ್ರಯ ಮನೆ, ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಹಲವಾರು ಬಾರಿ ಹೋರಾಟ, ಸಂಬಂಧಿತರಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. 2 ವರ್ಷದಿಂದ ಹೋರಾಟ ನಡೆಸಿದಾಗ ಬೂಸನಹಟ್ಟಿಯಲ್ಲಿ ಮನೆ, ಹಕ್ಕುಪತ್ರದ ಜೊತೆಗೆ 20 ಸಾವಿರ ರೂಪಾಯಿ ನೀಡುವ ಭರವಸೆ ನೀಡಲಾಗಿತ್ತು. ಆದರೆ, ಅದು ಈವರೆಗೆ ಕಾರ್ಯರೂಪಕ್ಕೆ ಬಂದಿಲ್ಲ. ಬೂಸನಹಟ್ಟಿಯಲ್ಲಿ 8+10 ಅಡಿ ಸುತ್ತಳತೆಯ ತಾತ್ಕಾಲಿಕ ಶೆಡ್‌ ಮಾಡಿಕೊಡುವುದಾಗಿ ಹೇಳಲಾಗಿದೆ. ಬೂಸನಹಟ್ಟಿ 9 ಕಿಲೋ ಮೀಟರ್‌ ದೂರ ಇದ್ದು, ಪ್ರತಿ ನಿತ್ಯ ಕೆಲಸ ಮಾಡುವರಿಗೆ
ಅನಾನುಕೂಲ ಆಗುತ್ತದೆ. ಹಾಗಾಗಿ ನಗರಕ್ಕೆ ಸಮೀಪ ಇರುವ ಕಡೆ ಮನೆ ಕಟ್ಟಿಸಿಕೊಡಬೇಕು ಎಂದು ಧರಣಿನಿರತರು ಒತ್ತಾಯಿಸಿದರು.

ನ. 13 ರಿಂದ ಅನಿರ್ದಿಷ್ಟಾವಧಿ ಹೋರಾಟ ಪ್ರಾರಂಭಿಸಿದ್ದ ಬೂಸನಹಟ್ಟಿ ಬಳಿ ಇರುವ 9 ಎಕರೆ ಜಾಗ ಬಿಟ್ಟರೆ ಬೇರೆ ಕಡೆ ಆಶ್ರಯ ಯೋಜನೆಯ ಜಾಗ ಬಿಟ್ಟರೆ ಬೇರೆ ಕಡೆ ಇಲ್ಲವೇ ಇಲ್ಲ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ(ಆ. 22) ಸಲ್ಲಿಸಲಾಗಿದ್ದ ಅರ್ಜಿಗೆ ಮಾಹಿತಿ ನೀಡಲಾಗಿತ್ತು. ರಸ್ತೆ ತಡೆಸಿದ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಆಯುಕ್ತ ಬಿ.ಎಚ್‌. ನಾರಾಯಣಪ್ಪ ಅದೇ ಮಾತನ್ನು ಪುನರುಚ್ಚರಿಸಿದ್ದರು. ಪಟ್ಟು ಹಿಡಿದಾಗ ಈ ಹಿಂದೆಯೇ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ಹಿಂಬರಹ(ನ.16)ದಲ್ಲಿ ಬೂಸನಹಟ್ಟಿ ಬಳಿ ಇರುವ 9 ಎಕರೆ ಜಾಗದ ಜೊತೆಗೆ ಯರಗುಂಟೆ ಸರ್ವೇ ನಂಬರ್‌ 144/2 ಎ ರಲ್ಲಿ 5 ಎಕರೆ 36 ಗುಂಟೆ, ಸರ್ವೇ ನಂಬರ್‌ 33/2 ರಲ್ಲಿನ 1 ಎಕರೆ 5 ಗುಂಟೆ ಜಾಗ ಇದೆ ಎಂದು ಮಾಹಿತಿ ನೀಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಶ್ರಯ ಯೋಜನೆಯಡಿ ಜಾಗ ಲಭ್ಯವಿದ್ದರೂ ಮಾಹಿತಿ ಹಕ್ಕು ಅರ್ಜಿಗೂ ಸುಳ್ಳು ಮಾಹಿತಿ ನೀಡಿರುವುದನ್ನ ನೋಡಿದರೆ ಸತ್ಯವನ್ನ ಮರೆ ಮಾಚಿ, ಜಾಗವನ್ನ ಬೇರೆಯವರಿಗೆ ನೀಡುವ ಹುನ್ನಾರ ಇರಬಹುದು ಎಂದೆನಿಸುತ್ತದೆ. ಹಾಗಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯ 1ನೇ ವಾರ್ಡ್‌ನ ಯರಗುಂಟೆ ಸರ್ವೇ ನಂಬರ್‌ 144/2 ಎ ರಲ್ಲಿ 5 ಎಕರೆ 36 ಗುಂಟೆ, ಸರ್ವೇ ನಂಬರ್‌ 33/2 ರಲ್ಲಿನ 1 ಎಕರೆ 5 ಗುಂಟೆ ಜಾಗದಲ್ಲೇ ರಾಮಕೃಷ್ಣ ಹೆಗಡೆ ನಗರದ 270-280, ಚಂದ್ರೋದಯ ನಗರದ 100-110 ಕುಟುಂಬಗಳಿಗೆ ಆಶ್ರಯ ಯೋಜನೆ ಮನೆ ಒದಗಿಸುವ ಬಗ್ಗೆ ಲಿಖೀತ ಭರವಸೆ ನೀಡಬೇಕು ಎಂದು ಪಟ್ಟು ಹಿಡಿದರು. 

ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌, ನಾಗರಿಕ ಮೂಲ ಸೌಕರ್ಯ ಹೋರಾಟ ವೇದಿಕೆ ಸಂಚಾಲಕ ಜೆ.
ಅಮಾನುಲ್ಲಾಖಾನ್‌, ಸಲೀಂಬಾಬ್‌, ಹಸೇನ್‌ ಸಾಬ್‌, ಖಾದರ್‌ ಬಾಷಾ, ಎಂ. ಟಿಪ್ಪುಸುಲ್ತಾನ್‌, ಯು.ಎಂ. ಮನ್ಸೂರ್‌ಅಲಿ, ಇನಾಯತ್‌ಅಲಿ, ಅಹಮ್ಮದ್‌ ಬಾಷಾ, ಅಕ್ರಮ್‌, ರಹಮತುಲ್ಲಾ ಇತರರು ಇದ್ದರು.

ಟಾಪ್ ನ್ಯೂಸ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.